ಕಾರ್ಕಳ : ಕಾರ್ಕಳ ತಾಲೂಕು ಕಚೇರಿಗೆ ಆ.27ರಂದು ಮಂಗಳೂರು ಲೋಕಾಯುಕ್ತ ತಂಡ ದಿಢೀರ್ ಭೇಟಿ ನೀಡಿ ಬಾಕಿಯಿರುವ ಹಳೆಯ ಕಡತಗಳ ಪರಿಶೀಲನೆ ನಡೆಸುತ್ತಿದೆ.
ಡಿವೈಎಸ್ಪಿ ಸುರೇಶ್ ಕುಮಾರ್ ನೇತೃತ್ವದಲ್ಲಿ ಸುಮಾರು 7 ಮಂದಿಯ ತಂಡ ಭೇಟಿ ನೀಡಿದ್ದು, ಬಾಕಿಯಿರುವ ಹಳೆಯ ಕಡತಗಳನ್ನು ಪರಿಶೀಲನೆ ನಡೆಸುತ್ತಿದೆ. ಪರಿಶೀಲನೆ ಬಗ್ಗೆ ಸಮಗ್ರವಾದ ವರದಿಯನ್ನು ಎಸ್ಪಿ ಕಚೇರಿ ಸಂಜೆ ಪ್ರಕಟಿಸಲಿದೆ ಎಂದು ಅಧಿಕಾರಿಗಳ ತಂಡ ತಿಳಿಸಿದೆ.



















