Author name: newskarkala desk

ಪುರಸಭಾ ಮಾಜಿ ಸದಸ್ಯೆ ನಾಗವೇಣಿ ನಿಧನ

ಕಾರ್ಕಳ : ಪುರಸಭೆ ಮಾಜಿ ಸದಸ್ಯೆ, ಶತಾಯುಷಿ ನಾಗವೇಣಿ (100 ವ.) ಎ. 30ರಂದು ನಿಧನ ಹೊಂದಿದರು. ಪೆರ್ವಾಜೆ ದೂಳಬೆಟ್ಟುವಿನ ನಾಗವೇಣಿ ಅವರು ಸಿಂಡಿಕೇಟ್ ಬ್ಯಾಂಕಿನ ಉದ್ಯೋಗಿಯಾಗಿದ್ದರು. ಶ್ರೀ ಭುವನೇಂದ್ರ ಹೈಸ್ಕೂಲ್ ಕಾರ್ಕಳ ಇಲ್ಲಿ 15 ವರ್ಷ ಟೈಲರಿಂಗ್ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ್ದ ಅವರು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಇಳಿವಯಸ್ಸಿನಲ್ಲೂ ಯೋಗ ಮತ್ತು ಜಪದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ನಾಗವೇಣಿ ಅವರು ಅತ್ಯಂತ ಚುರುಕಿನಿಂದಿದ್ದರು ಎಂದು ಸ್ಥಳೀಯರು ಹೇಳುತ್ತಾರೆ. ಮೃತರು ಇಬ್ಬರು ಪುತ್ರಿಯರು, ಇಬ್ಬರು ಪುತ್ರರನ್ನು ಅಗಲಿದ್ದಾರೆ. […]

ಪುರಸಭಾ ಮಾಜಿ ಸದಸ್ಯೆ ನಾಗವೇಣಿ ನಿಧನ Read More »

ಲೋಕಾಯುಕ್ತ ದಾಳಿ, ವಿಚಾರಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ ಪಿಡಿಓ

ಗದಗ : ಲೋಕಾಯುಕ್ತ ದಾಳಿಯ ಬಳಿಕ ಮಾನಸಿಕ ಒತ್ತಡಕ್ಕೆ ಸಿಲುಕಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೋಣ ತಾಲೂಕಿನ ಅಸೂಟಿ ಹಾಗೂ ಕೊತಬಾಳ ಗ್ರಾಮದ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಕ್ತುಂಹುಸೇನ ಕರಡಿಗುಡ್ಡ (46) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೂಲತಃ ಧಾರವಾಡ ಜಿಲ್ಲೆಯವರಾದ ಮಕ್ತುಂಹುಸೇನ ಕರಡಿಗುಡ್ಡ ಅವರು ರೋಣ ಪಟ್ಟಣದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಸತತ ಎರಡು ದಿನಗಳಿಂದ ಅವರು ಪತ್ನಿಯ ಕರೆಗೆ ಸ್ಪಂದಿಸಿರಲಿಲ್ಲ. ಪತಿ ಫೋನ್ ಸ್ವೀಕರಿಸದ ಕಾರಣ ಗಾಬರಿಗೊಂಡ ಪತ್ನಿ, ಬಾಡಿಗೆ ಮನೆಯ

ಲೋಕಾಯುಕ್ತ ದಾಳಿ, ವಿಚಾರಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ ಪಿಡಿಓ Read More »

ತಿರುಪತಿ ಲಡ್ಡುಗೆ ನಂದಿನಿ ತುಪ್ಪ ಸರಬರಾಜು – 136 ಕೋಟಿ ರೂ. ಒಪ್ಪಂದ

ಬೆಂಗಳೂರು : ತಿರುಪತಿ ಲಡ್ಡು ತಯಾರಿಕೆಯಲ್ಲಿ ಕರ್ನಾಟಕದ ʼನಂದಿನಿ’ ತುಪ್ಪದ ಘಮಲು ಮತ್ತೆ ಮರಳಿದೆ. ಬಮೂಲ್‌ (ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಬೆಂಗಳೂರು ದಕ್ಷಿಣ) ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು ತಿರುಪತಿ ದೇವಸ್ಥಾನಕ್ಕೆ (ಟಿಟಿಡಿ) ನಂದಿನಿ ತುಪ್ಪ ಸರಬರಾಜು ಮಾಡಲು ಒಪ್ಪಂದ ಮಾಡಿಕೊಂಡಿದೆ. ತಿರುಪತಿ ಲಡ್ಡು ತಯಾರಿಕೆಗೆ 2 ದಶಕಗಳಿಂದ ಕರ್ನಾಟಕದ ಪ್ರಸಿದ್ಧ ಸಂಸ್ಥೆ ನಂದಿನಿ ತುಪ್ಪವನ್ನೇ ಬಳಸಲಾಗುತ್ತಿತ್ತು. ಆದರೆ, 2022-23ನೇ ಸಾಲಿನಲ್ಲಿ ದರದ ವಿಚಾರದಲ್ಲಿ ನಂದಿನಿ ತುಪ್ಪದ ಪೂರೈಕೆ ಸ್ಥಗಿತವಾಗಿತ್ತು. 2024ರಲ್ಲಿ ತಿರುಪತಿ

ತಿರುಪತಿ ಲಡ್ಡುಗೆ ನಂದಿನಿ ತುಪ್ಪ ಸರಬರಾಜು – 136 ಕೋಟಿ ರೂ. ಒಪ್ಪಂದ Read More »

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ – ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ

ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ ಸಂಬಂಧ ಪೊಲೀಸ್‌ ವಶದಲ್ಲಿದ್ದ ಆತನ ಪತ್ನಿ ಸೌಮ್ಯ ಶೆಟ್ಟಿಗೆ ಉಡುಪಿ ಸೆಸನ್ಸ್‌ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಮಾ. 22ರಂದು ಸುದೀಪ್ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಸೌಮ್ಯ ಶೆಟ್ಟಿ ಪ್ರಚೋದನೆ ಕಾರಣ ಎಂದು ಸುದೀಪ್‌ ತಂದೆ ದಾಮೋದರ್ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಸೌಮ್ಯ ಶೆಟ್ಟಿಯನ್ನು ಎ. 11ರಂದು ಉಡುಪಿಯಲ್ಲಿ ಪೊಲೀಸರು ಬಂಧಿಸಿದ್ದರು. ಬಳಿಕ ಜಾಮೀನಿಗಾಗಿ ಸೌಮ್ಯ ಶೆಟ್ಟಿ ಉಡುಪಿ ಸೆಸನ್ಸ್‌ ನ್ಯಾಯಾಲಯಕ್ಕೆ ಅರ್ಜಿ

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ – ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ Read More »

ಮರುಮೌಲ್ಯಮಾಪನ – ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದ ಕ್ರೈಸ್ಟ್‌ಕಿಂಗ್‌ನ ಪ್ರಜ್ವಲ್‌ ಶೆಟ್ಟಿ

ಕಾರ್ಕಳ : ದ್ವಿತೀಯ ಪಿಯುಸಿ ಮರುಮೌಲ್ಯಮಾಪನದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರಜ್ವಲ್ ಶೆಟ್ಟಿ 597 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ನಾಲ್ಕನೇ ರ‍್ಯಾಂಕ್ ಹಾಗೂ ಉಡುಪಿ ಜಿಲ್ಲೆಗೆ ದ್ವಿತೀಯ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಇದಕ್ಕೂ ಮೊದಲು ರಾಜ್ಯಕ್ಕೆ ಐದನೇ ರ‍್ಯಾಂಕ್ ಪಡೆದಿದ್ದ ಪ್ರಜ್ವಲ್ ಶೆಟ್ಟಿ ವ್ಯವಹಾರ ಅಧ್ಯಯನ ವಿಷಯದಲ್ಲಿ ಒಂದು ಹೆಚ್ಚವರಿ ಅಂಕವನ್ನು ಪಡೆಯುವ ಮೂಲಕ ರ‍್ಯಾಂಕ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದ್ದಾನೆ. ಇರ್ವತ್ತೂರು ನಿವಾಸಿ ರಿಕ್ಷಾ ಚಾಲಕ ಪ್ರಕಾಶ್ ಶೆಟ್ಟಿ ಮತ್ತು ಜ್ಯೋತಿ

ಮರುಮೌಲ್ಯಮಾಪನ – ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದ ಕ್ರೈಸ್ಟ್‌ಕಿಂಗ್‌ನ ಪ್ರಜ್ವಲ್‌ ಶೆಟ್ಟಿ Read More »

ಮರುಮೌಲ್ಯಮಾಪನ : ಜ್ಞಾನಸುಧಾದ 59 ವಿದ್ಯಾರ್ಥಿಗಳಿಗೆ ರಾಜ್ಯಕ್ಕೆ ಅಗ್ರ 10ರೊಳಗಿನ ರ‍್ಯಾಂಕ್

ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದ ಮಣಿಪಾಲ ಜ್ಞಾನಸುಧಾದ ಅಶ್ವಿನ್‌ ಕಾರ್ಕಳ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಶ್ವಿನ್ ವಿ. ಶೆಟ್ಟಿ 597 ಅಂಕದೊಂದಿಗೆ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದಾರೆ. ಈಗಾಗಲೇ ಪ್ರಕಟಗೊಂಡ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾದ ವೈಷ್ಣವಿ ಕುಲಕರ್ಣಿ, ಚೈತ್ರಿಕಾ ಚೌದರಿ ಹಾಗೂ ಉಡುಪಿ ಜ್ಞಾನಸುಧಾದ ಆರ್ನವಿ ವಿಜ್ಞಾನ ವಿಭಾಗದಲ್ಲಿ 597 ಅಂಕಗಳನ್ನು ಪಡೆದಿದ್ದು ಒಟ್ಟು ಜ್ಞಾನಸುಧಾದ ನಾಲ್ವರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೂರನೇ

ಮರುಮೌಲ್ಯಮಾಪನ : ಜ್ಞಾನಸುಧಾದ 59 ವಿದ್ಯಾರ್ಥಿಗಳಿಗೆ ರಾಜ್ಯಕ್ಕೆ ಅಗ್ರ 10ರೊಳಗಿನ ರ‍್ಯಾಂಕ್ Read More »

ನನ್ನ ನಾಯಕತ್ವದಲ್ಲೇ ಜನರು 136 ಶಾಸಕರನ್ನು ಗೆಲ್ಲಿಸಿರುವುದು – ಕಾಂಗ್ರೆಸ್‌ನಲ್ಲಿ ಸಂಚಲನ ಸೃಷ್ಟಿಸಿದ ಡಿಕೆಶಿ ಮಾತು

ಬೆಂಗಳೂರು : ನನ್ನ ನಾಯಕತ್ವದಲ್ಲೇ ಜನತೆ 136 ಶಾಸಕರನ್ನು ಗೆಲ್ಲಿಸಿರುವುದು ಎಂದು ಡಿ.ಕೆ. ಶಿವಕುಮಾರ್‌ ಹೇಳಿರುವುದು ಕಾಂಗ್ರೆಸ್ ಪಾಳಯದಲ್ಲಿ ಸಂಚಲನವನ್ನುಂಟು ಮಾಡಿದೆ.2023ರ ವಿಧಾನಸಭೆ ಚುನಾವಣೆ ವೇಳೆ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದರೆ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದರು. ಇಬ್ಬರೂ ರಾಜ್ಯಾದ್ಯಂತ ಪ್ರವಾಸ ಮಾಡಿ ಚುನಾವಣಾ ಪ್ರಚಾರ ನಡೆಸಿದ್ದರು. ಇಬ್ಬರು ನಾಯಕರ ನೇತೃತ್ವದಲ್ಲೇ ಕಾಂಗ್ರೆಸ್ ಚುನಾವಣೆಯನ್ನು ಎದುರಿಸಿತ್ತು. ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಡಿ.ಕೆ. ಶಿವಕುಮಾರ್, ಕರ್ನಾಟಕದ ಜನತೆ 136 ಶಾಸಕರನ್ನು ನನ್ನ ನಾಯಕತ್ವದಲ್ಲಿ ಗೆಲ್ಲಿಸಿದ್ದಾರೆ. ನಾಯಕತ್ವ

ನನ್ನ ನಾಯಕತ್ವದಲ್ಲೇ ಜನರು 136 ಶಾಸಕರನ್ನು ಗೆಲ್ಲಿಸಿರುವುದು – ಕಾಂಗ್ರೆಸ್‌ನಲ್ಲಿ ಸಂಚಲನ ಸೃಷ್ಟಿಸಿದ ಡಿಕೆಶಿ ಮಾತು Read More »

ಶಾಲೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ನಿಷೇಧ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಶಾಲೆ, ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ, ವಾರ್ಷಿಕೋತ್ಸವಗಳಲ್ಲಿ ವಿದ್ಯಾರ್ಥಿಗಳು ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ.ಅಶ್ಲೀಲ ಹಾಡುಗಳು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಜೊತೆಗೆ ಶಿಸ್ತಿನ ಅಭಾವದ ಸಾಧ್ಯತೆ ಇದೆ ಅಲ್ಲದೇ ಶಿಕ್ಷಣ ಸಂಸ್ಥೆಗಳ ಗೌರವಕ್ಕೂ ಧಕ್ಕೆಯುಂಟಾಗಲಿದೆ ಎಂದು ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ. ಜೀವನ ಮೌಲ್ಯಗಳು, ಶಿಸ್ತು ವಿದ್ಯಾರ್ಥಿಗಳು ಬಾಲ್ಯದಲ್ಲೇ ಅಳವಡಿಸಿಕೊಳ್ಳುತ್ತಾರೆ. ಶಾಲೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಹೆಸರಲ್ಲಿ ಅಸಭ್ಯ,

ಶಾಲೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ನಿಷೇಧ : ಶಿಕ್ಷಣ ಇಲಾಖೆ ಆದೇಶ Read More »

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಪಕ್ಕಾ – ಇಕ್ಬಾಲ್‌ ಹುಸೇನ್‌

ರಾಮನಗರ : ಡಿ. ಕೆ. ಶಿವಕುಮಾರ್ ಮೇ 15ಕ್ಕೆ ಮುಖ್ಯಮಂತ್ರಿ ಆಗೋದು ಫಿಕ್ಸ್ ಆಗಿದೆ. ಹಿಂದೆ ನಾನು ಎರಡ್ಮೂರು ದಿನಾಂಕ ಹೇಳಿದ್ದಾಗ್ಯೂ ವಿವಿಧ ಕಾರಣಕ್ಕಾಗಿ ಆಗಿರಲಿಲ್ಲ. ಈಗಿನದು ಅಂತಿಮ ದಿನಾಂಕ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.ಮೇ 15ರಂದು ನಮ್ಮ ನಾಯಕನ ಜನ್ಮದಿನ. ಅಂದು ಮುಖ್ಯಮಂತ್ರಿ ಹುದ್ದೆಯ ಉಡುಗೊರೆ ದೊರೆಯಲಿದೆ. ಈ ಅವಧಿಯಲ್ಲೇ ಅವರು ಸಿಎಂ ಆಗಬೇಕು ಮತ್ತು ಅವರ ನಾಯಕತ್ವದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳಾಗಬೇಕು ಎಂಬುದು ಎಲ್ಲರ ಬಯಕೆ ಎಂದು ಕೇತೋಹಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರ

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಪಕ್ಕಾ – ಇಕ್ಬಾಲ್‌ ಹುಸೇನ್‌ Read More »

ಪಿಯುಸಿ ಶಿಕ್ಷಣದೊಂದಿಗೆ ಸಿಇಟಿ, ನೀಟ್‌, ಜೆಇಇ ತರಬೇತಿಗೆ ಒಬಿಸಿ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಸತಿ ಸಹಿತ ಉಚಿತವಾಗಿ ಪಿ.ಯು.ಸಿ (ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗ) ಶಿಕ್ಷಣದೊಂದಿಗೆ ನೀಟ್, ಜೆಇಇ ಮತ್ತು ಸಿಇಟಿ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಅಥವಾ 3ಬಿ ಜಾತಿಗೆ ಸೇರಿರುವ, ಕುಟುಂಬದ ಒಟ್ಟು ವಾರ್ಷಿಕ ಆದಾಯ 8 ಲಕ್ಷ ರೂ. ಒಳಗಿರುವ ಹಾಗೂ ಎಸ್.ಎಸ್.ಎಲ್.ಸಿ ವ್ಯಾಸಾಂಗವನ್ನು ಸರಕಾರಿ ವಸತಿ ರಹಿತ ಶಾಲೆಯಲ್ಲಿ ಪೂರೈಸುವುದರೊಂದಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಕನಿಷ್ಠ 90

ಪಿಯುಸಿ ಶಿಕ್ಷಣದೊಂದಿಗೆ ಸಿಇಟಿ, ನೀಟ್‌, ಜೆಇಇ ತರಬೇತಿಗೆ ಒಬಿಸಿ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ Read More »

error: Content is protected !!
Scroll to Top