ಉತ್ತರ ಪ್ರದೇಶ : ಗಾಜಿಪುರದಲ್ಲಿ ಭಾರಿ ಅಪಘಾತ ಸಂಭವಿಸಿದೆ, ಬಸ್ ಮೇಲೆ ಹೈ ಟೆನ್ಷನ್ ತಂತಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, 6 ಮಂದಿ ಸಜೀವ ದಹನವಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸ್ವಲ್ಪ ಸಮಯದಲ್ಲೇ ಬೆಂಕಿ ಭೀಕರ ಸ್ವರೂಪ ಪಡೆದುಕೊಂಡಿದ್ದು, ಬಸ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಮಾಹಿತಿ ಪ್ರಕಾರ ಬೆಂಕಿಯಲ್ಲಿ ಆರು ಮಂದಿ ಸಜೀವ ದಹನವಾಗಿದ್ದಾರೆ. ಈ ಅವಘಡದಲ್ಲಿ ಹೆಚ್ಚಿನ ಸಾವು ನೋವು ಸಂಭವಿಸಿರು ಸಾಧ್ಯತೆ ಇದೆ.
ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಮರ್ದಾದಲ್ಲಿ ಅಪಘಾತ ಸಂಭವಿಸಿದೆ. ಡಿಎಂ, ಎಸ್ಪಿ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಬಸ್ನಲ್ಲಿ 35ಕ್ಕೂ ಹೆಚ್ಚು ಮಂದಿ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಪಂಧಿಸಿ, ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.







































