ಚುನಾಯಿತ ಪ್ರತಿನಿಧಿಗಳ ಸಭೆ – ಉದ್ಯಮಿಗಳ ಸಭೆ
ಕಾರ್ಕಳ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಏ. 19ರಂದು ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ಬೆಳಗ್ಗೆ 8.30ರಿಂದ ಪ್ರವಾಸ ಆರಂಭವಾಗಲಿದ್ದು, 11-30ಕ್ಕೆ ಕಾರ್ಕಳ ಶಾಸಕರ ಜನಸೇವಾ ಕಚೇರಿ ವಿಕಾಸದಲ್ಲಿ ಚುನಾಯಿತ ಜನಪ್ರತಿನಿಧಿಗಳ ಸಭೆ ನಡೆಯಲಿದ್ದು, ಸಂಜೆ 6 ಗಂಟೆಗೆ ಹೋಟೆಲ್ನಲ್ಲಿ ಉದ್ಯಮಿಗಳ ಸಭೆ ನಡೆಯಲಿದೆ. ಸಭೆಯಲ್ಲಿ ಅಭ್ಯರ್ಥಿಯೊಂದಿಗೆ ಶಾಸಕ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಹಾಗೂ ಪಕ್ಷದ ಹಿರಿಯರು ಭಾಗವಹಿಸಲಿದ್ದಾರೆ ಎಂದು ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.