ಪುತ್ತೂರು : ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಸಪ್ತಗಿರಿ ಜ್ಞಾನಹಸ್ತದ ನೇತೃತ್ವದಲ್ಲಿ ಜೂ. 21ರಿಂದ 27ರವರೆಗೆ ಸಂಜೆ 5 ಗಂಟೆಯಿಂದ 7.30ರವರೆಗೆ ಶ್ರೀಮದ್ ಭಾಗವತ ಸಪ್ತಾಹ ಪ್ರವಚನ ಕಾರ್ಯಕ್ರಮ ನಡೆಯಲಿದೆ.
ಏಳು ದಿನಗಳ ಕಾಲ ನಡೆಯುವ ಈ ಆಧ್ಯಾತ್ಮಿಕ ಮಹೋತ್ಸವದಲ್ಲಿ ಖ್ಯಾತ ವಿದ್ವಾಂಸರಾದ ಶ್ರೀಶ ಭಟ್ ಮುದರಂಗಡಿ ಹಾಗೂ ಕುತ್ಪಾಡಿ ಕೃಷ್ಣ ರಾಜ್ ಆಚಾರ್ಯ ಅವರಿಂದ ಶ್ರೀಮದ್ ಭಾಗವತ ಮಹಾಪುರಾಣದ ಪ್ರವಚನ ನಡೆಯಲಿದೆ. ಜೂ. 27ರಂದು ವಿಶೇಷವಾಗಿ ಲಕ್ಷ ತುಳಸಿ ಅರ್ಚನೆ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಭಕ್ತರು ಆಹ್ವಾನಿಸುವಂತೆ ಸಪ್ತಗಿರಿ ಜ್ಞಾನಹಸ್ತ ಪ್ರಕಟಣೆಯಲ್ಲಿ ತಿಳಿಸಿದೆ.
ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಇಂದಿನಿಂದ ಶ್ರೀಮದ್ ಭಾಗವತ ಸಪ್ತಾಹ ಪ್ರವಚನ











