ಕ್ರೈಸ್ಟ್‌ಕಿಂಗ್‌ನಲ್ಲಿ ಕಾರ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ – ಕಲೋತ್ಸವ

ಕಾರ್ಕಳ : ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಿ ಅದಕ್ಕೆ ಪೂರಕವಾದ ವಾತಾವರಣ ಕಲ್ಪಿಸುವುದು ಶಿಕ್ಷಕರ ಮತ್ತು ಹೆತ್ತವರ ಕರ್ತವ್ಯ. ಜೊತೆಗೆ ಸಮಾಜ ಕೂಡಾ ಪ್ರತಿಭೆಗಳ ಪ್ರತಿಭಾ ಪ್ರದರ್ಶನಕ್ಕೆ ನಿರಂತರ ಪ್ರೋತ್ಸಾಹ ನೀಡಬೇಕು. ಕಾರ್ಕಳದ ಯುವ ಪ್ರತಿಭೆಗಳು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿರುವುದು ಹೆಮ್ಮೆಯ ವಿಚಾರ. ಇಂತಹ ಸಾಧನೆಗಳು ನಿರಂತರವಾಗಿ ಮುಂದುವರಿಯುತ್ತಿರಬೇಕು ಶಾಸಕ ಸುನಿಲ್‌ ಕುಮಾರ್‌ ಹೇಳಿದರು.

ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ರೈಸ್ಟ್‌ಕಿಂಗ್‌ ಶಿಕ್ಷಣ ಸಂಸ್ಥೆಗಳು ಕಾರ್ಕಳ ಇವರ ಜಂಟಿ ಸಹಯೋಗದಲ್ಲಿ ಡಿ. 23ರಂದು ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ-2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮುನಿಯಾಲು ಉದಯಕುಮಾರ್ ಶೆಟ್ಟಿ ಮಾತನಾಡಿ, ಪ್ರಸಕ್ತ ಕಾಲಘಟ್ಟದಲ್ಲಿ ಮಕ್ಕಳ ನಿಯಂತ್ರಣ ಸವಾಲಿನದ್ದಾಗಿದೆ. ಮಕ್ಕಳನ್ನು ಸಂಸ್ಕಾರವಂತರಾಗಿ ಮಾಡಲು ಮೌಲ್ಯಯುತ ಶಿಕ್ಷಣ ಅಗತ್ಯ, ಮಕ್ಕಳಲ್ಲಿ ಪ್ರಜಾಪ್ರಭುತ್ವ ಭಾವನೆ ಬಲಗೊಳ್ಳುವಂತೆ ಮಾಡಬೇಕಾದುದು ನಮ್ಮ ಕರ್ತವ್ಯ ಎಂದು ಹೇಳಿದರು.

ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾತನಾಡಿ, ಪ್ರತಿಭಾ ಸಂಪನ್ನರಿಗೆ ಪ್ರತಿಭಾ ಕಾರಂಜಿ ಸಮರ್ಪಕ ವೇದಿಕೆ. ವಿದ್ಯಾರ್ಥಿಗಳು ಪ್ರತಿಭಾ ಪ್ರದರ್ಶನಕ್ಕೆ ಲಭ್ಯವಾಗುವ ಎಲ್ಲಾ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
ಹೆಬ್ರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಂಕರ ಶೇರಿಗಾರ್ ಮಾತನಾಡಿ, ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆಗಳನ್ನು ಹೊರಗೆಡವಲು ಅತ್ಯುತ್ತಮ ಅವಕಾಶ, ಶಿಕ್ಷಕರು ಹಾಗೂ ಪೋಷಕರು ಪ್ರತಿಭಾ ಕಾರಂಜಿಯ<ತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಕ್ಕಳನ್ನು ಹೆಚ್ಚೆಚ್ಚು ಪ್ರೋತ್ಸಾಹಿಸಬೇಕು ಎಂದರು.

ಕ್ರೈಸ್ಟ್‌ಕಿಂಗ್‌ ಎಜುಕೇಷನ್ ಟ್ರಸ್ಟ್‌ನ ಸದಸ್ಯ ಡಾ. ಪೀಟರ್ ಫೆರ್ನಾಂಡಿಸ್ ಮಾತನಾಡಿ, ಕಲೆ, ಸಾಹಿತ್ಯ, ಸಂಸ್ಕೃತಿಗಳು ಜನಮಾನಸದಲ್ಲಿ ಕಳೆಗುಂದುತ್ತಿರುವ ಈ ಕಾಲಘಟ್ಟದಲ್ಲಿ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮ ನಮ್ಮ ಮಕ್ಕಳ ಪಾಲಿಗೆ ಒದಗಿ ಬಂದಿರುವ ಸೌಭಾಗ್ಯ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ ಮಾತನಾಡಿ ಪ್ರತಿಭಾ ಕಾರಂಜಿ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಅಭಿನಂದನೆ ಸಲ್ಲಿಸಿದರು. ಅಂತಾರಾಷ್ಟ್ರೀಯ ಕ್ರೀಡಾಪಟು ಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಶಗುನ್ ಎಸ್. ವರ್ಮ ಹೆಗ್ಡೆ ಅವರನ್ನು ಭಾರತ್ ಸ್ಕೌಟ್ಸ್ ವತಿಯಿಂದ ಸನ್ಮಾನಿಸಲಾಯಿತು. ಕಳೆದ ಸಾಲಿನಲ್ಲಿ ಹತ್ತನೇ ತರಗತಿ ಪ್ರೇರಣಾ ಶಿಬಿರದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ಇದಕ್ಕೆ ಕಾರನೀಕರ್ತರಾದ ಇಲಾಖೆಯ ಕಳೆದ ಸಾಲಿನ ಸಿಆರ್‌ಪಿ ಬಾಲಕೃಷ್ಣ ಅವರನ್ನು ಶಿಕ್ಷಣ ಇಲಾಖೆಯ ವತಿಯಿಂದ ಸನ್ಮಾನಿಸಲಾಯಿತು.

ಸಭಾ ಕಾರ್ಯಕ್ರಮ ಆರಂಭಕ್ಕೂ ಮೊದಲು ಅತಿಥಿ ಗಣ್ಯರನ್ನು ಗಾಂಧಿ ಮೈದಾನದಿಂದ ಚೆಂಡೆ, ಬ್ಯಾಂಡ್, ಕೊಂಬು ವಾದನದೊಂದಿಗೆ ಭವ್ಯ ಮೆರವಣಿಗೆಯಲ್ಲಿ ಪೂರ್ಣಕುಂಭ ಸ್ವಾಗತದೊಂದಿಗೆ ಕರೆತರಲಾಯಿತು. ಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು ವಿವಿಧ ಮಹಾನ್ ನಾಯಕರ ಹಾಗೂ ವಿವಿಧ ಜನಪದ ವೇಷಗಳನ್ನು ತೊಟ್ಟು ಮನರಂಜಿಸಿದರು. ಕ್ರೈಸ್ಟ್‌ಕಿಂಗ್‌ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್, ಮುಖ್ಯ ಶಿಕ್ಷಕರಾದ ಪ್ರೌಢಶಾಲಾ ವಿಭಾಗದ ಜೋಸ್ನಾ ಸ್ನೇಹಲತಾ, ಪ್ರಾಥಮಿಕ ವಿಭಾಗದ ರುಡಾಲ್ಫ್ ಕಿಶೋರ್ ಲೋಬೊ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಪದವಿಪೂರ್ವ ವಿಭಾಗದ ದಯಾನಂದ ಮಲೆಬೆಟ್ಟು, ಪ್ರೌಢಶಾಲಾ ವಿಭಾಗದ ಶೆರಿಟಾ ನೊರೋನ್ಹ, ಪ್ರಾಥಮಿಕ ವಿಭಾಗದ ಉದಯರವಿ, ಕಾರ್ಕಳ ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಆನಂದ, ಕಾರ್ಕಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿ, ಉಡುಪಿ ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ, ಕಾರ್ಕಳ ತಾಲೂಕು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಕಾರ್ಕಳ ತಾಲೂಕು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ದೇವದಾಸ್ ಪಾಟ್ಕರ್, ಕಾರ್ಕಳ ತಾಲೂಕು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಸಂತ, ಕಾರ್ಕಳ ತಾಲೂಕು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸಂತೋಷ್, ಕಾರ್ಕಳ ತಾಲೂಕು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷರಾದ ರವೀಂದ್ರ ಶೆಟ್ಟಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಂಘದ ಅಧ್ಯಕ್ಷ ಭುಜಂಗ, ಕಾರ್ಕಳ ತಾಲೂಕು ಅನುದಾನಿತ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪೃಥ್ವಿರಾಜ್ ಬಲ್ಲಾಳ್, ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ, ಬಿಆರ್‌ಸಿ ಉಮೆಶ್ ಕೆ.ಎಸ್. ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾರ್ಕಳ ತಾಲೂಕು ಪಿಎಂ ಪೋಷಣಾ ಅಭಿಯಾನ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಭಾಸ್ಕರ ಟಿ. ಸ್ವಾಗತಿಸಿ, ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಕಳ ಕ್ಷೇತ್ರ ಸಂಪನ್ಮೂಲ ಸಮನ್ವಯಧಿಕಾರಿ ಇಂದಿರಾ ವಂದಿಸಿದರು. ಹೊಸ್ಮಾರು ಸಿಆರ್‌ಪಿ ಕೃಷ್ಣಕುಮಾರ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.



































































































error: Content is protected !!
Scroll to Top