Author name: newskarkala desk

ಬಿಜೆಪಿಯ ದ್ವೇಷ ರಾಜಕಾರಣಕ್ಕೆ ವಿದ್ಯಾರ್ಥಿಗಳೇ ಪಾಠ ಕಲಿಸಲಿದ್ದಾರೆ : ಪ್ರದೀಪ್ ಬೇಲಾಡಿ

ಕಾರ್ಕಳ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳ ಹೋರಾಟವನ್ನು ಬೆಂಬಲಿಸಿ ಕಾರ್ಕಳ ಕಾಂಗ್ರೆಸ್ ನಡೆಸಿದ ಧರಣಿ ಸತ್ಯಾಗ್ರಹದ ಬಗ್ಗೆ ಕಾರ್ಕಳ ಬಿಜೆಪಿ ಮುಖಂಡರ ಹೇಳಿಕೆಯು ಹತಾಶೆಯ ಪ್ರತೀಕದಂತಿದ್ದು ಇದು ಅನಾವಶ್ಯಕ ಗೊಂದಲ ಸೃಷ್ಟಿಸುವಂತಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ತಿಳಿಸಿದ್ದಾರೆ. 2013ರಲ್ಲಿ ದೇಶದಲ್ಲಿ ನೀಟ್ ಮೊದಲ ಬಾರಿ ಜಾರಿಯಾದಾಗ ಕೆಲವು ಖಾಸಗಿ ಕಾಲೇಜುಗಳು ಅದರ ವಿರುದ್ಧ ನ್ಯಾಯಾಲಯಕ್ಕೆ ಮೊರೆ ಹೋಗಿದ್ದವು. ಅದೇ ವರ್ಷ ಸುಪ್ರೀಂ ಕೋರ್ಟ್ ನೀಟ್ ಪರೀಕ್ಷೆಯನ್ನು ರದ್ದುಪಡಿಸಿರುವುದರಿಂದ

ಬಿಜೆಪಿಯ ದ್ವೇಷ ರಾಜಕಾರಣಕ್ಕೆ ವಿದ್ಯಾರ್ಥಿಗಳೇ ಪಾಠ ಕಲಿಸಲಿದ್ದಾರೆ : ಪ್ರದೀಪ್ ಬೇಲಾಡಿ Read More »

ಹೆತ್ತವರ ಸ್ಟೇಟಸ್‌ ಕಡಿಮೆಯಾಗದಂತೆ ನೋಡಿಕೊಳ್ಳಿ – ಮಂಜುನಾಥ ಜುನಗೊಂಡ

ಕಾರ್ಕಳ : ಅಪ್ಪ, ಅಮ್ಮನ ದಿನಾಚರಣೆ ಸಂದರ್ಭ ವಾಟ್ಸಪ್‌ ಸ್ಟೇಟಸ್‌ಗೆ ಅವರನ್ನು ಸೀಮಿತಗೊಳಿಸದೇ ಹೆತ್ತವರ ಸ್ಟೇಟಸ್‌ ಎಂದಿಗೂ ಕಡಿಮೆಯಾಗದಂತೆ ನೋಡಿಕೊಳ್ಳಬೇಕೆಂದು ಮಂಜುನಾಥ ಮ. ಜುನಗೊಂಡ ಹೇಳಿದರು. ಅವರು ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಆಶ್ರಯದಲ್ಲಿ ದೇಶಸುಧಾ ಹಾಗೂ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆಯಲ್ಲಿ ಹೃದಯದಲ್ಲಿ ದೇಶಪ್ರೇಮ, ಉಸಿರಿನಲ್ಲಿ ಭಾರತ ಸ್ವರಾಜ್ಯ – ಛತ್ರಪತಿ ಶಿವಾಜಿ ಮಹಾರಾಜ್ ವಿಷಯದ ಕುರಿತು ಮಾತನಾಡಿದರು.ಛತ್ರಪತಿ ಶಿವಾಜಿ ಮಹಾರಾಜರ ಆದರ್ಶ ಜೀವನ, ರಾಷ್ಟ್ರಭಕ್ತಿ, ಸ್ವರಾಜ್ಯದ ಪರಿಕಲ್ಪನೆ ಹಾಗೂ ಯುವಜನರಲ್ಲಿ ದೇಶಪ್ರೇಮ ಉದ್ದೀಪನ ಕುರಿತು ಮಾತನಾಡಿದರು.

ಹೆತ್ತವರ ಸ್ಟೇಟಸ್‌ ಕಡಿಮೆಯಾಗದಂತೆ ನೋಡಿಕೊಳ್ಳಿ – ಮಂಜುನಾಥ ಜುನಗೊಂಡ Read More »

ಆಳ್ವಾಸ್‌ ಪದವಿ ಪೂರ್ವ ಕಾಲೇಜು ವತಿಯಿಂದ ಕೆಸರಾಟ ಪಾಠ

ಕೃಷಿ ಕುರಿತು ಅರಿವು ಮೂಡಿಸುವ ಕಾರ್ಯ – ಸುನಿಲ್‌ ಕುಮಾರ್‌ ಕಾರ್ಕಳ : ವಿದ್ಯಾರ್ಥಿಗಳಲ್ಲಿ ಕೃಷಿ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕೆಸರಾಟದಂತಹ ಕಾರ್ಯಕ್ರಮಗಳು ಹೆಚ್ಚು ಪೂರಕ. ಇದರೊಂದಿಗೆ ನಮ್ಮ ಪರಂಪರೆ, ಆಚಾರ ವಿಚಾರಗಳನ್ನು ತಿಳಿಸಿಕೊಡುವ ಕಾರ್ಯವಾಗುತ್ತಿದೆ ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದರು.ಅವರು ಜು. 26ರಂದು ಆಳ್ವಾಸ್‌ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಕುಕ್ಕುಂದೂರಿನ ಕೊಡಿಯಾಲ್‌ನಲ್ಲಿ ನಡೆದ ಕೆಸರಾಟ ಪಾಠ

ಆಳ್ವಾಸ್‌ ಪದವಿ ಪೂರ್ವ ಕಾಲೇಜು ವತಿಯಿಂದ ಕೆಸರಾಟ ಪಾಠ Read More »

ಎನ್ಯೂಮರೇಷನ್‌ ಫಾರಂ ಡಿಜಿಟಲೀಕರಣದಲ್ಲಿ ಉಡುಪಿ ರಾಜ್ಯಕ್ಕೆ ಪ್ರಥಮ – ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌

ಕಾರ್ಕಳದ ಜ್ಯೋತಿರಾವ್‌ ಸೇರ್ವೆಗಾರ್‌ ಅವರಿಗೆ ಅಭಿನಂದನೆ ಉಡುಪಿ : ಪ್ರಜಾಪ್ರಭುತ್ವದ ಅಡಿಪಾಯವನ್ನು ಭದ್ರಪಡಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ದೋಷರಹಿತ ಹಾಗೂ ಗುಣಮಟ್ಟದ ಮತದಾರರ ಪಟ್ಟಿ ಸಿದ್ಧಪಡಿಸುವ ಕಾರ್ಯವನ್ನು ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ನಿರ್ವಹಿಸಿ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜು. 25ರಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ [ಎಸ್.ಐ.ಆರ್]

ಎನ್ಯೂಮರೇಷನ್‌ ಫಾರಂ ಡಿಜಿಟಲೀಕರಣದಲ್ಲಿ ಉಡುಪಿ ರಾಜ್ಯಕ್ಕೆ ಪ್ರಥಮ – ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ Read More »

ಮಳೆ ಹಿನ್ನೆಲೆ – ಜು. 25ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು. 25ರಂದು ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ. ಹವಾಮಾನ ಇಲಾಖೆಯ ಆರೆಂಜ್‌ ಅಲರ್ಟ್‌ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗಲಿರುವುದರಿಂದ ಜು. 25ರಂದು ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ, ಡಿಪ್ಲೋಮಾ, ಐಟಿಐ ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ರಜೆ ಘೋಷಿಸಿದ್ದಾರೆ. ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಇಂಜಿನೀಯರಿಂಗ್‌ ತರಗತಿಗಳಿಗೆ ರಜೆ ಇರುವುದಿಲ್ಲ.

ಮಳೆ ಹಿನ್ನೆಲೆ – ಜು. 25ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ Read More »

ನೇಸರ ಅಂತರ್ ಜಿಲ್ಲಾ ಮಟ್ಟದ ‘ಅಮ್ಮನಿಗೊಂದು ಮಗಳ ಪತ್ರ’ ಸ್ಪರ್ಧಾ ವಿಜೇತರು

ಮಂಗಳೂರು : ನೇಸರ ದಶಪ್ರಣತಿ ಸಮಿತಿ–2026, ನೇಸರ ಯುವಕ ಮಂಡಲ ಹಾಗೂ ನೇಸರ ಯುವತಿ ಮಂಡಲ ಮುಕ್ಕೂರು ಆಶ್ರಯದಲ್ಲಿ ಆಯೋಜಿಸಿದ್ದ ಅಂತರ್ ಜಿಲ್ಲಾ ಮಟ್ಟದ ‘ಅಮ್ಮನಿಗೊಂದು ಮಗಳ ಪತ್ರ’ ಲೇಖನ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ.ಸಾರ್ವಜನಿಕ ಹಾಗೂ ವಿದ್ಯಾರ್ಥಿ ವಿಭಾಗಗಳಲ್ಲಿ ಒಟ್ಟು 200ಕ್ಕೂ ಅಧಿಕ ಪತ್ರಗಳು ಸ್ಪರ್ಧೆಗೆ ಬಂದಿದ್ದು, ಸಾಹಿತ್ಯದ ಗುಣಮಟ್ಟ, ಭಾವನಾತ್ಮಕ ಅಭಿವ್ಯಕ್ತಿ ಹಾಗೂ ಭಾಷಾ ಸೊಗಡಿನ ಆಧಾರದಲ್ಲಿ ವಿಜೇತರನ್ನು ಆಯ್ಕೆ ಮಾಡಲಾಗಿದೆ. ಸ್ಪರ್ಧೆಗೆ ಲೇಖಕಿ ಅಶ್ವಿನಿ ಕೋಡಿಬೈಲು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದರು.ಸಾರ್ವಜನಿಕ ವಿಭಾಗದಲ್ಲಿ ಸುಳ್ಯದ ಸಾವಿತ್ರಿ ಬಿ.

ನೇಸರ ಅಂತರ್ ಜಿಲ್ಲಾ ಮಟ್ಟದ ‘ಅಮ್ಮನಿಗೊಂದು ಮಗಳ ಪತ್ರ’ ಸ್ಪರ್ಧಾ ವಿಜೇತರು Read More »

ಎಂ. ರಾಮಚಂದ್ರ ಸಂಸ್ಮರಣಾ ಪ್ರಶಸ್ತಿ ಪ್ರದಾನ – ʼಗುರು ಎಂದರೆ ಲಘು ಅಲ್ಲʼ ಕೃತಿ ಬಿಡುಗಡೆ

ಕಾರ್ಕಳ : ಸಾಹಿತ್ಯ ಸಂಘ ಕಾರ್ಕಳದ ಆಶ್ರಯದಲ್ಲಿ ನಡೆದ ಎಂ. ರಾಮಚಂದ್ರ ಪ್ರಶಸ್ತಿ ಪ್ರದಾನ ಹಾಗೂ ‘ಗುರು ಎಂದರೆ ಲಘು ಅಲ್ಲ” ಕೃತಿಯ ಬಿಡುಗಡೆ ಸಮಾರಂಭವು ಹೋಟೆಲ್ ಪ್ರಕಾಶ್‌ನ ಸಂಭ್ರಮ ಸಭಾಂಗಣದಲ್ಲಿ ಜರುಗಿತು. ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಸ್ವಾಮೀ ವೀರೇಶಾನಂದ ಸರಸ್ವತೀ ಅವರು ಕಂಬದಕೋಣೆ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಮಹಾಬಲ ಮರವಂತೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಬಳಿಕ ಮಾತನಾಡಿದ ಅವರು ಪ್ರೋ. ಎಂ. ರಾಮಚಂದ್ರ ಅವರು ಸ್ವಚ್ಛ, ನೇರ ನಡೆ ನುಡಿಗಳಿಗೆ

ಎಂ. ರಾಮಚಂದ್ರ ಸಂಸ್ಮರಣಾ ಪ್ರಶಸ್ತಿ ಪ್ರದಾನ – ʼಗುರು ಎಂದರೆ ಲಘು ಅಲ್ಲʼ ಕೃತಿ ಬಿಡುಗಡೆ Read More »

ದಸರಾದಲ್ಲಿ ಕಂಬಳ ಆಯೋಜನೆಗೆ ಶಾಸಕರ ಅಪಸ್ವರ ವಿಷಾದನೀಯ

ಕಂಬಳ ಆಯೋಜನೆ ದುಂದುವೆಚ್ಚ ಎನ್ನುವುದಾದರೆ ಕೋಟಿಕಂಠ ಗಾಯನ, ಕಾರ್ಕಳ ಉತ್ಸವ, ಥೀಮ್ ಪಾರ್ಕ್ ಉದ್ಘಾಟನೆ ದುಂದು ವೆಚ್ಚವಲ್ಲವೇ ? ಶುಭದ ರಾವ್ ಪ್ರಶ್ನೆ ಕಾರ್ಕಳ : ಕಾನೂನು ತೊಡಕಿನಿಂದ ನಿಂತೇ ಹೋಗುತ್ತದೆ ಎನ್ನುವ ಆತಂಕದಲ್ಲಿದ್ದ ತುಳುನಾಡಿನ ಜನಪದ ಕ್ರೀಡೆ ಕಂಬಳವು ಪುನಃ ‌ಪ್ರಾರಂಭವಾಗಿ ಜನಪ್ರಿಯತೆ ಪಡೆದು ನಾಡ ಹಬ್ಬ ದಸರಾದಲ್ಲಿ ಆಯೋಜಿಸಲು ಅವಕಾಶ ಸಿಕ್ಕಿರುವುದು ತುಳುನಾಡಿನ ಜನತೆಗೆ‌ ಹಾಗೂ ಕಂಬಳ ಪ್ರೀಯರಿಗೆ ಹೆಮ್ಮೆಯ ವಿಚಾರವಾಗಿದೆ. ಆದರೆ, ಈ ವಿಚಾರವಾಗಿ ಶಾಸಕ‌ ಸುನಿಲ್ ಕುಮಾರ್‌ ಅವರ ಅಪಸ್ವರ ರಾಜಕೀಯ‌

ದಸರಾದಲ್ಲಿ ಕಂಬಳ ಆಯೋಜನೆಗೆ ಶಾಸಕರ ಅಪಸ್ವರ ವಿಷಾದನೀಯ Read More »

ಜಿಲ್ಲೆಯಲ್ಲಿ ಶೇ. 40ರಷ್ಟು ವಾಡಿಕೆ ಮಳೆಯಲ್ಲಿ ಕೊರತೆ

ಕಾರ್ಕಳ ತಾಲೂಕಿನ 21 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಸಾಧ್ಯತೆ – ಜಿಲ್ಲಾಧಿಕಾರಿ ಉಡುಪಿ : ಜಿಲ್ಲೆಯಲ್ಲಿ ಈ ವರ್ಷದಲ್ಲಿ 1959 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ, ಈವರೆಗೆ 1182ಮಿ.ಮೀ. ಮಳೆಯಾಗಿದೆ. ಈಗಾಗಲೇ ವಾಡಿಕೆ ಮಳೆಯಲ್ಲಿ ಶೇ. 40ರಷ್ಟು ಕೊರತೆ ಕಂಡುಬಂದಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದರು.ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕಾರ್ಕಳ ತಾಲೂಕಿನ 17 ಗ್ರಾಮ ಪಂಚಾಯತ್‌ಗಳ ಪೈಕಿ 21

ಜಿಲ್ಲೆಯಲ್ಲಿ ಶೇ. 40ರಷ್ಟು ವಾಡಿಕೆ ಮಳೆಯಲ್ಲಿ ಕೊರತೆ Read More »

ಆ. 30ರವರೆಗೆ ಗೃಹಜ್ಯೋತಿ ಗ್ಯಾರಂಟಿ ಯೋಜನೆ ಮರು ಪರಿಷ್ಕರಣೆಗೆ ಅವಕಾಶ

ಫಲಾನುಭವಿಗಳು ಶಿಬಿರದಲ್ಲಿ ಭಾಗವಹಿಸುವಂತೆ ಮಾಳ ಅಜಿತ್‌ ಹೆಗ್ಡೆ ಮನವಿ ಕಾರ್ಕಳ : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಗ್ಯಾರಂಟಿ ಯೋಜನೆಯ ಮರು ಪರಿಷ್ಕರಣೆ ಕಾರ್ಯಕ್ರಮವನ್ನು ವಿದ್ಯುತ್ ಇಲಾಖೆಯ ವತಿಯಿಂದ ತಾಲೂಕಿನ ವಿವಿಧ ಭಾಗಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಯೋಜನೆಯ ನೈಜ ಫಲಾನುಭವಿಗಳೆಲ್ಲರೂ ಈ ಶಿಬಿರಗಳಲ್ಲಿ ತಪ್ಪದೇ ಭಾಗವಹಿಸಿ ತಮ್ಮ ಅರ್ಹತೆಯನ್ನು ಮರು ಪರಿಷ್ಕರಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನವನ್ನು ಮುಂದುವರೆಸಿಕೊಳ್ಳಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಾಳ ಅಜಿತ್ ಹೆಗ್ಡೆ ಅವರು ತಿಳಿಸಿದ್ದಾರೆ. ಇಲಾಖೆಯ‌ ಸಿಬಂದ್ದಿ ಮನೆ

ಆ. 30ರವರೆಗೆ ಗೃಹಜ್ಯೋತಿ ಗ್ಯಾರಂಟಿ ಯೋಜನೆ ಮರು ಪರಿಷ್ಕರಣೆಗೆ ಅವಕಾಶ Read More »

error: Content is protected !!
Scroll to Top