ಬೀಗ ಹಾಕಿದ ಮನೆಯಲ್ಲಿ ಕಳ್ಳತನ; 2.64 ಲಕ್ಷ ಮೌಲ್ಯದ ಚಿನ್ನಾಭರಣ ಅಪಹರಣ

ಕಾರ್ಕಳ: ತಾಲ್ಲೂಕಿನ ಕಸಬಾ ಗ್ರಾಮದ ಅಯ್ಯಪ್ಪನಗರ ನಿವಾಸಿಯೊಬ್ಬರ ಮನೆಯ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.
​ಇಲ್ಲಿನ ನಿವಾಸಿ ಶಂಕರ ಕುಲಾಲ್ (49) ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಸುಮಾರು 2.64 ಲಕ್ಷ ಮೌಲ್ಯದ ಸ್ವತ್ತುಗಳನ್ನು ಕಳ್ಳರು ದೋಚಿದ್ದಾರೆ.
ಘಟನೆಯ ವಿವರ:
​ಶಂಕರ ಕುಲಾಲ್ ಅವರು ಏಪ್ರಿಲ್ 23ರಂದು ಬೆಳಿಗ್ಗೆ 9:10ಕ್ಕೆ ಮನೆಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದರು. ಏಪ್ರಿಲ್ 24ರಂದು ಸಂಜೆ 6:00 ಗಂಟೆಗೆ ಮನೆಗೆ ವಾಪಸಾದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮನೆಯ ಮುಂಬಾಗಿಲ ಬೀಗವನ್ನು ಯಾವುದೋ ಸಾಧನದಿಂದ ಮೀಟಿ ಒಳಪ್ರವೇಶಿಸಿದ ಕಳ್ಳರು, ಕೋಣೆಯ ಕಪಾಟಿನಲ್ಲಿದ್ದ ಆಭರಣಗಳನ್ನು ದೋಚಿದ್ದಾರೆ.
ಕಳವಾದ ವಸ್ತುಗಳು:
​ಸುಮಾರು 24 ಗ್ರಾಂ ತೂಕದ ಹಳೆಯ ಚಿನ್ನದ ನೆಕ್ಲೆಸ್ – 1
​ತಲಾ 3 ಗ್ರಾಂ ತೂಕದ ಚಿನ್ನದ ಉಂಗುರಗಳು – 3
​ಸುಮಾರು 3 ಗ್ರಾಂ ತೂಕದ ಚಿನ್ನದ ಬೆಂಡೋಲೆ – 1 ಜೊತೆ
​ಸುಮಾರು 3 ಗ್ರಾಂ ತೂಕದ ಚಿನ್ನದ ಜುಮ್ಕಿ – 1 ಜೊತೆ
​ಕಳವಾದ ಒಟ್ಟು ಚಿನ್ನದ ಆಭರಣಗಳ ಮೌಲ್ಯ ಸುಮಾರು 2.64 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಕುರಿತು ಶಂಕರ ಕುಲಾಲ್ ಅವರು ನೀಡಿದ ದೂರಿನ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





























































































error: Content is protected !!
Scroll to Top