ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ರಣಹದ್ದು ಬಡಿದು ವಿಂಡೋ ಗ್ಲಾಸ್​ ಪುಡಿಪುಡಿ

ಕೋಲಾರ: ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಜೊತೆಗೆ ಇಂದು ಕಾಂಗ್ರೆಸ್​ನ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಡಿಕೆ ಶಿವಕುಮಾರ್ ಮುಳುಬಾಗಿಲಿಗೆ ತೆರಳಲು ಹೆಚ್​ಎಎಲ್​ ಏರ್​ಪೋರ್ಟ್​​ಗೆ ಬಂದಿದ್ದರು. ಅಲ್ಲಿಂದ ಮುಳುಬಾಗಿಲಿಗೆ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ಗೆ ರಣಹದ್ದು ಬಡಿದಿದ್ದು, ಪರಿಣಾಮವಾಗಿ ವಿಂಡೋ ಗ್ಲಾಸ್​ ಪುಡಿಪುಡಿಯಾಗಿದ್ದು ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶವಾಗಿದೆ. ಯಾವುದೇ ಅನಾಹುತ ಸಂಭವಿಸಿಲ್ಲ. ಬಳಿಕ ಡಿ.ಕೆ.ಶಿವಕುಮಾರ್​ ಹೆಚ್​ಎಎಲ್​ ಏರ್​ಪೋರ್ಟ್​​ಗೆ ಹಿಂದಿರುಗಿದ್ದಾರೆ.







































































error: Content is protected !!
Scroll to Top