ಜಾತಿ ಗಣತಿ ವರದಿಗೆ ವಿರೋಧ ವ್ಯಕ್ತ : ಒಕ್ಕಲಿಗರ ಸಂಘದಿಂದ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರಕಾರ ಇತ್ತೀಚೆಗೆ ಸಚಿವ ಸಂಪುಟದಲ್ಲಿ ಮಂಡಿಸಿದ ವಿವಾದಾತ್ಮಕ ಜಾತಿ ಗಣತಿ(ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದೀಗ ರಾಜ್ಯ ಒಕ್ಕಲಿಗರ ಸಂಘ ಈ ವರದಿ ಜಾರಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಮಾತನಾಡಿ, ಜಾತಿ ಗಣತಿ ವರದಿಯನ್ನು ಹಿಂಪಡೆಯಬೇಕು. ಒಂದು ವೇಳೆ ವರದಿ ಜಾರಿಗೊಳಿಸಿದರೆ ಸರಕಾರ ಉಳಿಯುವುದಿಲ್ಲ ಮತ್ತು ಕರ್ನಾಟಕದಾದ್ಯಂತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ರಾಜ್ಯ ಸರಕಾರ ಕಾಂತರಾಜು ಆಯೋಗದ ವರದಿ ಜಾರಿ ಮಾಡಲು ಹೊರಟಿದೆ. ಆದರೆ ಅದರ ವಿರುದ್ದ ಹೋರಾಟ ಮಾಡಲು ಒಕ್ಕಲಿಗ ಸಂಘದ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ. ಮುಂದಿನ ಹಂತದಲ್ಲಿ ಯಾವ ರೀತಿ ಹೋರಾಟ ಮಾಡಬೇಕು ಎಂಬುದರ ಬಗ್ಗೆ ಇಂದು ಚರ್ಚಿಸಲಾಗಿದೆ ಎಂದರು.









error: Content is protected !!
Scroll to Top