ಮಾ. 29 : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಕಾರ್ಕಳ : ಲೋಕಸಭಾ ಚುನಾವಣಾ ಪ್ರಯುಕ್ತ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಮಾ. 29ರಂದು ಬೆಳಿಗ್ಗೆ 10:30ಕ್ಕೆ ಪೆರ್ವಾಜೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ನೇತೃತ್ವದಲ್ಲಿಯೂ ಪ್ರಚಾರ ಸಭೆ ಮತ್ತು ಕಾರ್ಯಕರ್ತರ ಸಮಾವೇಶ ಮಧ್ಯಾಹ್ನ 12 ಗಂಟೆಗೆ ಹೆಬ್ರಿ ಬಂಟರ ಭವನದಲ್ಲಿ ನಡೆಯಲಿರುವುದು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





























































































































error: Content is protected !!
Scroll to Top