ಮೇ 26ರಿಂದ ಮುಂಗಾರು ಮಳೆ ಮುನ್ಸೂಚನೆ – ವಿಕೋಪ ನಿಭಾಯಿಸಲು ಮುಂದಾಗುವಂತೆ ಜಿಲ್ಲಾಧಿಕಾರಿ ಕರೆ
ಉಡುಪಿ : ಮೇ 26 ರಿಂದ ಮುಂಗಾರು ಮಳೆಯಾಗುವ ಮುನ್ಸೂಚನೆಯಿದ್ದು, ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ಅವಘಡಗಳ ಪರಿಸ್ಥಿತಿಗಳನ್ನು ಎದುರಿಸಲು ಎಲ್ಲ ಇಲಾಖಾಧಿಕಾರಿಗಳು ರಕ್ಷಣಾ ಸಾಮಗ್ರಿಗಳೊಂದಿಗೆ ಸನ್ನದ್ಧರಾಗಬೇಕು. ಅಗತ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಪ್ರಕೃತಿ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮೇ 19ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆ (ಮಾನ್ಸೂನ್) ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]
ಮೇ 26ರಿಂದ ಮುಂಗಾರು ಮಳೆ ಮುನ್ಸೂಚನೆ – ವಿಕೋಪ ನಿಭಾಯಿಸಲು ಮುಂದಾಗುವಂತೆ ಜಿಲ್ಲಾಧಿಕಾರಿ ಕರೆ Read More »










