ಕಡಬ ಆ್ಯಸಿಡ್ ದಾಳಿ: ಸಂತ್ರಸ್ತ ಬಾಲಕಿಯರಿಗೆ ತಲಾ 4 ಲಕ್ಷ ರೂ ಪರಿಹಾರ: ಮಹಿಳಾ ಆಯೋಗದ ಅಧ್ಯಕ್ಷೆ

ಮಂಗಳೂರು : ಕಡಬದ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ಕಡಬದಲ್ಲಿ ಮಾ. 4ರಂದು ಕಿಡಿಗೇಡಿಯಿಂದ ಆ್ಯಸಿಡ್​​ ದಾಳಿಗೊಳಗಾಗಿ ನಗರದ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾ. 5 ರಂದು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಬಳಿಕ ಸಂತ್ರಸ್ತೆಯರು ಹಾಗೂ ಪೋಷಕರಿಗೆ ಸಾಂತ್ವನ ಹೇಳಿದರು.













































































error: Content is protected !!
Scroll to Top