ಮಂಗಳೂರಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ಹೊಡೆದಾಟ

ಮಂಗಳೂರು : ಲೋಕಸಭಾ ಚುನಾವಣೆ ಪ್ರಚಾರ ನಡೆಸುವ ವಿಚಾರಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿಕೊಂಡು ಹೊಡೆದಾಡಿದ ಘಟನೆ ನಿನ್ನೆ ಮಂಗಳೂರಿನ ಉರ್ವ ಸಮೀಪ ಚಿಲಿಂಬಿಯಲ್ಲಿರುವ ಸಾಯಿ ಮಂದಿರದ ಎದರುರು ಸಂಭವಿಸಿದೆ.
ರಾಮನವಮಿ ಹಿನ್ನೆಲೆಯಲ್ಲಿ ಸಾಯಿ ಮಂದಿರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಭಕ್ತರ ಸಂಖ್ಯೆ ಅಧಿಕವಾಗಿತ್ತು. ಇದೇ ಸಂದರ್ಭ ಮಂದಿರದ ಎದುರಿನ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತ ತೆರಳುತ್ತಿದ್ದರು. ಇದನ್ನು ಕಂಡ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಮಂದಿರದ ಬಳಿ ಪ್ರಚಾರ ನಡೆಸದಂತೆ ಸೂಚಿಸಿದ್ದು ವಾಗ್ವಾದಕ್ಕೆ ಕಾರಣವಾಯಿತು.

ಕೆಲ ಸಮಯದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು ಸೇರಿದ್ದು, ಪರಸ್ಪರ ಮಾತಿನ ಚಕಮಕಿ, ನೂಕಾಟ-ತಳ್ಳಾಟ ನಡೆಸಿದ್ದಾರೆ. ಎರಡು ಪಕ್ಷಗಳ ಕಾರ್ಯಕರ್ತರ ಮಧ್ಯೆ ಹೊಡೆದಾಟ ಶುರುವಾದಾಗ ಶಾಸಕ ವೇದವ್ಯಾಸ ಕಾಮತ್ ಮತ್ತು ಕಾಂಗ್ರೆಸ್ ಮುಖಂಡ ಮಿಥುನ್ ರೈ ಸ್ಥಳಕ್ಕಾಗಮಿಸಿ ಕಾರ್ಯಕರ್ತರನ್ನು ಸಮಾಧಾನಪಡಿಸಿದ್ದಾರೆ. ಉರ್ವ ಇನ್ಸ್‌ಪೆಕ್ಟರ್ ಭಾರತಿ ಸ್ಥಳಕ್ಕೆ ಆಗಮಿಸಿ ಜನರನ್ನು ಚದುರಿಸಿದ್ದಾರೆ.























































































































































error: Content is protected !!
Scroll to Top