ಬೈಕ್‌ಗೆ ಬಸ್‌ ಡಿಕ್ಕಿ: ಕಾಲೇಜು ವಿದ್ಯಾರ್ಥಿ ಸಾವು

ಓವರ್‌ಟೇಕ್‌ ಧಾವಂತಕ್ಕೆ ವಿದ್ಯಾರ್ಥಿಯ ಜೀವ ಬಲಿ

ಮೂಡುಬಿದಿರೆ: ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರಿನ ಹಂಡೇಲು ಎಂಬಲ್ಲಿ ಖಾಸಗಿ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್‌ ಸವಾರ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಜೂ. 5ರ ಸಂಜೆ ಸಂಭವಿಸಿದೆ.
ಆಳ್ವಾಸ್‌ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಎಡಪದವು ಸ್ವರ್ಣೋದ್ಯಮಿ ಚಂದ್ರಹಾಸ ಆಚಾರ್ಯ ಅವರ ಪುತ್ರ ಕಾರ್ತಿಕ್‌ ಆಚಾರ್ಯ (19) ಮೃತಪಟ್ಟ ವಿದ್ಯಾರ್ಥಿ. ಸಹಸವಾರ ಅದೇ ಕಾಲೇಜಿನ ವಿದ್ಯಾರ್ಥಿ ಹರ್ಷ ಎಂಬವರು ಚಿಕ್ಕಪುಟ್ಟ ಗಾಯವಾಗಿ ಪಾರಾಗಿದ್ದಾರೆ.
ಕಾರ್ತಿಕ್‌ ಕಾಲೇಜು ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಮಂಗಳೂರಿನಿಂದ ಮೂಡುಬಿದಿರೆಗೆ ಬರುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ಮತ್ತೊಂದು ಬಸ್ಸನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ತೀರ ಬಲಭಾಗಕ್ಕೆ ಚಲಿಸಿ ಮುಂಭಾಗದಲ್ಲಿ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕಾರ್ತಿಕ್‌ ಹೆಲ್ಮೆಟ್‌ ಧರಿಸಿದ್ದರೂ ಪ್ರಾಣ ಉಳಿಯಲಿಲ್ಲ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.









































































































































































error: Content is protected !!
Scroll to Top