Author name: newskarkala desk

ವಿಶ್ವ ಹೆಪಟೈಟಿಸ್ ದಿನಾಚರಣೆ ಅಂಗವಾಗಿ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಯಕೃತ್ ಆರೋಗ್ಯ ಜಾಗೃತಿ ಕಾರ್ಯಕ್ರಮ

ಕಾರ್ಕಳ : ವಿಶ್ವ ಹೆಪಟೈಟಿಸ್ ದಿನಾಚರಣೆಯ ಅಂಗವಾಗಿ ಕಾರ್ಕಳ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಕಾರ್ಕಳ ಹಾಗೂ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಸಹಯೋಗದಲ್ಲಿ ಯಕೃತ್ ಆರೋಗ್ಯ ಮತ್ತು ಹೆಪಟೈಟಿಸ್ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಪ್ರಾಧ್ಯಾಪಕ ಡಾ. ಶಿರನ್ ಶೆಟ್ಟಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಯಕೃತಿನ ಆರೋಗ್ಯದ ಮಹತ್ವ, ಹೆಪಟೈಟಿಸ್ ತಡೆಗಟ್ಟುವಲ್ಲಿ ಲಸಿಕೆಗಳ ಪಾತ್ರ, ಸಮತೋಲನ ಆಹಾರ, ನಿಯಮಿತ ವ್ಯಾಯಾಮ ಮತ್ತು ಆರೋಗ್ಯಕರ […]

ವಿಶ್ವ ಹೆಪಟೈಟಿಸ್ ದಿನಾಚರಣೆ ಅಂಗವಾಗಿ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಯಕೃತ್ ಆರೋಗ್ಯ ಜಾಗೃತಿ ಕಾರ್ಯಕ್ರಮ Read More »

ಮಣಿಪಾಲ ಜ್ಞಾನಸುಧಾದಲ್ಲಿ ಗುರುಪೂರ್ಣಿಮೆ

ಕಾರ್ಕಳ : ಮಣಿಪಾಲ ವಿದ್ಯಾನಗರ ಜ್ಞಾನಸುಧಾ ಆಂಗ್ಲ ಮಾಧ್ಯಮ ಫ್ರೌಢಶಾಲೆಯಲ್ಲಿ ಗುರುಪೂರ್ಣಿಮೆ ಆಚರಿಸಲಾಯಿತು. ಹಿರಿಯಡ್ಕದ ನಿವೃತ್ತ ಉಪನ್ಯಾಸಕಿ ನಳಿನಾದೇವಿ ಎಂ.ಆರ್.‌ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಪುರಾಣ ಕಾಲದಿಂದಲೂ ಗುರುವಿಗೆ ಉನ್ನತ ಸ್ಥಾನವನ್ನು ನೀಡಿ ಗೌರವಿಸಲಾಗುತ್ತಿದೆ. ವಿದ್ಯಾರ್ಥಿಗಳ ಬದುಕು ಬೆಳಗಿಸುವ ಕಾರ‍್ಯದಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಗುರುಗಳನ್ನು ನಾವು ಗೌರವಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಅತಿಥಿಗಳಿಗೆ ಪಾದಪೂಜೆ ನೆರವೇರಿಸಿ ಗುರು ವಂದನೆ ಸಲ್ಲಿಸಲಾಯಿತು.ಮಣಿಪಾಲ ಜ್ಞಾನಸುಧಾ ಆಂಗ್ಲಮಾಧ್ಯಮ ಫ್ರೌಢಶಾಲೆಯ ಉಪಪ್ರಾಂಶುಪಾಲ ನವೀನ್, ಜೆ.ಇ.ಇ/ನೀಟ್‌ ಫೌಂಡೇಶನ್‌ ಸ್ಟ್ಯೂಡೆಂಟ್‌ ಕೋಆರ್ಡಿನೇಟರ್ ಶಮಿತಾ ಉಪಸ್ಥಿತರಿದ್ದರು. ಕನ್ನಡ

ಮಣಿಪಾಲ ಜ್ಞಾನಸುಧಾದಲ್ಲಿ ಗುರುಪೂರ್ಣಿಮೆ Read More »

ಯಶ್ಪಾಲ್‌ ಸುವರ್ಣ ವಿರುದ್ಧ ಕಾರ್ಕಳ ನಗರ ಕಾಂಗ್ರೆಸ್‌ ವತಿಯಿಂದ ದೂರು

ಉಡುಪಿ : ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಕುರಿತು ಯಾವುದೇ ಪುರಾವೆ ಇಲ್ಲದೆ 24 ಗಂಟೆಗಳ ಕಾಲ ನಶೆಯಲ್ಲಿ ಇರುತ್ತಾರೆ ಎಂದು ನಿರಾಧಾರ ಹಾಗೂ ಮಾನಹಾನಿಕರ ಆರೋಪ ಮಾಡಿರುವುದು, ರಾಹುಲ್ ಗಾಂಧಿ ಅವರ ವಂಶವನ್ನು ಧ್ವಂಸ ಮಾಡುತ್ತೇವೆ ಎಂಬ ಬೆದರಿಕೆಯ ಹೇಳಿಕೆಯನ್ನು ನೀಡಿ ಸಮಾಜದಲ್ಲಿ ದ್ವೇಷ, ಉದ್ವಿಗ್ನತೆ ಮತ್ತು ಅಶಾಂತಿಯನ್ನು ಸೃಷ್ಟಿಸಲು ಮುಂದಾಗಿದ್ದಾರೆ. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಕಾರ್ಕಳ ನಗರ ಯುವ ಕಾಂಗ್ರೆಸ್ ವತಿಯಿಂದ

ಯಶ್ಪಾಲ್‌ ಸುವರ್ಣ ವಿರುದ್ಧ ಕಾರ್ಕಳ ನಗರ ಕಾಂಗ್ರೆಸ್‌ ವತಿಯಿಂದ ದೂರು Read More »

ನಿವೃತ್ತ ಯೋಧ ನೀರೆ ಸಹದೇವ ನಾಯಕ್ ಅಸ್ತಂಗತ

ಕಾರ್ಕಳ : ನಿವೃತ್ತ ಯೋಧ, ಹಿರಿಯ ಭೂಮಾಪನ ಸರ್ವೆಯರ್, ಪ್ರಗತಿಪರ ಕೃಷಿಕ ನೀರೆ ಸಹದೇವ ನಾಯಕ್ (67) ಅಲ್ಪಕಾಲದ ಅಸೌಖ್ಯದಿಂದ ಜು. 29ರಂದು ನಿಧನ ಹೊಂದಿದರು. ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿರುವ ಅವರು ನಿವೃತ್ತಿ ಅನಂತರ ಊರಿಗೆ ಆಗಮಿಸಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಸ್ಥಳೀಯ ಯುನಿಟಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾಗಿ, ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಮೃತರು ಪತ್ನಿ, ಈರ್ವರು ಪುತ್ರರನ್ನು ಅಗಲಿದ್ದಾರೆ. ಮೃತರ ಅಂತಿಮ ಸಂಸ್ಕಾರವು ಬುಧವಾರ ಸಂಜೆ 8 ಗಂಟೆಗೆ ನೀರೆಯ ಸ್ವಗೃಹದಲ್ಲಿ

ನಿವೃತ್ತ ಯೋಧ ನೀರೆ ಸಹದೇವ ನಾಯಕ್ ಅಸ್ತಂಗತ Read More »

ಬಿಜೆಪಿಯ ದ್ವೇಷ ರಾಜಕಾರಣಕ್ಕೆ ವಿದ್ಯಾರ್ಥಿಗಳೇ ಪಾಠ ಕಲಿಸಲಿದ್ದಾರೆ : ಪ್ರದೀಪ್ ಬೇಲಾಡಿ

ಕಾರ್ಕಳ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳ ಹೋರಾಟವನ್ನು ಬೆಂಬಲಿಸಿ ಕಾರ್ಕಳ ಕಾಂಗ್ರೆಸ್ ನಡೆಸಿದ ಧರಣಿ ಸತ್ಯಾಗ್ರಹದ ಬಗ್ಗೆ ಕಾರ್ಕಳ ಬಿಜೆಪಿ ಮುಖಂಡರ ಹೇಳಿಕೆಯು ಹತಾಶೆಯ ಪ್ರತೀಕದಂತಿದ್ದು ಇದು ಅನಾವಶ್ಯಕ ಗೊಂದಲ ಸೃಷ್ಟಿಸುವಂತಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ತಿಳಿಸಿದ್ದಾರೆ. 2013ರಲ್ಲಿ ದೇಶದಲ್ಲಿ ನೀಟ್ ಮೊದಲ ಬಾರಿ ಜಾರಿಯಾದಾಗ ಕೆಲವು ಖಾಸಗಿ ಕಾಲೇಜುಗಳು ಅದರ ವಿರುದ್ಧ ನ್ಯಾಯಾಲಯಕ್ಕೆ ಮೊರೆ ಹೋಗಿದ್ದವು. ಅದೇ ವರ್ಷ ಸುಪ್ರೀಂ ಕೋರ್ಟ್ ನೀಟ್ ಪರೀಕ್ಷೆಯನ್ನು ರದ್ದುಪಡಿಸಿರುವುದರಿಂದ

ಬಿಜೆಪಿಯ ದ್ವೇಷ ರಾಜಕಾರಣಕ್ಕೆ ವಿದ್ಯಾರ್ಥಿಗಳೇ ಪಾಠ ಕಲಿಸಲಿದ್ದಾರೆ : ಪ್ರದೀಪ್ ಬೇಲಾಡಿ Read More »

ಹೆತ್ತವರ ಸ್ಟೇಟಸ್‌ ಕಡಿಮೆಯಾಗದಂತೆ ನೋಡಿಕೊಳ್ಳಿ – ಮಂಜುನಾಥ ಜುನಗೊಂಡ

ಕಾರ್ಕಳ : ಅಪ್ಪ, ಅಮ್ಮನ ದಿನಾಚರಣೆ ಸಂದರ್ಭ ವಾಟ್ಸಪ್‌ ಸ್ಟೇಟಸ್‌ಗೆ ಅವರನ್ನು ಸೀಮಿತಗೊಳಿಸದೇ ಹೆತ್ತವರ ಸ್ಟೇಟಸ್‌ ಎಂದಿಗೂ ಕಡಿಮೆಯಾಗದಂತೆ ನೋಡಿಕೊಳ್ಳಬೇಕೆಂದು ಮಂಜುನಾಥ ಮ. ಜುನಗೊಂಡ ಹೇಳಿದರು. ಅವರು ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಆಶ್ರಯದಲ್ಲಿ ದೇಶಸುಧಾ ಹಾಗೂ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆಯಲ್ಲಿ ಹೃದಯದಲ್ಲಿ ದೇಶಪ್ರೇಮ, ಉಸಿರಿನಲ್ಲಿ ಭಾರತ ಸ್ವರಾಜ್ಯ – ಛತ್ರಪತಿ ಶಿವಾಜಿ ಮಹಾರಾಜ್ ವಿಷಯದ ಕುರಿತು ಮಾತನಾಡಿದರು.ಛತ್ರಪತಿ ಶಿವಾಜಿ ಮಹಾರಾಜರ ಆದರ್ಶ ಜೀವನ, ರಾಷ್ಟ್ರಭಕ್ತಿ, ಸ್ವರಾಜ್ಯದ ಪರಿಕಲ್ಪನೆ ಹಾಗೂ ಯುವಜನರಲ್ಲಿ ದೇಶಪ್ರೇಮ ಉದ್ದೀಪನ ಕುರಿತು ಮಾತನಾಡಿದರು.

ಹೆತ್ತವರ ಸ್ಟೇಟಸ್‌ ಕಡಿಮೆಯಾಗದಂತೆ ನೋಡಿಕೊಳ್ಳಿ – ಮಂಜುನಾಥ ಜುನಗೊಂಡ Read More »

ಆಳ್ವಾಸ್‌ ಪದವಿ ಪೂರ್ವ ಕಾಲೇಜು ವತಿಯಿಂದ ಕೆಸರಾಟ ಪಾಠ

ಕೃಷಿ ಕುರಿತು ಅರಿವು ಮೂಡಿಸುವ ಕಾರ್ಯ – ಸುನಿಲ್‌ ಕುಮಾರ್‌ ಕಾರ್ಕಳ : ವಿದ್ಯಾರ್ಥಿಗಳಲ್ಲಿ ಕೃಷಿ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕೆಸರಾಟದಂತಹ ಕಾರ್ಯಕ್ರಮಗಳು ಹೆಚ್ಚು ಪೂರಕ. ಇದರೊಂದಿಗೆ ನಮ್ಮ ಪರಂಪರೆ, ಆಚಾರ ವಿಚಾರಗಳನ್ನು ತಿಳಿಸಿಕೊಡುವ ಕಾರ್ಯವಾಗುತ್ತಿದೆ ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದರು.ಅವರು ಜು. 26ರಂದು ಆಳ್ವಾಸ್‌ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಕುಕ್ಕುಂದೂರಿನ ಕೊಡಿಯಾಲ್‌ನಲ್ಲಿ ನಡೆದ ಕೆಸರಾಟ ಪಾಠ

ಆಳ್ವಾಸ್‌ ಪದವಿ ಪೂರ್ವ ಕಾಲೇಜು ವತಿಯಿಂದ ಕೆಸರಾಟ ಪಾಠ Read More »

ಎನ್ಯೂಮರೇಷನ್‌ ಫಾರಂ ಡಿಜಿಟಲೀಕರಣದಲ್ಲಿ ಉಡುಪಿ ರಾಜ್ಯಕ್ಕೆ ಪ್ರಥಮ – ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌

ಕಾರ್ಕಳದ ಜ್ಯೋತಿರಾವ್‌ ಸೇರ್ವೆಗಾರ್‌ ಅವರಿಗೆ ಅಭಿನಂದನೆ ಉಡುಪಿ : ಪ್ರಜಾಪ್ರಭುತ್ವದ ಅಡಿಪಾಯವನ್ನು ಭದ್ರಪಡಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ದೋಷರಹಿತ ಹಾಗೂ ಗುಣಮಟ್ಟದ ಮತದಾರರ ಪಟ್ಟಿ ಸಿದ್ಧಪಡಿಸುವ ಕಾರ್ಯವನ್ನು ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ನಿರ್ವಹಿಸಿ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜು. 25ರಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ [ಎಸ್.ಐ.ಆರ್]

ಎನ್ಯೂಮರೇಷನ್‌ ಫಾರಂ ಡಿಜಿಟಲೀಕರಣದಲ್ಲಿ ಉಡುಪಿ ರಾಜ್ಯಕ್ಕೆ ಪ್ರಥಮ – ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ Read More »

ಮಳೆ ಹಿನ್ನೆಲೆ – ಜು. 25ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು. 25ರಂದು ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ. ಹವಾಮಾನ ಇಲಾಖೆಯ ಆರೆಂಜ್‌ ಅಲರ್ಟ್‌ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗಲಿರುವುದರಿಂದ ಜು. 25ರಂದು ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ, ಡಿಪ್ಲೋಮಾ, ಐಟಿಐ ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ರಜೆ ಘೋಷಿಸಿದ್ದಾರೆ. ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಇಂಜಿನೀಯರಿಂಗ್‌ ತರಗತಿಗಳಿಗೆ ರಜೆ ಇರುವುದಿಲ್ಲ.

ಮಳೆ ಹಿನ್ನೆಲೆ – ಜು. 25ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ Read More »

ನೇಸರ ಅಂತರ್ ಜಿಲ್ಲಾ ಮಟ್ಟದ ‘ಅಮ್ಮನಿಗೊಂದು ಮಗಳ ಪತ್ರ’ ಸ್ಪರ್ಧಾ ವಿಜೇತರು

ಮಂಗಳೂರು : ನೇಸರ ದಶಪ್ರಣತಿ ಸಮಿತಿ–2026, ನೇಸರ ಯುವಕ ಮಂಡಲ ಹಾಗೂ ನೇಸರ ಯುವತಿ ಮಂಡಲ ಮುಕ್ಕೂರು ಆಶ್ರಯದಲ್ಲಿ ಆಯೋಜಿಸಿದ್ದ ಅಂತರ್ ಜಿಲ್ಲಾ ಮಟ್ಟದ ‘ಅಮ್ಮನಿಗೊಂದು ಮಗಳ ಪತ್ರ’ ಲೇಖನ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ.ಸಾರ್ವಜನಿಕ ಹಾಗೂ ವಿದ್ಯಾರ್ಥಿ ವಿಭಾಗಗಳಲ್ಲಿ ಒಟ್ಟು 200ಕ್ಕೂ ಅಧಿಕ ಪತ್ರಗಳು ಸ್ಪರ್ಧೆಗೆ ಬಂದಿದ್ದು, ಸಾಹಿತ್ಯದ ಗುಣಮಟ್ಟ, ಭಾವನಾತ್ಮಕ ಅಭಿವ್ಯಕ್ತಿ ಹಾಗೂ ಭಾಷಾ ಸೊಗಡಿನ ಆಧಾರದಲ್ಲಿ ವಿಜೇತರನ್ನು ಆಯ್ಕೆ ಮಾಡಲಾಗಿದೆ. ಸ್ಪರ್ಧೆಗೆ ಲೇಖಕಿ ಅಶ್ವಿನಿ ಕೋಡಿಬೈಲು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದರು.ಸಾರ್ವಜನಿಕ ವಿಭಾಗದಲ್ಲಿ ಸುಳ್ಯದ ಸಾವಿತ್ರಿ ಬಿ.

ನೇಸರ ಅಂತರ್ ಜಿಲ್ಲಾ ಮಟ್ಟದ ‘ಅಮ್ಮನಿಗೊಂದು ಮಗಳ ಪತ್ರ’ ಸ್ಪರ್ಧಾ ವಿಜೇತರು Read More »

error: Content is protected !!
Scroll to Top