ಕಾರ್ಕಳ : ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಶಾಖೆಯ ನೇತೃತ್ವದಲ್ಲಿ ಸರಕಾರಿ ಹಾಗೂ ಖಾಸಗಿ ಆರೋಗ್ಯ ಇಲಾಖೆ, ರೋಟರಿ ಕ್ಲಬ್, ಜೆಸಿಐ ಹಾಗೂ ಅಜ್ಜರಕಾಡು ಜಿಲ್ಲಾ ರಕ್ತ ನಿಧಿ ಕೇಂದ್ರದ ಆಶ್ರಯದಲ್ಲಿ ಜೂ. 4 ರಂದು ಎಸ್.ವಿ.ಟಿ ಕಾಲೇಜಿನ ಅಂಡಾರು ರುಕ್ಮಿಣಿ ಕಿಣಿ ಸಭಾ ಭವನದಲ್ಲಿ ಬೆಳಿಗ್ಗೆ 9:30 ರಿಂದ 12:30ರವರೆಗೆ ಬೃಹತ್ ರಕ್ತ ದಾನ ಶಿಬಿರ ನಡೆಯಲಿದೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.






























