ರಾಮೇಶ್ವರಂ ಕೆಫೆ ಸ್ಫೋಟ : ಶಂಕಿತನ ಇನ್ನೊಂದು ಚಿತ್ರ ಬಿಡುಗಡೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಆರೋಪಿ ಬಗ್ಗೆ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಬುಧವಾರ 10 ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ. ಎನ್​ಐಎ ಬಿಡುಗಡೆ ಮಾಡಿರುವ ಭಾವಚಿತ್ರದಲ್ಲಿ ವ್ಯಕ್ತಿಯ ಅರ್ಧ ಮುಖ ಮಾತ್ರ ಕಂಡಿದೆ. ಹೀಗಾಗಿ ಅಧಿಕಾರಿಗಳ ತನಿಖೆಗೆ ಸಹಾಯವಾಗಲೆಂದು ಚಿತ್ರಗಾರರೊಬ್ಬರು ಶಂಕಿತ ಆರೋಪಿಯ ಪೂರ್ತಿ ಮುಖದ ಕಲ್ಪಿತ ಚಿತ್ರ ಬಿಡಿಸಿದ್ದಾರೆ.

ಎನ್​ಐಎ ಬಿಡುಗಡೆ ಮಾಡಿದ ಸಿಸಿಟಿವಿ ಭಾವಚಿತ್ರವನ್ನು ಆಧಾರವಾಗಿಟ್ಟುಕೊಂಡು ಕಲಾವಿದ ಹರ್ಷ ಎಂಬವರು ಆರೋಪಿಯ ಪೂರ್ಣ ಮುಖವನ್ನು ಊಹಿ ಚಿತ್ರ ಬಿಡಿಸಿ ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ. ಶಂಕಿತ ಉಗ್ರ ಮಾಸ್ಕ್ ಧರಿಸಿದ ರೀತಿಯಲ್ಲಿ ಹಾಗೂ ಮಾಸ್ಕ್ ಇಲ್ಲದೆ ಟೋಪಿ, ಕನ್ನಡಕ ಧರಿಸಿದ ರೀತಿ ಚಿತ್ರ ಬಿಡಿಸಿದ್ದಾರೆ. ಈ ಕಲ್ಪಿತ ಸ್ಕೆಚ್ ತನಿಖೆಗೆ ಸಹಾಯವಾಗಬಹುದೆಂದು ಬೆಂಗಳೂರು ಪೊಲೀಸ್​ ಮತ್ತು ಎನ್​​ಐಎಗೆ ಟ್ಯಾಗ್​ ಮಾಡಿದ್ದಾರೆ.

ರಾಮೇಶ್ವರಂ ಕೆಫೆಯ ಬಾಂಬ್ ಸ್ಪೋಟದ ಶಂಕಿತ ವ್ಯಕ್ತಿಯ ಮಾಸ್ಕ್ ಇಲ್ಲದ ಫೋಟೋವನ್ನು ಎನ್ಐಎ ರಿಲೀಸ್ ಮಾಡಿದ್ದು, ಶಂಕಿತ ಬಾಂಬರ್ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಎನ್ಐಎ ಘೋಷಿಸಿದೆ. ಮಾಹಿತಿದಾರರ ಗುರುತನ್ನು ಗೌಪ್ಯವಾಗಿ ಇರಿಸಲಾಗುವುದು ಎಂದು ಎನ್ಐಎ ಹೇಳಿದೆ. ಶಂಕಿತ ಉಗ್ರನ ಸುಳಿವು ಸಿಕ್ಕಿದರೆ 080-29510900, 8904241100 ಸಂಖ್ಯೆಗೆ ಕರೆ ಮಾಡುವಂತೆ ಎನ್ಐಎ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. Info.blr.nia@gov.inಗೂ ಮೇಲ್ ಮಾಡಿ ಶಂಕಿತನ ಮಾಹಿತಿಯನ್ನು ಅಧಿಕಾರಿಗಳ ಜೊತೆ ಹಂಚಿಕೊಳ್ಳಬಹುದಾಗಿದೆ.
NIA ಅಧಿಕಾರಿಗಳು ಮಾರ್ಚ್ 05 ರಂದು ಕೆಫೆಗೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದರು. ಕ್ಯಾಶ್ ಕೌಂಟರ್, ಸಿಸಿಕ್ಯಾಮರಾ ಪರಿಶೀಲನೆ ನಡೆಸಿ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಪೊಲೀಸರು ಸಹ ಸ್ಥಳದಲ್ಲಿ ಕಲೆ ಹಾಕಿರುವ 38 ಸ್ಯಾಂಪಲ್‌ಗಳ ಮಾಹಿತಿಯನ್ನು NIA ಅಧಿಕಾರಿಗಳಿಗೆ ನೀಡಿದ್ದರು.

ಇನ್ನು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್​ಐಎ ಅಧಿಕಾರಿಗಳು ಎಲ್ಲೆಡೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಜೈಲಿನಲ್ಲಿ ಸಹ ಕೈದಿಗಳನ್ನು ಸೆಳೆದು ಉಗ್ರ ಕೃತ್ಯಕ್ಕೆ ಬಳಕೆಯ ಮಾಹಿತಿ ಮೇರೆಗೆ ಎನ್​ಎಐ ಅಧಿಕಾರಿಗಳ ಮತ್ತೊಂದಿಷ್ಟು ತಂಡ ದೇಶಾದ್ಯಂತ ಹಲವೆಡೆ ಭರ್ಜರಿ ಕಾರ್ಯಾಚರಣೆ ನಡೆಸಿದವು.

































































































error: Content is protected !!
Scroll to Top