ಕಾರ್ಕಳ : ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿಯಾದ ಘಟನೆ ನ. 19ರಂದು ಬಂಡಿಮಠದಲ್ಲಿ ಸಂಭವಿಸಿದೆ. ಕಮಲವ್ವ ಗಂಗಪ್ಪಳ (̈69) ಎಂಬವರು ಬೆಳಿಗ್ಗೆ ಹಾಲು ಡೈರಿಯಿಂದ ಹಾಲನ್ನು ಖರೀದಿ ಮಾಡಿಕೊಂಡು ಬಂಡೀಮಠ ಮೂಡು ಗಣಪತಿ ಸಭಾಭವನದ ಎದುರು ರಸ್ತೆ ದಾಟುತ್ತಿದ್ದ ವೇಳೆ ಕಾರ್ಕಳ ಪೇಟೆಯಿಂದ ಬಂಗ್ಲೆಗುಡ್ಡೆ ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿಯಾಗಿದೆ. ಕಮಲವ್ವ ತೀವ್ರವಾಗಿ ಗಾಯಗೊಂಡಿದ್ದು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಕೆ.ಎಂ.ಸಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ































