ನೀರೆಯಲ್ಲಿ ಅಪಘಾತ – ನಿವೃತ್ತ ಬ್ಯಾಂಕ್‌ ಉದ್ಯೋಗಿ ಸಾವು

ಕಾರ್ಕಳ : ಉಡುಪಿ – ಕಾರ್ಕಳ ರಾಜ್ಯ ಹೆದ್ದಾರಿಯ ನೀರೆ ಎಂಬಲ್ಲಿ ಡಿ. 18ರಂದು ಲಾರಿ ಹಾಗೂ ಬೈಕ್‌ ಮಧ್ಯೆ ಅಪಘಾತ ಸಂಭವಿಸಿದ್ದು ಪರಿಣಾಮ ಬೈಕ್‌ ಸವಾರ ಸಾವಿಗೀಡಾದ ಘಟನೆ ನಡೆದಿದೆ. ಬ್ಯಾಂಕ್‌ ಆಫ್‌ ಬರೋಡಾ ನಿವೃತ್ತ ಉದ್ಯೋಗಿ, ನೀರೆ ಗ್ರಾಮದ ರಾಜು ಹಾಂಡ (70) ಸಾವಿಗೀಡಾದ ದುರ್ದೈವಿ. ರಾಜು ಅವರು ಬೈಲೂರಿನಿಂದ ನೀರೆ ಕಡೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಉಡುಪಿ ಕಡೆಯಿಂದ ಕಾರ್ಕಳದತ್ತ ಸಾಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ರಾಜು ಅವರಿಗೆ ತೀವ್ರ ಸ್ವರೂಪದ ಗಾಯವಾಗಿದೆ. ತಕ್ಷಣವೇ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದ್ದಾರೆ. ಮೃತರು ಪತ್ನಿ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.









































































































error: Content is protected !!
Scroll to Top