ನಾಳೆ ಸಿದ್ದರಾಮಯ್ಯಗೆ ಪುಣೆಯಲ್ಲಿ ಸನ್ಮಾನ

ಎನ್‌ಸಿಪಿ ನಾಯಕ ಶರದ್‌ ಪವಾರ್‌ ನೇತೃತ್ವದಲ್ಲಿ ಅಭಿನಂದನೆ

ಬೆಂಗಳೂರು: ಎನ್‌ಸಿಪಿ ಮುಖ್ಯಸ್ಥ ಮತ್ತು ರಾಜ್ಯಸಭಾ ಸದಸ್ಯ ಶರದ್ ಪವಾರ್ ನೇತೃತ್ವದಲ್ಲಿ ಧಂಗರ್ ಸಮುದಾಯ ಭಾನುವಾರ ಪುಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಿದೆ. ದೊರೆ ಅಹಲ್ಯಾದೇವಿ ಜನ್ಮದಿನದ ಸಂದರ್ಭದಲ್ಲಿ ಈ ಸನ್ಮಾನ ನಡೆಯಲಿದೆ.
ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಪವಾರ್‌ ಆಹ್ವಾನ ನೀಡಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಇತ್ತೀಚಿನ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಜಾತ್ಯತೀತ ಶಕ್ತಿಗಳ ಬಲವನ್ನು ಪ್ರದರ್ಶಿಸಿದೆ ಮತ್ತು ರಾಷ್ಟ್ರದ ರಾಜಕೀಯ ಬದಲಾವಣೆಗೆ ದಾರಿ ಮಾಡಿಕೊಟ್ಟಿವೆ ಎಂದು ಅವರು ಹೇಳಿದ್ದಾರೆ.
ಚುನಾವಣೆ ಪರಿಣಾಮ ಮಹಾರಾಷ್ಟ್ರಕ್ಕೂ ವ್ಯಾಪಿಸಿದ್ದು, ಅಲ್ಲಿನ ಜನರು ತಮ್ಮನ್ನು ಸನ್ಮಾನಿಸುವ ಉತ್ಸಾಹದಲ್ಲಿದ್ದಾರೆ. ಪುಣೆ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಮತ್ತು ಅಹಲ್ಯಾದೇವಿ ವಿಕಾಸ ಪ್ರತಿಷ್ಠಾನದ ಅಧ್ಯಕ್ಷ ವಿಶ್ವಾಸ್ ದಿಯೊಕಾಟೆ ನೇತೃತ್ವದ ನಿಯೋಗ ಅಹಲ್ಯಾದೇವಿ ಜನ್ಮ ದಿನಾಚರಣೆಯ ಆಹ್ವಾನ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.































































































































































error: Content is protected !!
Scroll to Top