ಜೂ. 11ಕ್ಕೆ ಆಕ್ಸಿಯಮ್-4 ಮಿಷನ್ ಉಡಾವಣೆ

ಭಾರತದ ಎರಡನೇ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ

ನವದೆಹಲಿ : ಭಾರತದ ಎರಡನೇ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಬಾಹ್ಯಾಕಾಶಕ್ಕೆ ಕರೆದೊಯ್ಯುವ ಆಕ್ಸಿಯಮ್-4 ಮಿಷನ್ ಉಡಾವಣೆಯನ್ನು ಹವಾಮಾನ ವೈಪರೀತ್ಯದಿಂದಾಗಿ ಒಂದು ದಿನ ಮುಂದೂಡಲಾಗಿದೆ. ನಿಗದಿತ ವೇಳಾಪಟ್ಟಿಯ ಪ್ರಕಾರ ನಾಳೆ ಶುಭಾಂಶು ಶುಕ್ಲಾ ಅವರ ತಂಡ ಬಾಹ್ಯಾಕಾಶ ಪ್ರಯಾಣ ಬೆಳೆಸಬೇಕಿತ್ತು. ನಾಸಾ ಮತ್ತು ಸ್ಪೇಸ್‌ಎಕ್ಸ್ ಸಹಯೋಗದೊಂದಿಗೆ ಆಕ್ಸಿಯಮ್ ಸ್ಪೇಸ್ ಆಯೋಜಿಸಿರುವ ಈ ಮಿಷನ್ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಹಲವಾರು ವೈಜ್ಞಾನಿಕ ಪ್ರಯೋಗಗಳನ್ನು ನಡೆಸುವ ಗುರಿಯನ್ನು ಹೊಂದಿದೆ. ವಾಣಿಜ್ಯಿಕವಾಗಿ ಸಿಬ್ಬಂದಿಯೊಂದಿಗೆ ಬಾಹ್ಯಾಕಾಶ ಹಾರಾಟದಲ್ಲಿ ಭಾರತ ದೇಶವನ್ನು ಪ್ರತಿನಿಧಿಸಲು ಶುಭಾಂಶು ಶುಕ್ಲಾ ಸಿದ್ಧತೆ ನಡೆಸುತ್ತಿರುವುದರಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಯಾನಗಳಲ್ಲಿ ಭಾರತದ ಉಪಸ್ಥಿತಿಗೆ ಇದು ಮಹತ್ವದ ಮೈಲಿಗಲ್ಲು. ಉಡಾವಣೆಯ ಉದ್ದೇಶಿತ ಸಮಯ ಜೂ.11ರಂದು ಸಂಜೆ 5.30 ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ತಿಳಿಸಿದೆ.









































































































error: Content is protected !!
Scroll to Top