ಕಾರ್ಕಳ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಕುರಿತಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಜ. 9ರಂದು ದೂರು ದಾಖಲಾಗಿದೆ.
ಮಂಗಳೂರಿನ ಅಡ್ಡೂರು ಎಂಬಲ್ಲಿ ಸರಕಾರಿ ಸ್ಥಳದಲ್ಲಿ ಅಕ್ರಮವಾಗಿ ತೆಗೆದ ಮರಳನ್ನು ಟಿಪ್ಪರ್ ಲಾರಿ ಮಾಲೀಕ ನಿಸಾರ್ ಹಾಗೂ ಚಾಲಕ ಪ್ರವೀಣ KL-28-A-3035 ನೇ ನಂಬ್ರದ ಟಿಪ್ಪರ್ ಲಾರಿಯಲ್ಲಿ ಯಾವುದೇ ಪರವಾನಿಗೆಯಿಲ್ಲದೆ ಕುಕ್ಕುಂದೂರು ಗ್ರಾಮದ ಸರ್ವಜ್ಞ ಸರ್ಕಲ್ ಬಳಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದು, ಈ ಬಗ್ಗೆ ಕಾರ್ಕಳ ನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಮರಳು ಅಕ್ರಮ ಸಾಗಾಟ – ದೂರು ದಾಖಲು


















