Author name: newskarkala desk

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಪಕ್ಕಾ – ಇಕ್ಬಾಲ್‌ ಹುಸೇನ್‌

ರಾಮನಗರ : ಡಿ. ಕೆ. ಶಿವಕುಮಾರ್ ಮೇ 15ಕ್ಕೆ ಮುಖ್ಯಮಂತ್ರಿ ಆಗೋದು ಫಿಕ್ಸ್ ಆಗಿದೆ. ಹಿಂದೆ ನಾನು ಎರಡ್ಮೂರು ದಿನಾಂಕ ಹೇಳಿದ್ದಾಗ್ಯೂ ವಿವಿಧ ಕಾರಣಕ್ಕಾಗಿ ಆಗಿರಲಿಲ್ಲ. ಈಗಿನದು ಅಂತಿಮ ದಿನಾಂಕ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.ಮೇ 15ರಂದು ನಮ್ಮ ನಾಯಕನ ಜನ್ಮದಿನ. ಅಂದು ಮುಖ್ಯಮಂತ್ರಿ ಹುದ್ದೆಯ ಉಡುಗೊರೆ ದೊರೆಯಲಿದೆ. ಈ ಅವಧಿಯಲ್ಲೇ ಅವರು ಸಿಎಂ ಆಗಬೇಕು ಮತ್ತು ಅವರ ನಾಯಕತ್ವದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳಾಗಬೇಕು ಎಂಬುದು ಎಲ್ಲರ ಬಯಕೆ ಎಂದು ಕೇತೋಹಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರ […]

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಪಕ್ಕಾ – ಇಕ್ಬಾಲ್‌ ಹುಸೇನ್‌ Read More »

ಪಿಯುಸಿ ಶಿಕ್ಷಣದೊಂದಿಗೆ ಸಿಇಟಿ, ನೀಟ್‌, ಜೆಇಇ ತರಬೇತಿಗೆ ಒಬಿಸಿ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಸತಿ ಸಹಿತ ಉಚಿತವಾಗಿ ಪಿ.ಯು.ಸಿ (ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗ) ಶಿಕ್ಷಣದೊಂದಿಗೆ ನೀಟ್, ಜೆಇಇ ಮತ್ತು ಸಿಇಟಿ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಅಥವಾ 3ಬಿ ಜಾತಿಗೆ ಸೇರಿರುವ, ಕುಟುಂಬದ ಒಟ್ಟು ವಾರ್ಷಿಕ ಆದಾಯ 8 ಲಕ್ಷ ರೂ. ಒಳಗಿರುವ ಹಾಗೂ ಎಸ್.ಎಸ್.ಎಲ್.ಸಿ ವ್ಯಾಸಾಂಗವನ್ನು ಸರಕಾರಿ ವಸತಿ ರಹಿತ ಶಾಲೆಯಲ್ಲಿ ಪೂರೈಸುವುದರೊಂದಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಕನಿಷ್ಠ 90

ಪಿಯುಸಿ ಶಿಕ್ಷಣದೊಂದಿಗೆ ಸಿಇಟಿ, ನೀಟ್‌, ಜೆಇಇ ತರಬೇತಿಗೆ ಒಬಿಸಿ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ Read More »

ಉಡುಪಿಯಲ್ಲಿ ಐಐಜಿಜೆ ನೂತನ ಕಚೇರಿ ಉದ್ಘಾಟನೆ

ಗ್ರಾಮೀಣ ಪ್ರತಿಭೆಗಳಿಗೆ ಸ್ವ-ಉದ್ಯೋಗದ ಸುವರ್ಣ ಅವಕಾಶ : ನಿರ್ಮಲಾ ಸೀತಾರಾಮನ್ ಉಡುಪಿ : 2016ರಲ್ಲಿ ಆರಂಭವಾದ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆಯು ಹತ್ತು ವರ್ಷಗಳಲ್ಲಿ ಅಮೋಘವಾಗಿ ಬೆಳೆದಿದ್ದು ಹಲವಾರು ಗ್ರಾಮೀಣ ಪ್ರತಿಭೆಗಳಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟರು.ಉಡುಪಿಯಲ್ಲಿ ಭಾರತೀಯ ರತ್ನಗಳ ಹಾಗೂ ಆಭರಣ ಸಂಸ್ಥೆಯ ನೂತನ ಕಚೇರಿಯ ಅನಾವರಣ ನಡೆಸಿ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಉದ್ಯಮ ನೇತೃತ್ವದ ಕೌಶಲ್ಯವು ಯುವಕರ ಜೀವನವನ್ನು

ಉಡುಪಿಯಲ್ಲಿ ಐಐಜಿಜೆ ನೂತನ ಕಚೇರಿ ಉದ್ಘಾಟನೆ Read More »

ಮಿಯ್ಯಾರು : ಬೈಕ್‌ಗೆ ಸ್ಕೂಟಿ ಡಿಕ್ಕಿ – ಸವಾರ ಸಾವು

ಕಾರ್ಕಳ : ಮಿಯ್ಯಾರು ಕುಂಟಿಬೈಲ್‌ ರಸ್ತೆ ನೀರಿನ ಟ್ಯಾಂಕ್‌ ಎದುರು ಬೈಕ್ ಹಾಗೂ ಸ್ಕೂಟಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಪರಿಣಾಮ ಬೈಕ್‌ ಸವಾರ ರಸ್ತೆಗೆಸೆಯಲ್ಪಟ್ಟು ಸಾವಿಗೀಡಾದ ದಾರುಣ ಘಟನೆ ಎ. 28ರಂದು ಸಂಭವಿಸಿದೆ.ಕೆರ್ವಾಶೆ ಸುಕೇಶ್‌ ಬಂಗೇರ (36) ಅವರು ಮೃತಪಟ್ಟ ದುರ್ದೈವಿ. ಕೆರ್ವಾಶೆಯ ತನ್ನ ಮನೆಯಿಂದ ಕುಂಟಿಬೈಲ್‌ ಆಗಿ ಕಾರ್ಕಳ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕೂಡಲೇ ಸುಕೇಶ್‌ ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಈ ವೇಳೆಗಾಗಲೇ ಮೃತಪಟ್ಟಿದ್ದರು. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಸುಕೇಶ್‌ ಅವರು

ಮಿಯ್ಯಾರು : ಬೈಕ್‌ಗೆ ಸ್ಕೂಟಿ ಡಿಕ್ಕಿ – ಸವಾರ ಸಾವು Read More »

ಸರಕಾರದಿಂದಲೇ 108 ಆಂಬುಲೆನ್ಸ್ ಸೇವೆ ನಿರ್ವಹಣೆ

ಹಾವೇರಿ : ರಾಜ್ಯದಲ್ಲಿರುವ 108 ಆಂಬುಲೆನ್ಸ್ ಸೇವೆಯನ್ನು ಇನ್ನು ಮುಂದೆ ಸರ್ಕಾರದಿಂದ ಮುನ್ನಡೆಸಲು ತಯಾರಿ ನಡೆದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು. ಶಿಗ್ಗಾವಿ ತಾಲೂಕು ಆಸ್ಪತ್ರೆಯ ಕಟ್ಟಡ ಉದ್ಘಾಟನೆಗಾಗಿ ಆಗಮಿಸಿದ್ದ ದಿನೇಶ್‌ ಗುಂಡೂರಾವ್ ಸುದ್ದಿಗಾರರೊಂದಿಗೆ ಮಾತನಾಡುತ್ತ, ಆಂಬುಲೆನ್ಸ್ ನಿರ್ವಹಣೆಗೆ ಅಗತ್ಯವಿರುವ ಕಂಟ್ರೋಲ್ ರೂಮ್ ಹಾಗೂ ಸಲಕರಣೆಗಳ ಅಳವಡಿಕೆ ಕಾರ್ಯ ನಡೆಯುತ್ತಿದೆ. ಇನ್ನೊಂದು ತಿಂಗಳಿಂದ ಸಂಪೂರ್ಣ ಸೇವೆ ಸರಕಾರದಿಂದ ನೀಡಲಾಗುವುದು. ಇಡೀ ದೇಶದಲ್ಲಿಯೇ ಸರ್ಕಾರದಿಂದ ಆಂಬುಲೆನ್ಸ್ ಸೇವೆ ನೀಡುವ ಮೊದಲ ರಾಜ್ಯ ಕರ್ನಾಟಕ ಆಗಲಿದೆ

ಸರಕಾರದಿಂದಲೇ 108 ಆಂಬುಲೆನ್ಸ್ ಸೇವೆ ನಿರ್ವಹಣೆ Read More »

ಕುಕ್ಕರ್‌ ಬ್ಲಾಸ್ಟ್‌ ಉಗ್ರ ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ಕುಕ್ಕರ್ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಎನ್‌ಐಎ ವಿಶೇಷ ನ್ಯಾಯಾಲಯ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಜೈಲು, 94 ಸಾವಿರ ರೂ. ದಂಡ ವಿಧಿಸಿದೆ. 2022ರ ನ. 19ರಂದು ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗುರಿ ಎಂಬಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿತು. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೊಹಮ್ಮದ್ ಶಾರಿಕ್‌ ಬ್ಯಾಗ್‌ನಲ್ಲಿದ್ದ ಪ್ರೆಶರ್ ಕುಕ್ಕರ್‌ನಲ್ಲಿ ಬಾಂಬ್ ಇತ್ತು. ಸ್ಫೋಟದ ತೀವ್ರತೆಗೆ ಆಟೋಗೆ ಬೆಂಕಿ ಹೊತ್ತಿಕೊಂಡಿತ್ತು.ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು.

ಕುಕ್ಕರ್‌ ಬ್ಲಾಸ್ಟ್‌ ಉಗ್ರ ಶಾರಿಕ್‌ಗೆ 10 ವರ್ಷ ಜೈಲು Read More »

11 ತಿಂಗಳಲ್ಲೇ ಪಡುಬಿದ್ರಿ ದೇಗುಲ ನಿರ್ಮಾಣ

ಪ್ರಶಂಸೆಗೆ ಪಾತ್ರರಾದರು ಎಸ್‌ಕೆಎಸ್‌ನ ಸುಜಯ್ ಕುಮಾರ್ ಶೆಟ್ಟಿ ಉಡುಪಿ : ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ಕೇವಲ 11 ತಿಂಗಳಲ್ಲೇ ಪೂರ್ಣಗೊಂಡು ಇದೀಗ ಬ್ರಹ್ಮಕಲಶೋತ್ಸವ ಜರುಗುತ್ತಿದೆ. ಎಸ್‌ಕೆಎಸ್‌ ಇನ್ಫ್ರಾ ಪ್ರಾಜೆಕ್ಟ್‌ ಪೈವೇಟ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಸುಜಯ್ ಕುಮಾರ್ ಶೆಟ್ಟಿ ಅವರು ದೇಗುಲ ಜೀರ್ಣೊದ್ಧಾರ ಕಾಮಗಾರಿ ಗುತ್ತಿಗೆ ವಹಿಸಿದ್ದರು. ಕಾಷ್ಟ ಶಿಲ್ಪದ ಸೌಂದರ್ಯದೊಂದಿಗೆ ಅತ್ಯಂತ ಸುಂದರವಾಗಿ ದೇವಸ್ಥಾನ ನಿರ್ಮಣವಾಗಿತ್ತು.2023ರ ಮಾರ್ಚ್‌ ತಿಂಗಳಲ್ಲಿ ಬ್ರಹ್ಮಕಲಶಗೊಂಡ ಕಾರ್ಕಳ ಶ್ರೀ ಮಾರಿಯಮ್ಮ ದೇವಸ್ಥಾನವನ್ನೂ 9 ತಿಂಗಳ ಅವಧಿಯಲ್ಲೇ

11 ತಿಂಗಳಲ್ಲೇ ಪಡುಬಿದ್ರಿ ದೇಗುಲ ನಿರ್ಮಾಣ Read More »

ಡಾ. ಬಿ.ಆರ್.‌ ಅಂಬೇಡ್ಕರ್‌ ಯುವ ವೇದಿಕೆ ಪದಗ್ರಹಣ – ಸನ್ಮಾನ

ಅಂಬೇಡ್ಕರ್‌ ಭವನ ಸ್ಫೂರ್ತಿಯ ಕೇಂದ್ರವಾಗಲಿ – ಸುನಿಲ್ ಕುಮಾರ್‌ ಕಾರ್ಕಳ : ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ದಲಿತ ಸಮುದಾಯ ನಿರೀಕ್ಷಿತ ಏಳಿಗೆ ಕಂಡಿಲ್ಲ‌. ಸಮಾಜದ ಬಂಧುಗಳನ್ನು ಒಟ್ಟುಗೂಡಿಸಿ, ಆ ಮೂಲಕ ಸಮಾಜದ ಉದ್ಧಾರಕ್ಕಾಗಿ ಕಾರ್ಕಳದಲ್ಲಿ ಡಾ. ಬಿ.ಆರ್.‌ ಅಂಬೇಡ್ಕರ್‌ ಯುವ ವೇದಿಕೆ ಅಸ್ತಿತ್ವಕ್ಕೆ ಬಂದಿರುವುದು ಉತ್ತಮ ಬೆಳವಣಿಗೆ ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ಅಭಿಪ್ರಾಯಪಟ್ಟರು. ಅವರು ಎ. 27ರಂದು ಕಾರ್ಕಳ ಕಾಬೆಟ್ಟು ಅಂಬೇಡ್ಕರ್ ಭವನದಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಯುವ ವೇದಿಕೆ ಪದಗ್ರಹಣ

ಡಾ. ಬಿ.ಆರ್.‌ ಅಂಬೇಡ್ಕರ್‌ ಯುವ ವೇದಿಕೆ ಪದಗ್ರಹಣ – ಸನ್ಮಾನ Read More »

ಶ್ರೀಮದ್‌ ಭುವನೇಂದ್ರ ಪ್ರೌಢಶಾಲೆಗೆ ಶೇ. 100 ಫಲಿತಾಂಶ

ಕಾರ್ಕಳ : ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯು ಶೇ. 100 ಫಲಿತಾಂಶ ದಾಖಲಿಸಿದೆ. ಕನ್ನಡ ಮಾಧ್ಯಮ ವಿಭಾಗದಲ್ಲಿ 34 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 7 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಆಂಗ್ಲ ಮಾಧ್ಯಮ ವಿಭಾಗದಲ್ಲಿ 38 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 23 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಮಕ್ಕಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ-ಶಿಕ್ಷಕೇತರರು

ಶ್ರೀಮದ್‌ ಭುವನೇಂದ್ರ ಪ್ರೌಢಶಾಲೆಗೆ ಶೇ. 100 ಫಲಿತಾಂಶ Read More »

ನಿಟ್ಟೆ ಅಪಘಾತದಲ್ಲಿ ಗಾಯಗೊಂಡಿದ್ದ ಪ್ರೇರಣಾ ಮೂಲ್ಯ ನಿಧನ

ಕಾರ್ಕಳ : ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಎ. 24ರಂದು ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿರುವ ಪ್ರೇರಣಾ ಮೂಲ್ಯ ಎ. 27ರಂದು ನಿಧನ ಹೊಂದಿದರು. ಸಿಇಟಿ ಪರೀಕ್ಷೆ ಬರೆದು ತಂದೆಯೊಂದಿಗೆ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಕಾರ್ಕಳದಿಂದ ನಿಟ್ಟೆಯತ್ತ ಸಾಗುತ್ತಿದ್ದ ನಿಟ್ಟೆ ಇಂಜೀನಿಯರಿಂಗ್‌ ಕಾಲೇಜು ವಿದ್ಯಾರ್ಥಿಯ ಕಾರು ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಬೈಕ್‌ ಎಸೆಯಲ್ಪಟ್ಟಿದ್ದು ನವೀನ್‌ಚಂದ್ರ ಹಾಗೂ ಪ್ರೇರಣಾ ಇಬ್ಬರಿಗೂ ಗಂಭೀರ ಸ್ವರೂಪದ ಗಾಯವಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ನವೀನ್‌ಚಂದ್ರ ಅಂದೇ

ನಿಟ್ಟೆ ಅಪಘಾತದಲ್ಲಿ ಗಾಯಗೊಂಡಿದ್ದ ಪ್ರೇರಣಾ ಮೂಲ್ಯ ನಿಧನ Read More »

error: Content is protected !!
Scroll to Top