ಕಾರ್ಕಳ : ನಿಂಜೂರು ನಡಿಮನೆ ಜಗನ್ನಾಥ ಶೆಟ್ಟಿ ಅವರು ಅ. 20ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಅವರು ಅಕ್ರಮ ಸಕ್ರಮ ಸಮಿತಿಯ ಮಾಜಿ ಸದಸ್ಯರಾಗಿ, ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಅಂತ್ಯಸಂಸ್ಕಾರ ಅ.21ರ ಬೆಳಿಗ್ಗೆ 10.30 ಗಂಟೆಗೆ ನಿಂಜೂರಿನ ಸ್ವಗೃಹದಲ್ಲಿ ನಡೆಯಲಿದೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ.
ನಿಂಜೂರು ಜಗನ್ನಾಥ ಶೆಟ್ಟಿ ನಿಧನ


































