ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಎಬಿವಿಪಿಯ ಹದಿನಾರು ಕಾರ್ಯಕರ್ತರ ವಿರುದ್ಧ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅನುಮತಿ ಪಡೆಯದೆ ಶುಕ್ರವಾರ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ಬಳಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಮೆಟ್ರೋ ದರ ಏರಿಕೆಯು 45-50% ಎಂದು ಹೇಳಲಾಗಿದ್ದರೂ, ಪ್ರಯಾಣಿಕರು ಅದು 100% ರಷ್ಟು ಏರಿಕೆಯಾಗಿತ್ತು ಎಂದು ಆರೋಪಿಸಿದ್ದರು. ದರ ಏರಿಕೆಯಿಂದಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ.
ಮೆಟ್ರೋ ದರ ಏರಿಕೆಯನ್ನು ಜನರು ಖಂಡಿಸುತ್ತಿದ್ದಾರೆ. ರೈತರು, ಕನ್ನಡಪರ ಹೋರಾಟಗಾರರು, ಪ್ರಗತಿಪರ ಸಂಘಟನೆಗಳು ಮತ್ತು ಪ್ರಯಾಣಿಕರು ಸೇರಿದಂತೆ ಪ್ರಯಾಣಿಕರು ಬಿಎಂಆರ್ಸಿಎಲ್ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಮೆಟ್ರೋ ದರ ಯಥೇಚ್ಚಾಗಿ ಏರಿಕೆಯಾಗಿದ್ದಕ್ಕೆ ಪ್ರಯಾಣಿಕರು ಆಕ್ರೋಶಗೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರು ಮಾಡಿದ್ದರು. ಇದರಿಂದ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ, ಯಾವ ಯಾವ ಸ್ಟೇಜ್ಗಳಲ್ಲಿ ದುಪ್ಪಟ್ಟು ದರ ಏರಿಕೆ ಮಾಡಲಾಗಿದೆ ಎಂದು ಪರಿಶೀಲಿಸಿ ಕೂಡಲೇ ಕಡಿತಗೊಳಿಸುವಂತೆ ಬಿಎಂಆರ್ಸಿಎಲ್ಗೆ ಸೂಚನೆ ನೀಡಿದ್ದರು.



























