Author name: newskarkala desk

ಕ್ರೈಸ್ಟ್‌ಕಿಂಗ್‌ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ

ನ್ಯೂಸ್‌ ಕಾರ್ಕಳ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರ ಬರೆಪ್ಪಾಡಿ ಅವರಿಗೆ ಸನ್ಮಾನ ಕಾರ್ಕಳ : ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಅದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಆಳ್ವಾಸ್‌ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್‌ ಶೆಟ್ಟಿ ಹೇಳಿದರು.ಅವರು ಜು. 9ರಂದು ಕಾರ್ಕಳ ಕ್ರೈಸ್ಟ್‌ಕಿಂಗ್‌ನಲ್ಲಿ ನಡೆದ ಪತ್ರಿಕಾ ದಿನಾಚರಣೆ – ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪ್ರತಿನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಓದು ನಿಮ್ಮ ಭವಿಷ್ಯಕ್ಕೆ ಹೊಸ ದಾರಿ ತೋರಲಿದೆ ಎಂದರು. ಸನ್ಮಾನಮಾಧ್ಯಮ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಕ್ರೈಸ್ಟ್‌ಕಿಂಗ್‌ […]

ಕ್ರೈಸ್ಟ್‌ಕಿಂಗ್‌ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ Read More »

ಅಂತಾರಾಷ್ಟ್ರೀಯ ತುಳುವ ಮಹಾಸಭಾ – ಗೋವಾ ಅಧ್ಯಕ್ಷರಾಗಿ ಗಣೇಶ್‌ ಶೆಟ್ಟಿ ಇರ್ವತ್ತೂರು

ಗೋವಾ : 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಅಂತಾರಾಷ್ಟ್ರೀಯ ತುಳುವ ಮಹಾಸಭಾ ಗೋವಾ ರಾಜ್ಯ ಅಧ್ಯಕ್ಷರಾಗಿ ಉದ್ಯಮಿ, ಸಾಮಾಜಿಕ ಮುಂದಾಳು, ತುಳುಕೂಟ ಗೋವಾದ ಅಧ್ಯಕ್ಷ ಗಣೇಶ್ ಶೆಟ್ಟಿ ಇರ್ವತ್ತೂರು ಆಯ್ಕೆಯಾಗಿದ್ದಾರೆ. ಗೋವಾದಲ್ಲಿ ತುಳು ಭಾಷೆ, ಸಂಸ್ಕೃತಿ ಮತ್ತು ಪರಂಪರೆಯ ಉಳಿವು-ಬೆಳವಣಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಗಣೇಶ್‌ ಶೆಟ್ಟಿ ಅವರು ತುಳುಕೂಟ ಗೋವಾ ಅಧ್ಯಕ್ಷರಾಗಿ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಸಮುದಾಯದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಿ, ಗೋವಾದ ತುಳುವರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅವರ ಸಂಘಟನಾ ಕಾರ್ಯವನ್ನು ಪರಿಗಣಿಸಿ ತುಳುವ ಮಹಾಸಭಾದ ಅಂತಾರಾಷ್ಟ್ರೀಯ

ಅಂತಾರಾಷ್ಟ್ರೀಯ ತುಳುವ ಮಹಾಸಭಾ – ಗೋವಾ ಅಧ್ಯಕ್ಷರಾಗಿ ಗಣೇಶ್‌ ಶೆಟ್ಟಿ ಇರ್ವತ್ತೂರು Read More »

ಮುಂದಿನ ಒಂದು ವಾರ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 1 ವಾರ ಅಂದರೆ ಜೂನ್ 30 ರಿಂದ ಜುಲೈ 6 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಜಿಲ್ಲೆಯಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ಸಾರ್ವಜನಿಕರು, ಮಕ್ಕಳು ಹಾಗೂ ಕಾರ್ಮಿಕರು ಮಳೆ,

ಮುಂದಿನ ಒಂದು ವಾರ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ Read More »

ಸರಕು ಸಾಗಾಣಿಕೆ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ : ಡಿಸಿ ಸ್ವರೂಪ

ಪ್ರಯಾಣಿಕರು ಕಸ, ನೀರಿನ ಬಾಟಲ್‌ ಎಲ್ಲೆಂದರಲ್ಲಿ ಎಸೆಯಬಾರದು ಉಡುಪಿ : ಸಾರ್ವಜನಿಕ ವಾಹನಗಳು ಸುರಕ್ಷಿತ ಹಾಗೂ ಸುಗಮವಾಗಿ ರಸ್ತೆಗಳಲ್ಲಿ ಸಂಚರಿಸಲು ಅಗತ್ಯವಿರುವ ವೈಜ್ಞಾನಿಕ ರೀತಿಯಲ್ಲಿ ರಸ್ತೆಗಳ ನಿರ್ವಹಣೆ ಮಾಡುವುದರ ಜೊತೆಗೆ ಸರಕು ಸಾಗಣೆ ವಾಹನಗಳಿಗೆ 60 ಕಿ.ಮೀ. ಪ್ರತಿ ಗಂಟೆಗೆ ವೇಗದ ಮಿತಿ ಸ್ಪೀಡ್ ಗವರ್ನರ್‌ಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜೂ. 29ರಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ

ಸರಕು ಸಾಗಾಣಿಕೆ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ : ಡಿಸಿ ಸ್ವರೂಪ Read More »

ಕಾರ್ಕಳ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಗೆ NABH ಮಾನ್ಯತೆ

ಉಡುಪಿ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಅಧೀನದಲ್ಲಿರುವ ಕಾರ್ಕಳ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯು ರಾಷ್ಟ್ರೀಯ ಆಸ್ಪತ್ರೆಗಳು ಮತ್ತು ಆರೋಗ್ಯ ಸೇವಾ ಪೂರೈಕೆದಾರರ ಮಾನ್ಯತಾ ಮಂಡಳಿ (NABH) ಯಿಂದ ಮಾನ್ಯತೆ ಪಡೆದಿದೆ. ಆಸ್ಪತ್ರೆಯು NABH ಆಸ್ಪತ್ರೆಗಳ ಮಾನ್ಯತಾ ಮಾನದಂಡಗಳ 6ನೇ ಆವೃತ್ತಿಯ ಎಲ್ಲಾ ಅಗತ್ಯ ಮಾನದಂಡಗಳನ್ನು ಪೂರೈಸಿರುವುದಾಗಿ ದೃಢೀಕರಿಸಲಾಗಿದೆ. ಈ ಮಾನ್ಯತೆ ಆಸ್ಪತ್ರೆಯ 80 ಹಾಸಿಗೆಗಳಿಗೆ ಅನ್ವಯವಾಗಿದ್ದು 2026ರ ಮೇ 21ರಿಂದ 2030ರ ಮೇ 20ರವರೆಗೆ ಮಾನ್ಯವಾಗಿರುತ್ತದೆ. NABH ಅನ್ನು ಅಂತಾರಾಷ್ಟ್ರೀಯ

ಕಾರ್ಕಳ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಗೆ NABH ಮಾನ್ಯತೆ Read More »

ಕೆಎಂಇಎಸ್‌ ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

ಗುರು – ಗುರಿಯಿಂದ ಶೈಕ್ಷಣಿಕ ಪ್ರಗತಿ : ಕಮಲಾಕ್ಷ ಕಾಮತ್ ಕಾರ್ಕಳ : ಸಂಪಾದಿಸಿದ ಹಣದಲ್ಲಿ ಒಂದು ಭಾಗವನ್ನು ದಾನ ಮಾಡಿದಾಗ ಜೀವನ ಸಾರ್ಥಕ್ಯವಾಗಲಿದೆ ಎಂದು ನಿವೃತ್ತ ಲೆಕ್ಕಪರಿಶೋಧಕ ಕಮಲಾಕ್ಷ ಕಾಮತ್‌ ಅಭಿಪ್ರಾಯಪಟ್ಟರು.ಅವರು ಜೂ. 24ರಂದು ಕೆಎಂಇಎಸ್‌ ಶಾಲೆಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾದಾನವೂ ಶ್ರೇಷ್ಠ ದಾನಗಳಲ್ಲಿ ಒಂದು. ಜೀವನಕ್ಕೆ ಅರ್ಥ ಬರುವುದೇ ಇತರರಿಗಾಗಿ ಬದುಕಿದಾಗ ಎಂದರು.ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ಸ್ಪಷ್ಟ ಗುರಿಯನ್ನು ಹೊಂದಿರಬೇಕು. ಗುರು ಮತ್ತು ಗುರಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ಸಾಧ್ಯ. ಕೆ.ಎಂ.ಇ.ಎಸ್‌. ವಿದ್ಯಾಸಂಸ್ಥೆ

ಕೆಎಂಇಎಸ್‌ ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ Read More »

ಬೆಳೆ ವಿಮೆ ಯೋಜನೆ ನೋಂದಣಿಗೆ ಜೂ. 30 ಕೊನೆ ದಿನ

ಅಡಿಕೆ, ಕಾಳುಮೆಣಸು ಬೆಳೆಗಾರರಿಂದ ಅರ್ಜಿ ಸ್ವೀಕಾರ ಉಡುಪಿ : ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದಾಗಿ ಉಂಟಾಗುವ ಬೆಳೆ ನಷ್ಟಕ್ಕೆ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮದಡಿ ನೊಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ನಮೂದಾಗಿರುವ ಬೆಳೆ ವಿಸ್ತೀರ್ಣಕ್ಕೆ ಅನುಗುಣವಾಗಿ ವಿಮಾ ಮೊತ್ತವನ್ನು ಪಾವತಿಸಿ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.ಯೋಜನೆಯಡಿ ನೊಂದಣಿ ಮಾಡಿಸಲು ಜೂ. 30 ಕೊನೆಯ ದಿನವಾಗಿದ್ದು, ರೈತರು ವಿಮಾ ಕಂತುಗಳನ್ನು ಪಾವತಿಸಲು ನಿಗದಿತ

ಬೆಳೆ ವಿಮೆ ಯೋಜನೆ ನೋಂದಣಿಗೆ ಜೂ. 30 ಕೊನೆ ದಿನ Read More »

ಕ್ರೈಸ್ಟ್‌ಕಿಂಗ್‌ ಶಿಕ್ಷಣ ಸಂಸ್ಥೆಯಲ್ಲಿ ಯೋಗ ದಿನಾಚರಣೆ

ಕಾರ್ಕಳ : ಆರೋಗ್ಯಕರ ಜೀವನಕ್ಕೆ ಯೋಗವೇ ಸರಳ ಮತ್ತು ಪರಿಣಾಮಕಾರಿ ಮಾರ್ಗ. ಬೆಳಗ್ಗಿನ ಓದು ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸಿದರೆ, ಯೋಗವು ಆರೋಗ್ಯವನ್ನು ಕಾಪಾಡುತ್ತದೆ. ವಿದ್ಯಾರ್ಥಿಗಳು ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಆರೋಗ್ಯ ವೃದ್ಧಿಸುವುದು ಎಂದು ಕಾರ್ಕಳ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯ ವಿನಾಯಕ ಕುಡ್ವ ಹೇಳಿದರು. ಅವರು ಕ್ರೈಸ್ಟ್‌ಕಿಂಗ್‌ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಮಾತನಾಡಿದರು. ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕ ಐ. ಕ್ರಿಸ್ಟೋಫರ್ ಕೋಟ್ಯಾನ್‌ ಮಾತನಾಡಿ, ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ

ಕ್ರೈಸ್ಟ್‌ಕಿಂಗ್‌ ಶಿಕ್ಷಣ ಸಂಸ್ಥೆಯಲ್ಲಿ ಯೋಗ ದಿನಾಚರಣೆ Read More »

ಭಾರತದ ಆಧ್ಯಾತ್ಮ, ಆಯುರ್ವೇದ, ಯೋಗ ಜಗತ್ತನ್ನೇ ಆಕರ್ಷಿಸುತ್ತಿದೆ – ಸುನಿಲ್‌ ಕುಮಾರ್‌ ಅಭಿಮತ

ಯೋಗಗುರುಗಳಾದ ಕೃಷ್ಣ ಆಚಾರ್ಯ – ಸುಲೋಚನಾ ನಾಯಕ್‌ ಅವರಿಗೆ ಸನ್ಮಾನ ಕಾರ್ಕಳ : ಭಾರತದ ಆಧ್ಯಾತ್ಮ, ಆಯುರ್ವೇದ, ಯೋಗ ಇಂದು ಜಗತ್ತನ್ನೇ ತನ್ನತ್ತ ಆಕರ್ಷಿಸುತ್ತಿದೆ ಎಂದು ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದರು.ಅವರು ಜೂ. 21ರಂದು ಕಾರ್ಕಳ ರಾಮಮಂದಿರದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಮಾತನಾಡಿ, ಯೋಗವು ಭಾರತದ ಪ್ರಾಚೀನ ಮತ್ತು ಅಮೂಲ್ಯ ಪರಂಪರೆಯಾಗಿದೆ. ದೇಹ, ಮನಸ್ಸಿನ ಸಮಾತೋಲನ ಕಾಪಾಡುವಲ್ಲಿ ಯೋಗ ಸಹಕಾರಿಯಾಗುವುದು ಎಂದರು.ಯೋಗಗುರುಗಳಾದ ಕೃಷ್ಣ ಆಚಾರ್ಯ ಹಾಗೂ ಸುಲೋಚನಾ ಟೀಚರ್‌ ಅವರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ

ಭಾರತದ ಆಧ್ಯಾತ್ಮ, ಆಯುರ್ವೇದ, ಯೋಗ ಜಗತ್ತನ್ನೇ ಆಕರ್ಷಿಸುತ್ತಿದೆ – ಸುನಿಲ್‌ ಕುಮಾರ್‌ ಅಭಿಮತ Read More »

ಅಂಬೇಡ್ಕರ್‌ ಭವನ ನಿರ್ವಹಣಾ ಸಮಿತಿ ಸಮುದಾಯದ ಬದಲು ರಾಜಕೀಯ ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದೆ – ಶ್ರೀನಿವಾಸ್‌ ಕಾರ್ಲ ಟೀಕೆ

ಕಾರ್ಕಳ : ಅಣ್ಣಪ್ಪ ನಕ್ರೆ ಮತ್ತು ಪ್ರತಿಮಾ ರಾಣೆ ಹೇಳಿಕೆಯನ್ನು ಗಮನಿಸಿದಾಗ ಅಂಬೇಡ್ಕರ್ ಭವನದ ನಿರ್ವಹಣಾ ಸಮಿತಿ ಕಾರ್ಕಳದ ದಲಿತ ಸಮುದಾಯದ ಪರವಾಗಿ ಕೆಲಸ ಮಾಡುವ ಬದಲು ಒಂದು ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡುತ್ತಿದೆ ಎಂದೆನಿಸುತ್ತಿದೆ. ರಾಜಕೀಯ ಪ್ರೇರಣೆಯಿಂದ ಕೆಲಸ ನಿರ್ವಹಿಸುತ್ತಿದೆ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಕಾರ್ಕಳ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಶ್ರೀನಿವಾಸ ಕಾರ್ಲ ತಿಳಿಸಿದ್ದಾರೆ. ಅಂಬೇಡ್ಕರ್ ಭವನದ ಆವರಣ ಗೋಡೆ, ನೀರಿನ ವ್ಯವಸ್ಥೆ ಮತ್ತು ಆಸನದ ವ್ಯವಸ್ಥೆ ಸೇರಿದಂತೆ ಹಲವು ಕಾಮಗಾರಿಗಳು ಇನ್ನೂ

ಅಂಬೇಡ್ಕರ್‌ ಭವನ ನಿರ್ವಹಣಾ ಸಮಿತಿ ಸಮುದಾಯದ ಬದಲು ರಾಜಕೀಯ ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದೆ – ಶ್ರೀನಿವಾಸ್‌ ಕಾರ್ಲ ಟೀಕೆ Read More »

error: Content is protected !!
Scroll to Top