Author name: News desk

ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಲೋಕಾಯುಕ್ತ ಬಲೆಗೆ

ಇದು ಸರ್ಕಾರಿ ಪ್ರಾಯೋಜಿತ ಭ್ರಷ್ಟಾಚಾರ : ಸುನಿಲ್‌ ಕುಮಾರ್‌ ಮಂಗಳೂರು : ೨೫ ಲಕ್ಷ ರೂ. ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಇದು ಸರ್ಕಾರಿ ಪ್ರಾಯೋಜಿತ ಭ್ರಷ್ಟಾಚಾರ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಮುಡಾ ಆಯುಕ್ತ ಮನ್ಸೂರ್ ಅಲಿ ಹಾಡು.3ಹಗಲೇ ಇಷ್ಟೊಂದು ಪ್ರಮಾಣದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದರೆ ಅವರಿಗೆ ಸರ್ಕಾರದ ಕೃಪಾಶೀರ್ವಾದ ಇರುವುದು ಸ್ಪಷ್ಟವಾಗುತ್ತದೆ. ಇದು ೮೦ ಪರ್ಸೆಂಟ್ […]

ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಲೋಕಾಯುಕ್ತ ಬಲೆಗೆ Read More »

ಅಬಕಾರಿ ನೀತಿ ಪರಿಷ್ಕರಣೆ ಅಕ್ರಮ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ

ನವದೆಹಲಿ : ಅಬಕಾರಿ ನೀತಿ ಪರಿಷ್ಕರಣೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಮಾ. 21ರ ಗುರುವಾರ ನಿರಾಕರಿಸಿದ್ದು, ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳ ತಂಡ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿ ಮತ್ತೊಂದು ಸಮನ್ಸ್ ಜಾರಿ ಮಾಡಿ, ವಿಚಾರಣೆ ನಡೆಸಿ ಇದೀಗ ಬಂಧಿಸಿದೆ.

ಅಬಕಾರಿ ನೀತಿ ಪರಿಷ್ಕರಣೆ ಅಕ್ರಮ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ Read More »

ಕಾಂಗ್ರೆಸ್‌ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ : ಸಚಿವರ ಸಂಬಂಧಿಕರಿಗೆ ಮಣೆ

ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ, ದ.ಕ. – ಪದ್ಮರಾಜ್‌ ನವದೆಹಲಿ : ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಮಧ್ಯೆ ಕಾಂಗ್ರೆಸ್​ ಕರ್ನಾಟಕ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ಈ ಬಾರಿ ಪ್ರಭಾವಿ ಸಚಿವರ ಸಂಬಂಧಿಕರಿಗೆ ಬಹುತೇಕ ಟಿಕೆಟ್ ನೀಡಲಾಗಿದೆ. ಪಟ್ಟಿಯಲ್ಲಿ ಪ್ರಮುಖವಾಗಿ ಸಚಿವರಾದ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೋಳಿ, ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃನಾಲ್ ರವೀಂದ್ರ ಹೆಬ್ಬಾಳ್ಕರ್, ಈಶ್ವರ್

ಕಾಂಗ್ರೆಸ್‌ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ : ಸಚಿವರ ಸಂಬಂಧಿಕರಿಗೆ ಮಣೆ Read More »

ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯಿಂದ ವಿಶ್ವ ಮಹಿಳಾ ದಿನಾಚರಣೆ

ಕಾರ್ಕಳ : ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ. 18ರಂದು ಆಚರಿಸಲಾಯಿತು. ಇಂದು ಮಹಿಳೆ ತನ್ನ ಛಾಪನ್ನು ಎಲ್ಲಾ ಕ್ಷೇತ್ರಗಳಲ್ಲು ತೊಡಗಿಸಿಕೊಂಡು ಸಮಾಜದಲ್ಲಿ ಮುಂಚೂಣಿಯಲ್ಲಿದ್ದಾಳೆ. ತೊಟ್ಟಿಲು ತೂಗುವ ಕೈ ಜಗತ್ತನ್ನೆ ಆಳಬಲ್ಲದು ಎನ್ನುವ ದಾರ್ಶನಿಕರ ಮಾತಿನಂತೆ, ಅಡುಗೆ ಮನೆಯಿಂದ ಬಾಹ್ಯಾಕಾಶದೆಡೆಗೆ ಹೆಜ್ಜೆಯನ್ನಿಟ್ಟು ಸಮಾಜದಲ್ಲಿ ಯಶಸ್ವಿ ಜೀವನವನ್ನು ನಡೆಸುತ್ತಿರುವ ಮಹಿಳೆಯರಿಗೆಲ್ಲರಿಗೂ ವಿಶ್ವ ಮಹಿಳಾ ದಿನಾಚರಣೆಯ ಶುಭಾಶಯವನ್ನು ಮಂಡಳಿಯ ಅಧ್ಯಕ್ಷೆ ನಳಿನಿ ವಿಜೇಂದ್ರ ತಿಳಿಸಿದರು. ಬಳಿಕ ವಿಶ್ವಕರ್ಮ ಸಮಾಜದ ಆದರ್ಶಪ್ರಾಯರು, ಹಿರಿಯರಾದ ಲೀಲಾವತಿ ದಾಸಪ್ಪ

ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯಿಂದ ವಿಶ್ವ ಮಹಿಳಾ ದಿನಾಚರಣೆ Read More »

ದಾಖಲೆಯ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಸಂಕಲ್ಪ : ಮೋದಿ

ಕಲ್ಬುರಗಿ : ಲೋಕಸಭೆ ಚುನಾವಣೆ 2024 ಕಾವು ಜೋರಾಗಿದೆ. ಭಾರತದ ಚುನಾವಣಾ ಆಯೋಗವು ಪತ್ರಿಕಾಗೋಷ್ಠಿ ನಡೆಸುತ್ತಿದ್ದು, ಕೆಲವೇ ನಿಮಿಷಗಳಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಈ ನಡುವೆ, ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಗೆ ಆಗಮಿಸಿದ್ದಾರೆ. ಕಲಬುರಗಿಯಲ್ಲಿ ನಡೆಯುತ್ತಿರುವ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕಲ್ಯಾಣ ಕರ್ನಾಟಕದಿಂದ ಮೋದಿ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಾರೆ. ರಾಜ್ಯಕ್ಕೆ ಮೋದಿ ಸಾಕಷ್ಟು ಅನುದಾನ ಕೊಟ್ಟಿದ್ದಾರೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ಹೆಚ್ಚು ಆಸಕ್ತಿಯನ್ನು ಮೋದಿ

ದಾಖಲೆಯ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಸಂಕಲ್ಪ : ಮೋದಿ Read More »

ಮಾ. 15 : ನಿಟ್ಟೆ ಸುಫಲ ರೈತ ಉತ್ಪಾದಕ ಮತ್ತು ಹಲಸು ಸಂಸ್ಕರಣಾ ಘಟಕದ ಉದ್ಘಾಟನಾ ಸಮಾರಂಭ

ಕಾರ್ಕಳ : ನಿಟ್ಟೆ ಸುಫಲ ರೈತ ಉತ್ಪಾದಕ ಮತ್ತು ಹಲಸು ಸಂಸ್ಕರಣಾ ಘಟಕದ ಉದ್ಘಾಟನಾ ಸಮಾರಂಭವು ಮಾ. 15ರಂದು ನೆರವೇರಲಿದೆ. ಇದರ ಉದ್ಘಾಟನೆಯನ್ನು ಡೈರೆಕ್ಟರ್‌ ನ್ಯಾಷನಲ್ ಇನ್ಸ್ಟಿಟ್ಯೂಟ್‌ ಆಫ್ ಎಂಎಸ್ಎಂಇಯ ಡಾ. ಗ್ಲೋರಿ ಸ್ವರೂಪ ಅವರು ನೆರವೇರಿಸಲಿರುವರು. ನಿಟ್ಟೆ ಪಡುಬಿದ್ರೆ ಹೆದ್ದಾರಿಯಲ್ಲಿರುವ ಈ ಘಟಕವು ಡಾ. ಎ. ಪಿ ಆಚಾರ್ಯ ಅವರ ಕನಸಿನ ಕೂಸಾಗಿದೆ. ಅವರ ಮೂಲಕ ಸುಫಲ ರೈತ ಉತ್ಪಾದಕ ಘಟಕವು ಸುಮಾರು ಮೂರು ವರುಷಗಳ ಕಾಲ ಹಲಸಿನ ಹಣ್ಣಿನ ಬಗ್ಗೆ ಅಧ್ಯಯನ ಮಾಡಿ, ಅದರಿಂದ

ಮಾ. 15 : ನಿಟ್ಟೆ ಸುಫಲ ರೈತ ಉತ್ಪಾದಕ ಮತ್ತು ಹಲಸು ಸಂಸ್ಕರಣಾ ಘಟಕದ ಉದ್ಘಾಟನಾ ಸಮಾರಂಭ Read More »

ಮಾ. 14-17 : ಅತ್ತೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ

ಕಾರ್ಕಳ : ಅತ್ತೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಶ್ರೀ ಮನ್ಮಹಾರಥೋತ್ಸವ ಮಾ. 14 ರಿಂದ ಆರಂಭಗೊಂಡು ಮಾ. 17ರಂದು ಸಂಪನ್ನಗೊಳ್ಳಲಿದೆ. ಮಾ. 14ರಂದು ಧಾರ್ಮಿಕ ವಿಧಿ ವಿಧಾನಗಳು ಜರುಗಿ, ಸಂಜೆ ಭಜನೆ, ರಾತ್ರಿಪೂಜೆ, ಬಲಿ, ರಂಗ ಪೂಜೆ ಮತ್ತು ಭೂತಬಲಿ ಸೇವೆಯು ನಡೆಯಲಿರುವುದು. ಮಾ. 15ರಂದು ಮಧ್ಯಾಹ್ನ ಮಹಾಪೂಜೆ, ಹೂವಿನ ಪೂಜೆ ಮತ್ತು ಅನ್ನಸಂತರ್ಪಣೆ ಜರುಗಲಿದ್ದು, ಪರಪ್ಪಾಡಿ ಶ್ರೀ ಕೇಶವ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮವು ಸಂಜೆ 6ಕ್ಕೆ ನಡೆಯಲಿದ್ದು, ರಾತ್ರಿ

ಮಾ. 14-17 : ಅತ್ತೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ Read More »

ಪೌರತ್ವ ತಿದ್ದುಪಡಿ ಕಾಯ್ದೆ ಶೀಘ್ರದಲ್ಲೇ ಜಾರಿ : ಇಂದು ರಾತ್ರಿ ಮೋದಿ ಸರ್ಕಾರದಿಂದ ಸಿಎಎ ಅಧಿಸೂಚನೆ?

ಹೊಸದಿಲ್ಲಿ : ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ ಮಾಡಲು ಮಾರ್ಚ್ 11, ಸೋಮವಾರ ರಾತ್ರಿ ಕೇಂದ್ರ ಸರ್ಕಾರದ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆ ಇದೆ. ಸೋಮವಾರ ರಾತ್ರಿ 8 ಗಂಟೆಗೆ ಅಧಿಸೂಚನೆ ಪ್ರಕಟ ಆಗಲಿದೆ ಅನ್ನೋ ಮಾಹಿತಿಯನ್ನ ಖಾಸಗಿ ಸುದ್ದಿ ಸಂಸ್ಥೆಗಳು ಕೇಂದ್ರ ಗೃಹ ಸಚಿವಾಲಯದ ಮೂಲಗಳನ್ನು ಆಧರಿಸಿ ವರದಿ ಮಾಡಿವೆ. ಈ ನಡುವೆ, ಕೇಂದ್ರ ಸರ್ಕಾರದ ಅಧಿಸೂಚನೆಗೂ ಮುನ್ನವೇ ಪ್ರಧಾನಿ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಅನ್ನೋ ಮಾಹಿತಿಗಳೂ ಇವೆ. ಸಿಎಎ ಜಾರಿ ಬಗ್ಗೆ

ಪೌರತ್ವ ತಿದ್ದುಪಡಿ ಕಾಯ್ದೆ ಶೀಘ್ರದಲ್ಲೇ ಜಾರಿ : ಇಂದು ರಾತ್ರಿ ಮೋದಿ ಸರ್ಕಾರದಿಂದ ಸಿಎಎ ಅಧಿಸೂಚನೆ? Read More »

ಮಂಗಳೂರು: ಕರ್ಣಾಟಕ ಬ್ಯಾಂಕ್​ನಲ್ಲಿ ಕೋಟ್ಯಂತರ ನಗದು, ಚಿನ್ನಾಭರಣ ದೋಚಿದ್ದ ಮೂವರ ಬಂಧನ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಭಾರೀ ಕಳ್ಳತನ ನಡೆದಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ಯಂತರ ನಗದು ಮತ್ತು ಚಿನ್ನಾಭರಣ ದೋಚಿದ್ದ ಮೂವರವನ್ನು ಪುತ್ತೂರು ಉಪವಿಭಾಗದ ಪೊಲೀಸರ ತಂಡ ಬಂಧಿಸಿದೆ. ಬಂಟ್ವಾಳದ ಮಹಮ್ಮದ್ ರಫೀಕ್ ( 35 ), ಮಂಜೇಶ್ವರದ ಇಬ್ರಾಹಿಂ ಕಲಂದರ್ (41) ಹಾಗೂ ಮಂಜೇಶ್ವರದ ದಯಾನಂದ ಎಸ್ (37) ಬಂಧಿತರು. ಘಟನೆ ನಡೆದು ಒಂದು ತಿಂಗಳ ಬಳಿಕ ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ.

ಮಂಗಳೂರು: ಕರ್ಣಾಟಕ ಬ್ಯಾಂಕ್​ನಲ್ಲಿ ಕೋಟ್ಯಂತರ ನಗದು, ಚಿನ್ನಾಭರಣ ದೋಚಿದ್ದ ಮೂವರ ಬಂಧನ Read More »

ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಿಂದ ಹೊಡೆದ ಸೊಸೆ, ಬಂಧನ

ಮಂಗಳೂರು : ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಲ್ಲಿ ಸೊಸೆ ಹೊಡೆದಿರುವಂತಹ ಅಮಾನವೀಯ ಘಟನೆಯೊಂದು ನಗರದಲ್ಲಿ ನಡೆದಿದೆ. ಮಾರ್ಚ್ 9 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಉಮಾಶಂಕರಿ ಎಂಬುವವರಿಂದ ಕೃತ್ಯವೆಸಲಾಗಿದೆ. ಮಾವ ಪದ್ಮನಾಭ ಸುವರ್ಣ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಲಾಗಿದೆ. ಪತಿ ವಿದೇಶದಲ್ಲಿದ್ದು ಮನೆಯಲ್ಲಿ ಮಾವ ಅತ್ತೆ ಮಾತ್ರ ಇದ್ದರು. ಸಿಸಿಟಿವಿ ಆಧರಿಸಿ ಪತಿ ಠಾಣೆಗೆ ದೂರು ನೀಡಿದ್ದು, ಕಂಕನಾಡಿ ಪೊಲೀಸರಿಂದ ಉಮಾಶಂಕರಿಯನ್ನು ಬಂಧಿಸಲಾಗಿದೆ.

ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಿಂದ ಹೊಡೆದ ಸೊಸೆ, ಬಂಧನ Read More »

error: Content is protected !!
Scroll to Top