ಕಮಲ ಬಿಟ್ಟು ಕೈ ಹಿಡಿಯಲಿದ್ದಾರೆಯೇ ಡಿವಿ – ಎಸ್ !

ಬೆಂಗಳೂರು : ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರು ಬಿಜೆಪಿಯನ್ನು ತೊರೆಯುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲ್ಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಕಾಂಗ್ರೆಸ್‌ ನಾಯಕರು ನನ್ನನ್ನು ಸಂಪರ್ಕಿಸಿದ್ದಾರೆ ಎಂದು ಡಿವಿಎಸ್‌ ಹೇಳಿರುವುದು ರಾಜ್ಯಾದ್ಯಂತ ಕುತೂಹಲ ಮೂಡಿಸಿದೆ.

ಮೈಸೂರಿನಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರುದ್ಧ ಡಿವಿ ಸದಾನಂದಗೌಡ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್‌ ನಾಯಕರು ಡಿವಿ ಸದಾನಂದಗೌಡ ಜೊತೆ ಮಾತುಕತೆ ನಡೆಸುತ್ತಿದ್ದು, ಒಂದೆರಡು ದಿನದಲ್ಲಿ ಡಿವಿ ಸದಾನಂದಗೌಡರು ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಘೋಷಣೆ ಮಾಡುವ ನಿರೀಕ್ಷೆ ಇದೆ.

ಸದಾನಂದಗೌಡ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿದ್ದು, ಈ ಹಿಂದೆ ಮುಖ್ಯಮಂತ್ರಿಯಾಗಿಯೂ ಆಗಿದ್ದರು. ಜೊತೆಗೆ ಎನ್‌ಡಿಎ ಅವಧಿಯಲ್ಲಿ ರೈಲ್ವೇ, ಕಾನೂನು ಮತ್ತು ಸಂಸದೀಯ ಇಲಾಖೆ, ಸಾಂಖ್ಯಿಕ ಮತ್ತು ಯೋಜನೆ ಜಾರಿ ಇಲಾಖೆಯ ಕೇಂದ್ರ ಸಚಿವರಾಗಿಯೂ ಡಿವಿ ಸದಾನಂದಗೌಡ ಕಾರ್ಯನಿರ್ವಹಿಸಿದ್ದಾರೆ.

ಕಾಂಗ್ರೆಸ್‌ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದ್ದು, ಸಮರ್ಥ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ. ಈ ಹಿನ್ನೆಲೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹಾಗೂ ಮತ್ತಿತರ ನಾಯಕರು ಡಿವಿ ಸದಾನಂದಗೌಡ ಅವರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದುಬಂದಿದೆ.
ಮಾರ್ಚ್ 19 ರಂದು ಸದಾನಂದಗೌಡ ಸುದ್ದಿಗೋಷ್ಟಿ ಕರೆದಿದ್ದು, ತಮ್ಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.





















































































































































error: Content is protected !!
Scroll to Top