ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿ ಯೋಜನೆ ಸಿದ್ಧಪಡಿಸಲು ಅಧಿಕಾರಿಗಳಿಗೆ ಅದೇಶ
ಹೊಸದಿಲ್ಲಿ : ಸುಡಾನ್ನಲ್ಲಿ ಆಂತರಿಕ ಸಂಘರ್ಷ ತೀವ್ರಗೊಡಿರುವ ಹಿನ್ನೆಲೆಯಲ್ಲಿ ಅಲ್ಲಿ ನೆಲೆಸಿರುವ ಸುಮಾರು 3 ಸಾವಿರ ಭಾರತೀಯರನ್ನು ಸೂಕ್ತ ಸಮಯ ನೋಡಿ ತೆರವುಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಕುರಿತ ಯೋಜನೆಗಳನ್ನು ಸಿದ್ಧಪಡಿಸಿ ಏರ್ಲಿಫ್ಟ್ಗೆ ಸಜ್ಜಾಗುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.
ಸುಡಾನ್ನಲ್ಲಿರುವ ಭಾರತೀಯರ ಸ್ಥಿತಿಗತಿಯ ಕುರಿತಾಗಿ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸಂಪುಟ ಸದಸ್ಯರು ಮತ್ತು ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದರು. ಈ ವೇಳೆ ಸುಡಾನ್ನಲ್ಲಿ ಉಂಟಾಗಿರುವ ಪ್ರಕ್ಷುಬ್ಧತೆಯ ಮಾಹಿತಿಯನ್ನು ಅಧಿಕಾರಿಗಳು ನೀಡಿದರು. ಅಲ್ಲಿ ಸಿಲುಕಿಕೊಂಡಿರುವ ಸುಮಾರು 3 ಸಾವಿರ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕುರಿತಾಗಿ ಗಮನ ಹರಿಸುವಂತೆ ಸೂಚಿಸಿದರು. ರಕ್ಷಣೆಗೆ ಅಗತ್ಯವಾಗಿರುವ ಎಲ್ಲಾ ಕ್ರಮಗಳನ್ನು ಕೂಡಲೇ ಕೈಗೊಳ್ಳಲು ಹಾಗೂ ರಕ್ಷಣಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗೆ ಸೂಚನೆ ನೀಡಿದರು ಎಂದು ಪ್ರಧಾನಮಂತ್ರಿ ಕಾರ್ಯಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.
ವರ್ಚುವಲ್ ಆಗಿ ನಡೆದ ಈ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್, ವಾಯುಪಡೆ, ನೌಕಾಪಡೆಯ ಮುಖ್ಯಸ್ಥರು, ವಿದೇಶಾಂಗ ಇಲಾಖೆಯ ಪ್ರಮುಖ ಅಧಿಕಾರಿಗಳು ಮತ್ತು ರಕ್ಷಣಾ ವಿಭಾಗದ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. ಗುಂಡಿನ ದಾಳಿಯಲ್ಲಿ ಕಳೆದ ವಾರ ಮೃತಪಟ್ಟ ಭಾರತೀಯ ಪ್ರಜೆ ಸಾವಿಗೀಡಾಗಿದ್ದು, ಈ ಹಿನ್ನೆಲೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ರೀತಿಯ ಸಹಾಯವನ್ನು ಒದಗಿಸುವಂತೆಯೂ ಅಧಿಕಾರಿಗಳಿಗೆ ಪ್ರಧಾನಿ ಒತ್ತಾಯಿಸಿದರು.
ಅಸ್ಥಿರ ಪರಿಸ್ಥಿತಿಯಲ್ಲಿ ಭಾರತೀಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಕಸ್ಮಿಕ ಸ್ಥಳಾಂತರಿಸುವ ಯೋಜನೆಗಳನ್ನು ರಚಿಸಲು ಮತ್ತು ಇತರ ಆಯ್ಕೆಗಳಿಗಾಗಿ ಪರಿಶೀಲಿಸಿ ಎಂದು ಪ್ರಧಾನಿ ಮೋದಿ ಸೂಚನೆಗಳನ್ನು ನೀಡಿದರು. ಸೂಡಾನ್ನ ಗಡಿಯಲ್ಲಿರುವ ರಾಷ್ಟ್ರಗಳೊಂದಿಗೆ ಮತ್ತು ಅಲ್ಲಿ ವಾಸಿಸುವ ನಿವಾಸಿಗಳ ಗಣನೀಯ ಪ್ರಮಾಣದ ಸಂಖ್ಯೆಯನ್ನು ಹೊಂದಿರುವ ರಾಷ್ಟ್ರಗಳೊಂದಿಗೆ ಬಲವಾದ ಸಂಬಂಧವನ್ನು ಇಟ್ಟುಕೊಳ್ಳುವ ಅಗತ್ಯವನ್ನು ಹೇಳಿದರು.














































































