ಕಳೆದ ವರ್ಷವೂ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕ
ಸುಳ್ಯ : ಎಸೆಸೆಲ್ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 15 ರಂದು ಸುಳೈ ಎಲಿಮಲೆಯಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಎಲಿಮಲೆ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಮಂತ್ ಎಂದು ಗುರುತಿಸಲಾಗಿದೆ.
ಮೂಲತಃ ಚೊಕ್ಕಾಡಿಯವರಾಗಿರುವ ವಿದ್ಯಾರ್ಥಿ ಕುಟುಂಬ ಪ್ರಸ್ತುತ ನೆಲ್ಲೂರು ಕೆಮ್ರಾಜೆ ಗ್ರಾಮದ ಹೊಟ್ಟುಚೋಡಿಯಲ್ಲಿ ನೆಲೆಸಿದ್ದರು. ಶಮಂತ್ ಇಂದು ಬೆಳಿಗ್ಗೆ6 ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ಬಂದು ಶಾಲಾ ಆವರಣದ ಶೌಚಾಲಯದ ಹಿಂಬದಿ ಗಿಡವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳೀಯರು ವಿಷಯ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈತ ಕಳೆದ ವರ್ಷ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರವಾಗಿದ್ದ ಈತನ ಚಿಕಿತ್ಸೆಗಾಗಿ ನೂರಾರು ದಾನಿಗಳು ಹಣಕಾಸು ನೆರವು ನೀಡಿದ್ದರು.




































