ಸೆ. 24 ರಂದು ಪಡುಕುತ್ಯಾರು ಮಹಾಸಂಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ಉಡುಪಿ : ಪಡುಕುತ್ಯಾರಿನಲ್ಲಿ ಚಾತುರ್ಮಾಸ್ಯ ವ್ರತಾನುಷ್ಠರಾಗಿರುವ ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಲು ಸೆ. 24ರಂದು ಮಧ್ಯಾಹ್ನ 1.00 ಗಂಟೆಗೆ ಭಾರತ ಸರಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಆಗಮಿಸಲಿದ್ದಾರೆ. ಮಹಾಸಂಸ್ಥಾನದ ಮುಂದಿನ ಯೋಜನೆಗಳು ಹಾಗೂ ಪಿ. ಎಂ. ವಿಶ್ವಕರ್ಮ ಯೋಜನೆಯಲ್ಲಿ ವಿಶ್ವಕರ್ಮ ಸಮಾಜದ ಬೇಡಿಕೆಗಳ ಬಗ್ಗೆ ಆನೆಗುಂದಿ ಪ್ರತಿಷ್ಠಾನದ ವತಿಯಿಂದ ಸಚಿವರಿಗೆ ಮನವಿಯನ್ನು ಸಲ್ಲಿಸಲಾಗುವುದು.

ಈ ಸಂದರ್ಭದಲ್ಲಿ ಪೂರ್ವಾಹ್ನ 12 ಗಂಟೆಗೆ ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ತಾಳಮದ್ದಲೆ ತಂಡದಿಂದ ಕರ್ಣಪರ್ವ ಯಕ್ಷಗಾನ ತಾಳಮದ್ದಲೆಯು ಜರುಗಲಿರುವುದು. ಸಮಾಜ ಬಾಂಧವರು, ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿಯ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಹಾಗೂ ಶ್ರೀಮತ್ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.































































error: Content is protected !!
Scroll to Top