ಪ್ರಧಾನ ಕಾರ್ಯದರ್ಶಿಯಾಗಿ ದೀಕ್ಷಿತಾ ಶೆಟ್ಟಿ ಬೈಲೂರು – ವಿನುತಾ ಆಚಾರ್ಯ ಈದು
ಕಾರ್ಕಳ : ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಮುಡಾರು ಪಂಚಾಯತ್ ಸದಸ್ಯೆ ವಿನಯಾ ಡಿ. ಬಂಗೇರ, ಪ್ರಧಾನ ಕಾರ್ಯದರ್ಶಿಯಾಗಿ ಬೈಲೂರು ಗ್ರಾ.ಪಂ. ಸದಸ್ಯೆ ದೀಕ್ಷಿತಾ ಶೆಟ್ಟಿ ಬೈಲೂರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊಸ್ಮಾರು ಒಕ್ಕೂಟದ ಅಧ್ಯಕ್ಷೆ, ಈದು ಗ್ರಾಮದ ವಿನುತಾ ಆಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.







































