ಎ. 14 : ಎಸ್​ಸಿ, ಎಸ್​ಟಿ ದೌರ್ಜನ್ಯ ಪ್ರಕರಣಗಳ ತನಿಖೆಗೆ ರಾಜ್ಯಾದ್ಯಂತ 33 ಪೊಲೀಸ್ ಠಾಣೆಗೆ ಚಾಲನೆ

ಬೆಂಗಳೂರು : ಎಸ್‌ಸಿ, ಎಸ್‌ಟಿಗಳ (SC/ST cases) ಮೇಲಿನ ದೌರ್ಜನ್ಯ ಪ್ರಕರಣಗಳ ವಿಚಾರಣೆಗೆಂದೇ ಕರ್ನಾಟಕ ಸರಕಾರ ಪ್ರತ್ಯೇಕವಾಗಿ ಸ್ಥಾಪಿಸುತ್ತಿರುವ 33 ಪೊಲೀಸ್ ಠಾಣೆಗಳು ಎ. 14 ರಿಂದ ಕಾರ್ಯಾರಂಭ ಮಾಡಲಿವೆ. ಈ ಪೊಲೀಸ್ ಠಾಣೆಗಳಿಂದಾಗಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (DCRE) ಅಧಿಕಾರ ಇನ್ನಷ್ಟು ಹೆಚ್ಚಾಗಲಿದ್ದು, ಎಸ್‌ಸಿ, ಎಸ್‌ಟಿಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ತನಿಖೆಗೆ ಅನುವು ಮಾಡಿಕೊಡಲಿದೆ.

ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಕಾರ್ಯನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದು 2023-24ರ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಇದಾದ ಎರಡು ವರ್ಷಗಳ ನಂತರ ಇದೀಗ ಕೊನೆಗೂ ಎಸ್​​​ಸಿ, ಎಸ್​ಟಿ ಠಾಣೆಗಳು ಅಸ್ತಿತ್ವಕ್ಕೆ ಬರುತ್ತಿವೆ. ಏಪ್ರಿಲ್ 14 ರಂದು ಹೊಸ ಠಾಣೆಗಳು ಕಾರ್ಯಾರಂಭ ಮಾಡಲಿವೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ದೃಢಪಡಿಸಿರುವುದಾಗಿ ವರದಿಯಾಗಿದೆ. ದಲಿತರ ಹಕ್ಕುಗಳ ರಕ್ಷಣೆಗಾಗಿ ಇದು ಸಚಿವ ಸಂಪುಟದ ಐತಿಹಾಸಿಕ ನಿರ್ಧಾರವಾಗಿದೆ ಎಂದೂ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಎರಡು ಠಾಣೆಗಳಿದ್ದರೆ, ಉಳಿದ ಎಲ್ಲಾ ಜಿಲ್ಲೆಗಳು ತಲಾ ಒಂದು ಠಾಣೆಯನ್ನು ಹೊಂದಲಿವೆ.























































error: Content is protected !!
Scroll to Top