ವಿಲಾಸ್ ಕುಮಾರ್ ನಿಟ್ಟೆ ಅವರಿಗೆ ಧರ್ಮಸ್ಥಳ ರತ್ನವರ್ಮ ಹೆಗ್ಡೆ ಪ್ರಶಸ್ತಿ

ಕಾರ್ಕಳ : ವಿಲಾಸ್ ಕುಮಾರ್ ನಿಟ್ಟೆ ಅವರ “ಆಯೆ ಆನ್‌ಮಗೆ” ತುಳು ನಾಟಕಕ್ಕೆ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪ್ರಶಸ್ತಿ ಲಭಿಸಿದೆ. ತುಳು ಕೂಟ ಕುಡ್ಲದ ವತಿಯಿಂದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಪ್ರಾಯೋಜಕತ್ವದಲ್ಲಿ ಕೊಡಮಾಡುವ ಈ ನಾಟಕ ಪ್ರಶಸ್ತಿ ಸ್ಪರ್ಧೆಯಲ್ಲಿ “ಆಯೆ ಆನ್ ಮಗೆ” ಎಂಬ ತುಳು ನಾಟಕ ಪ್ರತಿಯು ದ್ವಿತೀಯ ಪ್ರಶಸ್ತಿ ಮತ್ತು ನಗದು ಬಹುಮಾನವನ್ನು ಗೆದ್ದುಕೊಂಡಿದೆ.
ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಪತ್ರಕರ್ತರಾಗಿರುವ ವಿಲಾಸ್ ಕುಮಾರ್ ನಿಟ್ಟೆ ಅವರು ಗುತ್ತುದ ಗುರ್ಕಾರೆ, ಮುತೈಸಿ ಮದ್ಮಲ್, ತೆಲಿಕೆದ ನಲಿಕೆ, ಗಗ್ಗರ, ಅಲೆಗೇಪ ಮದ್ಮೆ ?, ಮಾತೆರ್ಲ ಬರೋಡು, ಕಂಬುಳದ ನಡುಟೊಂಜಿ ಕಥೆ, ತಮ್ಮನ, ಪನರೆ ಧೈರ್ಯಜ್ಜಿ, ಪನಂದೆ ಪೊಯೆರ್, ಬರೆಪುನಾಯೆ ಬರೆತ್‌ಜೆ ಮುಂತಾದ ಒಟ್ಟು 20ಕ್ಕೂ ಹೆಚ್ಚು ತುಳು ನಾಟಕ ಕೃತಿಗಳನ್ನು ರಚಿಸಿದ್ದಾರೆ. ಈಗಾಗಲೇ ಅವರ ಒಟ್ಟು ನಾಲ್ಕು ತುಳು ನಾಟಕಗಳು ಈ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪ್ರಶಸ್ತಿಗೆ ಭಾಜನವಾಗಿದೆ. ಇವರು ನಿಟ್ಟೆ ಗ್ರಾಮದ ಅತ್ತೂರು ಬಲಿಪಗುತ್ತು ಪ್ರೇಮ ಶೆಟ್ಟಿ ಮತ್ತು ಜಗನ್ನಾಥ ಶೆಟ್ಟಿ ದಂಪತಿಯ ಪುತ್ರ.



































































































error: Content is protected !!
Scroll to Top