ಕಾರ್ಕಳ : ಎಣ್ಣೆಹೊಳೆ ಏತ ನೀರಾವರಿ ಯೋಜನೆ ವಿದ್ಯುತ್ ಸ್ಥಗಿತಗೊಂಡಿರುವುದನ್ನು ವಿರೋಧಿಸಿ ಕಾರ್ಕಳ ಬಿಜೆಪಿ ನೇತೃತ್ವದಲ್ಲಿ ಮಾ. 4ರಂದು ಸಂಜೆ 4 ಗಂಟೆಗೆ ಎಣ್ಣೆಹೊಳೆ ಡ್ಯಾಮ್ ಬಳಿ ಪ್ರತಿಭಟನೆ ನಡೆಯಲಿದೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಸುಮಾರು 2 ಕೋಟಿ ರೂ.ಗಿಂತ ಅಧಿಕ ಮೊತ್ತದ ವಿದ್ಯುತ್ ಬಿಲ್ ಪಾವತಿಸದೆ ದಿವಾಳಿಯಾಗಿದೆ. ರೈತ ವಿರೋಧಿ ಸರಕಾರದ ನಡೆಯನ್ನು ಪ್ರಶ್ನಿಸೋಣ ಎಂದು ಬಿಜೆಪಿ ಪ್ರತಿಭಟನೆಗೆ ಕರೆ ನೀಡಿದೆ.
ಮಾ. 4 : ಎಣ್ಣೆಹೊಳೆ ಡ್ಯಾಮ್ ಬಳಿ ಬಿಜೆಪಿಯಿಂದ ಪ್ರತಿಭಟನೆ











