ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಬೆಂಗಳೂರು : ಯುವಕನೊಬ್ಬ ರೈಲು ಬರುತ್ತಿದ್ದಂತೆಯೇ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಗಾಯಗೊಂಡಿರುವ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನನ್ನು 31 ವರ್ಷ ವಯಸ್ಸಿನ ಜಯಂತ್ ಎಂದು ಗುರುತಿಸಲಾಗಿದೆ. ಬೈಯ್ಯಪ್ಪನ ಹಳ್ಳಿಯಿಂದ ನ್ಯಾಷನಲ್ ಕಾಲೇಜ್ ಕಡೆ ಹೊರಟಿದ್ದ ಜಯಂತ್ ಆ.11 ರಂದು ರಾತ್ರಿ 10 ಗಂಟೆಗೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಇಳಿದಿದ್ದ. ಬಳಿಕ ನ್ಯಾಷನಲ್ ಕಾಲೇಜ್ ಕಡೆ ಹೋಗಲು ಪ್ಲಾಟ್​ಫಾರಂ ನಾಲ್ಕಕ್ಕೆ ಬಂದಿದ್ದ. ನಂತರ ರೈಲು ಬರುತ್ತಿದ್ದಂತೆಯೇ ಏಕಾಏಕಿ ಹಳಿ ಮೇಲೆ ಹಾರಿದ್ದ.

ಯುವಕ ಹಳಿಗೆ ಜಿಗಿಯುತ್ತಿರುವುದನ್ನು ಕಂಡ ಕೂಡಲೇ ಮೆಟ್ರೋ ಆಪರೇಟರ್ ಎಮರ್ಜೆನ್ಸಿ ಬ್ರೇಕ್ ಹಾಕಿ ರೈಲು ನಿಲ್ಲಿಸಿದ್ದರು. ತಕ್ಷಣವೇ ಮೆಟ್ರೋ ಸಿಬ್ಬಂದಿ ಹಳಿಯಲ್ಲಿ ಬಿದ್ದಿದ್ದ ಜಯಂತನನ್ನು ರಕ್ಷಣೆ ಮಾಡಿದ್ದು ಆ್ಯಂಬುಲೆನ್ಸ್​​​ನಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಜಯಂತ್​​ನ ತಲೆ, ಕಣ್ಣು, ಹೊಟ್ಟೆ ಮತ್ತು ಕೈ-ಕಾಲುಗಳಿಗೆ ಗಾಯಗಳಾಗಿವೆ. ಪ್ರಾಣಾಪಾಯದಿಂದ ಪಾರಾಗಿರುವ ಜಯಂತ್​​ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನೆ ಬಗ್ಗೆ ಉಪ್ಪಾರಪೇಟೆ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.









































































































error: Content is protected !!
Scroll to Top