ಹೆಬ್ರಿ : ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಅವರ ತಾಯಿ, ಮಂಡಲ ಪಂಚಾಯತ್ ಮಾಜಿ ಸದಸ್ಯ ಚಂದು ಪೂಜಾರಿಯವರ ಪತ್ನಿ ಕಮಲ ಪೂಜಾರಿ (88) ಮಾ. 20ರಂದು ನಿಧನರಾದರು. ಮೃತರು 8 ಮಂದಿ ಮಕ್ಕಳನ್ನು ಅಗಲಿದ್ದಾರೆ. ಕಮಲ ಅವರು ಪಂಚಾಯತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.
ಮೃತರ ಅಂತ್ಯಸಂಸ್ಕಾರ ಮುದ್ರಾಡಿ ಮನೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.






