ಕಾರ್ಕಳ : ಮಾನಸಿಕವಾಗಿ ನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 11ರಂದು ಹಿರ್ಗಾನದಲ್ಲಿ ಸಂಭವಿಸಿದೆ. ಸುನೀಲ್ (39) ಆತ್ಮಹತ್ಯೆಗೆ ಶರಣಾದವರು. ಇವರು ವಿಪರೀತ ಶರಾಬು ಕುಡಿಯುತ್ತಿದ್ದು, ಶರಾಬು ಕುಡಿಯುವುದನ್ನು ಬಿಟ್ಟ ಬಳಿಕ ಮಾನಸಿಕವಾಗಿ ಅಸ್ವಸ್ಥಗೊಂಡಿದ್ದರು. ಇದರಿಂದಾಗಿ ಮನನೊಂದು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಾನಸಿಕವಾಗಿ ನೊಂದು ವ್ಯಕ್ತಿ ಆತ್ಮಹತ್ಯೆ

































