ಸಿಎಂ ಸಿದ್ದರಾಮಯ್ಯ ಸಹಿ ನಕಲು : ಆರೋಪಿ ಬಂಧನ

ಬೆಂಗಳೂರು : ಸಿಎಂ ಕಚೇರಿಯ ಟಿಪ್ಪಣಿ ಹಾಗೂ ಸಿದ್ದರಾಮಯ್ಯನವರ ಸಹಿ ನಕಲು ಮಾಡಿ ವಂಚಿಸಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ಮೂಲದ ರಾಘವೇಂದ್ರ ಬಂಧಿತ ಆರೋಪಿ.
ಕೆಎಎಸ್​ ಅಧಿಕಾರಿಯೊಬ್ಬರಿಗೆ ಪೋಸ್ಟಿಂಗ್ ನೀಡುವಂತೆ ಆರೋಪಿ ರಾಘವೇಂದ್ರ, ಮುಖ್ಯಮಂತ್ರಿಗಳ ಕಚೇರಿ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿದ್ದನು. ಈ ಬಗ್ಗೆ ವಿಧಾನಸೌಧದ ಸಚಿವಾಲಯ ದೂರು ನೀಡಿತ್ತು. ಈತ ಈ ಹಿಂದೆ ಶಾಸಕರ ಖಾಸಗಿ ಸಹಾಯಕರ ಬಳಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ನಕಲಿ ಸಿಎಂ ಕಚೇರಿ ಪತ್ರ ಮತ್ತು ಸಹಿಯನ್ನು ಬಳಸಿದ್ದರ ವಿರುದ್ಧ ವಿಧಾನಸೌಧದ ಕಾರ್ಯದರ್ಶಿ ದೂರು ದಾಖಲಿಸಿದ ನಂತರ ಆತನನ್ನು ಇತ್ತೀಚೆಗೆ ಬಂಧಿಸಲಾಗಿದೆ.

ರಾಘವೇಂದ್ರ ಶಿಫಾರಸು ಪತ್ರದ ಭರವಸೆ ನೀಡಿ ಕೆಲವು ಲಕ್ಷಗಳಿಗೆ ಬೇಡಿಕೆ ಇಟ್ಟಿದ್ದ. ಹಲವು ಅಧಿಕಾರಿಗಳು ಹಣ ಪಾವತಿಸಿದ್ದಾರೆ ಎನ್ನಲಾಗಿದೆ, ನಂತರ ರಾಘವೇಂದ್ರ ಅವರಿಗೆಲ್ಲಾ ಮುಖ್ಯಮಂತ್ರಿಗಳ ನಕಲಿ ಸಹಿಯೊಂದಿಗೆ ನಕಲಿ ಪತ್ರವನ್ನು ನೀಡಿದ್ದಾನೆ. ಈ ಪತ್ರವನ್ನು ವಾಟ್ಸಾಪ್ ಮೂಲಕ ಅಧಿಕಾರಿಯೊಬ್ಬರಿಗೆ ಕಳುಹಿಸಿದಾಗ, ಅದು ನಕಲಿ ಎಂದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ ಪೊಲೀಸರು ಈ ಹಿಂದೆ ಅನೇಕ ಜನರಿಗೆ ಮೋಸ ಮಾಡಿದ್ದಾನೆಂದು ತಿಳಿದುಕೊಂಡರು, ಆದರೆ ಇದು ಅವನ ವಿರುದ್ಧ ದಾಖಲಾಗಿರುವ ಮೊದಲ ದೂರು. ಆದಾಗ್ಯೂ, ಕೆಎಎಸ್ ಅಧಿಕಾರಿ ಎಷ್ಟು ಹಣ ಪಾವತಿಸಿದ್ದಾರೆ ಎಂಬ ಬಗ್ಗೆ ನಿಖರವಾದ ವಿವರ ಪೊಲೀಸರು ಬಹಿರಂಗಪಡಿಸಿಲ್ಲ. ರಾಘವೇಂದ್ರ ವಿರುದ್ಧ ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ ಪ್ರಕರಣ ದಾಖಲಿಸಲಾಗಿದೆ.













































































error: Content is protected !!
Scroll to Top