ಉಡುಪಿ : ಉಡುಪಿ ತಾಲೂಕಿನ ನೇಜಾರು ಸಮೀಪದ ನ. 12ರಂದು ಹಂತಕನೊಬ್ಬ ಮನೆಯೊಂದಕ್ಕೆ ನುಗ್ಗಿ, ಓರ್ವ ಮಹಿಳೆ ಆಕೆಯ 11ವರ್ಷದ ಮಗ, ಇಬ್ಬರು ಹೆಣ್ಣುಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ನೆ. ಈ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ಆರೋಪಿ ಪತ್ತೆಯಾಗಿ 5 ತಂಡಗಳನ್ನು ರಚನೆ ಮಾಡಲಾಗಿದೆ.
ಹಂತಕ ನಾಲ್ವರಿಗೂ ಒಂದೇ ರೀತಿಯಲ್ಲಿ ಚೂರಿ ಇರಿದು ಹತ್ಯೆ ಮಾಡಿರೋದು ಪತ್ತೆಯಾಗಿದೆ. ಎದೆ ಮತ್ತು ಹೊಟ್ಟೆ ಭಾಗಕ್ಕೆ ಇರಿದು ಕೊಲೆ ಮಾಡಿದ್ದಾನೆ. ಯಾವ ಕಾರಣಕ್ಕೆ ಈ ಕೊಲೆ ನಡೆದಿದೆ. ಪರಿಚಯಸ್ಥನೇ ಕೊಲೆ ಮಾಡಿದ್ದಾನಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರಕರಣದ ತನಿಖೆಗೆ ಡಿವೈಎಸ್ಪಿ ನೇತೃತ್ವದಲ್ಲಿ 5 ತಂಡ ರಚನೆ ಮಾಡಲಾಗಿದೆ.
ಕೊಲೆಯಾದ ಹಸೀನಾ ಪತಿ ದುಬೈನಲ್ಲಿ ಕೆಲಸ ಮಾಡುತ್ತಿದ್ದರೆ, ಪುತ್ರಿ ಅಫ್ನಾನ್ ಬೆಂಗಳೂರಿನಲ್ಲಿ ಏರ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಹಬ್ಬದ ರಜೆ ಕಾರಣಕ್ಕೆ ನಿನ್ನೆಯಷ್ಟೇ ಊರಿಗೆ ಬಂದಿದ್ದಳು. ಹೀಗಾಗಿ ಅಫ್ನಾನ್ನನ್ನ ಹುಡುಕಿಕೊಂಡು ಬೆಂಗಳೂರಿನಿಂದ ಹಂತಕ ಬಂದಿದ್ದನೇ? ಒಬ್ಬಳ ಮೇಲಿನ ದ್ವೇಷಕ್ಕೆ ಉಳಿದ ಮೂವರನ್ನ ಕೊಂದು ಹಾಕಿದ್ನಾ ಅನ್ನೋ ಅನುಮಾನ ಇದೆ. ತನಿಖೆಯಿಂದಷ್ಟೇ ಎಲ್ಲವೂ ಬಯಲಾಗಬೇಕಿದೆ.

ಆರೋಪಿ ಆಟೋದಲ್ಲಿ ಬಂದಿದ್ದ ವಿಡಿಯೋ ನಿನ್ನೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದೀಗ ಆತ ಬೈಕ್ನಲ್ಲಿ ಡ್ರಾಪ್ ಪಡೆದುಕೊಂಡು ಬಂದಿದ್ದ ದೃಶ್ಯವೂ ಲಭ್ಯವಾಗಿದೆ. ಸಂತೆಕಟ್ಟೆ ಜಂಕ್ಷನವರೆಗೆ ಆತ ಬೇರೋಬ್ಬರ ಬೈಕ್ನಲ್ಲಿ ಡ್ರಾಪ್ ಪಡೆದುಕೊಂಡಿದ್ದ. ನಿನ್ನೆ ಅನುಮಾನಾಸ್ಪದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆದ್ರೆ, ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಅವರನ್ನು ಬಿಟ್ಟು ಕಳುಹಿಸಿದ್ದಾರೆ.







































































