ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ : ಶಾಕಿಂಗ್ ವಿಚಾರ ಬಹಿರಂಗ

ಬೆಂಗಳೂರು : ಕರ್ನಾಟಕ ರಾಜ್ಯ ಸರಕಾರ ಗೋಬಿ ಮಂಚೂರಿಗೆ, ಕಾಟನ್ ಕ್ಯಾಂಡಿಗಳಿಗೆ ಹಾಕುವ ಕೃತಕ ಬಣ್ಣಗಳು ಸೇರಿದಂತೆ ಪ್ರತಿನಿತ್ಯ ಸೇವಿಸುವ ಸಾಕಷ್ಟು ಆಹಾರಗಳಲ್ಲಿನ ಕಲಬೆರಕೆಗಳಿಗೆ ನಿಷೇಧ ಹೇರುತ್ತಲೇ ಇದೆ. ಇದೀಗ ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ.

ಈ ಕುರಿತು ವಿಕಾಸಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ತರ ಸುದ್ದಿಗೋಷ್ಠಿ ನಡೆಸಿ, ಈಗಾಗಲೇ 296 ಕುಡಿಯುವ ನೀರಿನ ಬಾಟಲ್ ಮಾದರಿಗಳ ಟೆಸ್ಟ್ ಮಾಡಿದ್ದು, ಇದರಲ್ಲಿ 72 ಸುರಕ್ಷಿತ ಹಾಗೂ 95 ಮಾದರಿಗಳು ಅಸುರಕ್ಷಿತ ಎಂದು ವರದಿಯಾಗಿದೆ. ಇದಲ್ಲದೇ ಹಸಿರು ಬಟಾಣಿಗೆ ಹಸಿರು ಕಲರ್‌ ಬರಿಸಲು ಟೆಟಾರ್ಜಿನ್‌ ಕೆಮಿಕಲ್‌ ಬಳಸಿರುವ ಆತಂಕಕಾರಿ ವಿಷಯ ಹೊರಬಿದ್ದಿದೆ. ಕುಡಿಯುವ ನೀರಿನ ಬಾಟಲಿ ಮಾತ್ರವಲ್ಲದೇ ಖಾರ ಮಿಕ್ಚರ್, ಪನ್ನೀರ್ ಹಾಗೂ ಐಸ್​ಕ್ರೀಂ ಘಟಕಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ತಯಾರಿಕಾ ಘಟಕಗಳಲ್ಲಿ ಲೋಪ ಕಂಡು ಬಂದ ಹಿನ್ನೆಲೆ ನೋಟಿಸ್ ನೀಡಲಾಗಿರುವುದಾಗಿ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.









































































































error: Content is protected !!
Scroll to Top