ವೀಡಿಯೊ ಪ್ರಕರಣದ ಸತ್ಯ ಹೊರಬರಲು ಡಿಕೆಶಿ ಬಿಡುವುದಿಲ್ಲ : ಯತ್ನಾಳ ಆರೋಪ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪೂರ್ಣವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಿಡಿತದಲ್ಲಿದೆ. ಪೆನ್‌ಡ್ರೈವ್‌ ಬಹಿರಂಗವಾಗಿರುವುದರ ಹಿಂದೆ ಡಿಕೆ ಬ್ರದರ್ಸ್‌ ಕೈವಾಡವಿದ್ದು, ಅವರು ಸತ್ಯ ಹೊರಬರುವುದಕ್ಕೆ ಬಿಡುವುದಿಲ್ಲ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ ಆರೋಪಿಸಿದ್ದಾರೆ.
ವಿಜಯಪುರದಲ್ಲಿ ಮತ ಚಲಾಯಿಸಿದ ಬಳಿಕ ಮಾತನಾಡಿದ ಯತ್ನಾಳ, ಶೀಘ್ರದಲ್ಲೇ ರಾಜ್ಯದಲ್ಲಿ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್ ಆಗಲಿದೆ ಎಂದು ಹೇಳಿದ್ದಾರೆ. ಇದು ಯಾರಿಗೆ ಸಂಬಂಧಿಸಿದ್ದು, ಯಾರು ಮಾಡುತ್ತಿದ್ದಾರೆ ಇತ್ಯಾದಿ ಯಾವ ವಿವರವನ್ನೂ ಅವರು ಬಹಿರಂಗಪಡಿಸಿಲ್ಲ.
ಪ್ರಜ್ವಲ್ ಅಶ್ಲೀಲ ವಿಡಿಯೋ ಬಹಿರಂಗವಾಗಿದ್ದರ ಹಿಂದೆ ಡಿಸಿಎಂ ಡಿ.ಕೆ ಶಿವಕುಮಾರ್ ಕೈವಾಡವಿದೆ. ಸೋಮವಾರ ವಕೀಲ ಬಿಜೆಪಿ ನಾಯಕ ದೇವೇರಾಜೇ ಗೌಡರು ಆರೋಪಿಸಿದಂತೆ ಪ್ರಕರಣದಲ್ಲಿ ಡಿಕೆಶಿ ಕೈವಾಡ ಇರುವುದು ಸ್ಪಷ್ಟ. ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್​​ಐಟಿ ಸಂಪೂರ್ಣವಾಗಿ ಡಿ.ಕೆ ಶಿವಕುಮಾರ್ ವಶದಲ್ಲಿದೆ. ಅವರ ಅಣತಿಯಂತೆ ಕೆಲಸ ಮಾಡುತ್ತದೆ ಎಂದು ಯತ್ನಾಳ್ ಹೇಳಿದ್ದಾರೆ.
ಹೇಳಿದ್ದಾರೆ.























































































































































error: Content is protected !!
Scroll to Top