Author name: newskarkala desk

ಜೂ. 21 : ಸದಾಶಿವ ಪ್ರಭು ಎಳ್ಳಾರೆ ಅವರಿಗೆ ಅಭಿನಂದನೆ

ಕಾರ್ಕಳ : ಕರ್ನಾಟಕ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾಗಿ, ಕೆಎಸ್‌ಎಫ್‌ಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ಸಲ್ಲಿಸಿ ನಿವೃತ್ತರಾದ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ಜೂ. 21ರಂದು ಸಂಜೆ 4 ಗಂಟೆಗೆ ಹಿರ್ಗಾನ ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ವಠಾರದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.ಭಾರತೀಯ ವಾಯುಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿ ಬಳಿಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ, ಭಾರತೀಯ ಆಡಳಿತ ಸೇವೆ (ಐಎಎಸ್) ಆಗಿ ಭಡ್ತಿಗೊಂಡಿದ್ದರು.ಜೂ.

ಜೂ. 21 : ಸದಾಶಿವ ಪ್ರಭು ಎಳ್ಳಾರೆ ಅವರಿಗೆ ಅಭಿನಂದನೆ Read More »

ಅಮೆರಿಕ – ಇರಾನ್ ನಡುವಣ 107 ದಿನಗಳ ಯುದ್ಧ ಅಂತ್ಯ

ಹಾರ್ಮುಜ್ ರೀ ಓಪನ್ : ಜೂ. 19ರಂದು ಸಹಿ – ಡೊನಾಲ್ಡ್ ಟ್ರಂಪ್ ಘೋಷಣೆ ವಾಷಿಂಗ್ಟನ್ : ಅಮೆರಿಕ-ಇರಾನ್ ಯುದ್ಧ ಕೊನೆಗೂ ಅಂತ್ಯವಾಗುವ ಕಾಲ ಸನ್ನಿಹಿತವಾಗಿದೆ. ಉಭಯ ರಾಷ್ಟ್ರಗಳು ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಸಂಬಂಧ ಜೂ. 19 ರಂದು ಸ್ವಿಟ್ಜರ್ಲೆಂಡ್‌ನಲ್ಲಿ ಔಪಚಾರಿಕ ಸಹಿ ಹಾಕಲು ನಿರ್ಧರಿಸಲಾಗಿದೆ ಎಂದು ತಿಳಸಿದ್ದಾರೆ. ಹೀಗಾಗಿ 3 ತಿಂಗಳಿಗೂ ಅಧಿಕ ಕಾಲದ ಯುದ್ಧ ಕೊನೆಗೊಳ್ಳಲಿದೆ. ಹಾರ್ಮುಜ್‌ ಮುಕ್ತಹಾರ್ಮುಜ್ ಜಲಸಂಧಿಯ ನೌಕಾ ದಿಗ್ಬಂಧನವನ್ನು ತಕ್ಷಣವೇ ತೆರವುಗೊಳಿಸಲಾಗುತ್ತಿದೆ.

ಅಮೆರಿಕ – ಇರಾನ್ ನಡುವಣ 107 ದಿನಗಳ ಯುದ್ಧ ಅಂತ್ಯ Read More »

ಕಾರ್ಕಳದ ಮಹಾಲಕ್ಷ್ಮೀ ಶೆಣೈ ಅವರಿಗೆ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ

ಹಿಂದೂಸ್ತಾನಿ ಶಾಸ್ತ್ರೀಯ ಗಾಯನಕ್ಕಾಗಿ ಅತ್ಯುನ್ನತ ರಾಷ್ಟ್ರೀಯ ಗೌರವಕ್ಕೆ ಭಾಜನ ಬೆಂಗಳೂರು : ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕಿ ಕಾರ್ಕಳದ ವಿದುಷಿ ಮಹಾಲಕ್ಷ್ಮೀ ಶೆಣೈ ಅವರು ಸಂಗೀತ ನಾಟಕ ಅಕಾಡೆಮಿ, ನವದೆಹಲಿ ಕೊಡಮಾಡುವ ಪ್ರತಿಷ್ಠಿತ “ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ–2024″ಕ್ಕೆ ಹಿಂದೂಸ್ತಾನಿ ಗಾಯನ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ. ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಅಧೀನದಲ್ಲಿರುವ ಸಂಗೀತ ನಾಟಕ ಅಕಾಡೆಮಿಯು 2024 ಹಾಗೂ 2025ನೇ ಸಾಲಿನ ಅಕಾಡೆಮಿ ರತ್ನ, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಹಾಗೂ ಉಸ್ತಾದ್ ಬಿಸ್ಮಿಲ್ಲಾ ಖಾನ್

ಕಾರ್ಕಳದ ಮಹಾಲಕ್ಷ್ಮೀ ಶೆಣೈ ಅವರಿಗೆ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ Read More »

ನಿವೃತ್ತ ಶಿಕ್ಷಕ ಉದಯ ಶೆಟ್ಟಿ ಅವರಿಗೆ ಸನ್ಮಾನ

ಕಾರ್ಕಳ : ಹಿರ್ಗಾನ ಗ್ರಾಮದ ಚಿಕ್ಕಲ್ಬೆಟ್ಟು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 16 ವರ್ಷಗಳ ಕಾಲ ಕರ್ತವ್ಯ ಸಲ್ಲಿಸಿ ನಿವೃತ್ತಿ ಹೊಂದಿರುವ ಉದಯ ಶೆಟ್ಟಿ ಬಿ. ಹಾಗೂ ಅವರ ಪತ್ನಿ ಅಮಿತಾ ಉದಯ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಎಸ್‌ಡಿಎಂಸಿ ಅಧ್ಯಕ್ಷ ಸಂಜೀವ ಪೂಜಾರಿ, ಕರ್ನಾಟಕ ಬ್ಯಾಂಕ್‌ ನಿವೃತ್ತ ಮಹಾ ಪ್ರಬಂಧಕರಾದ ನಾಗರಾಜ್ ರಾವ್, ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ, ನಿವೃತ್ತ ಮುಖ್ಯಶಿಕ್ಷಕ ಗೋವಿಂದ ಜೋಗಿ, ನಿವೃತ್ತ ಶಿಕ್ಷಕ ಜನಾರ್ಧನ ಹೆಗ್ಡೆ ಹೆಪ್ಪಳ, ಗ್ರಾಮ ಪಂಚಾಯತ್ ಮಾಜಿ ಸದಸ್ಯ

ನಿವೃತ್ತ ಶಿಕ್ಷಕ ಉದಯ ಶೆಟ್ಟಿ ಅವರಿಗೆ ಸನ್ಮಾನ Read More »

ಜೂ. 12 : ಕೊಲ್ಲೂರು ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್‌ ಭೇಟಿ

ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂ. 12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರುಶನ ಪಡೆಯಲಿದ್ದಾರೆ. ಅಂದು ಮಧ್ಯಾಹ್ನ 12:30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಲಿದ್ದಾರೆ. 3 ಗಂಟೆ ಸುಮಾರಿಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ದೇವರ ದರ್ಶನ ಪಡೆದು, ಮತ್ತೆ ರಸ್ತೆ ಮಾರ್ಗವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಮರಳಲಿದ್ದಾರೆ. ಬಳಿಕ ವಿಶೇಷ ವಿಮಾನದ ಮೂಲಕ

ಜೂ. 12 : ಕೊಲ್ಲೂರು ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್‌ ಭೇಟಿ Read More »

ರಾಜ್ಯ ಸರಕಾರದ ಜನವಿರೋಧಿ ನೀತಿಗಳ ಕುರಿತು ಕಾರ್ಯಕರ್ತರ ಧ್ವನಿ ಗಟ್ಟಿಯಾಗಬೇಕು : ವಿ. ಸುನಿಲ್ ಕುಮಾರ್

ಕಾರ್ಕಳ : ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಪಕ್ಷ ಸಂಘಟನೆಗೆ ಹೆಚ್ಚಿನ ಬಲ ತುಂಬಬೇಕು ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.ಅವರು ಹೊಸ್ಮಾರಿನ ಶ್ರೀ ಭಗವತಿ ಕಾಂಪ್ಲೆಕ್ಸ್‌ನಲ್ಲಿ ನಡೆದ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಮಾತನಾಡಿ, ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಜನರ ಮುಂದಿಡಬೇಕು. ಪಕ್ಷ ಸಂಘಟನೆಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.

ರಾಜ್ಯ ಸರಕಾರದ ಜನವಿರೋಧಿ ನೀತಿಗಳ ಕುರಿತು ಕಾರ್ಯಕರ್ತರ ಧ್ವನಿ ಗಟ್ಟಿಯಾಗಬೇಕು : ವಿ. ಸುನಿಲ್ ಕುಮಾರ್ Read More »

ಆರ್‌ಎಸ್ಎಸ್ ಹೆಸರೆತ್ತಿ ಪುಕ್ಕಟೆ ಪ್ರಚಾರ ಗಿಟ್ಟಿಸುವ ಪ್ರಿಯಾಂಕ್ ಖರ್ಗೆ ಅಮಾಯಕ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿರುವುದು ಖಂಡನೀಯ : ಕುತ್ಯಾರು ನವೀನ್ ಶೆಟ್ಟಿ

ಉಡುಪಿ : ಕೇವಲ ಪ್ರಚಾರದ ತೆವಲಿನಿಂದ ದೇಶಭಕ್ತ ಸಂಘಟನೆಯಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ನಿರಂತರ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾರ್ಕಳದ ಓರ್ವ ಸಾಮಾನ್ಯ ಕಾರ್ಯಕರ್ತನ ಮೇಲೆ ವಿನಾಃಕಾರಣ ಅಟ್ರಾಸಿಟಿ ಪ್ರಕರಣ ದಾಖಲಿಸಿ ಬಂಧಿಸಿರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ತಾನೋರ್ವ ಜವಾಬ್ದಾರಿಯುತ ಸಚಿವ ಎನ್ನುವುದನ್ನು ಮರೆತು ಸದಾ ತನ್ನ ನಾಲಗೆಯ ಮೇಲೆ ಹಿಡಿತವಿಲ್ಲದಂತೆ ದೇಶದ ಪ್ರಧಾನಿ ಹಾಗೂ ಆರ್‌ಎಸ್ಎಸ್‌ ಕುರಿತು ಮನಬಂದಂತೆ

ಆರ್‌ಎಸ್ಎಸ್ ಹೆಸರೆತ್ತಿ ಪುಕ್ಕಟೆ ಪ್ರಚಾರ ಗಿಟ್ಟಿಸುವ ಪ್ರಿಯಾಂಕ್ ಖರ್ಗೆ ಅಮಾಯಕ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿರುವುದು ಖಂಡನೀಯ : ಕುತ್ಯಾರು ನವೀನ್ ಶೆಟ್ಟಿ Read More »

ತಾ.ಪಂ. ಮಾಜಿ ಸದಸ್ಯ ಪ್ರೇಮ್‌ ಕುಮಾರ್‌ ಜೈನ್‌ ನಿಧನ

ಕಾರ್ಕಳ : ತಾಲೂಕು ಪಂಚಾಯತ್‌ ಮಾಜಿ ಸದಸ್ಯ, ಉದ್ಯಮಿ, ಹೊಸ್ಮಾರಿನ ಪ್ರೇಮ್‌ ಕುಮಾರ್‌ ಜೈನ್‌ (65) ಜೂ. 9ರ ಮುಂಜಾನೆ ನಿಧನ ಹೊಂದಿದರು. ಅಣ್ಣಾಜೇರ್‌ ಎಂದೇ ಕರೆಸಿಕೊಳ್ಳುತ್ತಿದ್ದ ಪ್ರೇಮ್‌ ಕುಮಾರ್‌ ಅವರು ರಾಜಕೀಯ, ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದು ಉತ್ತಮ ಸಂಘಟಕರಾಗಿ ಗುರುತಿಸಿಕೊಂಡಿದ್ದರು. ಸ್ಥಳೀಯ ದೇವಸ್ಥಾನ, ಬಸದಿ, ದೈವಸ್ಥಾನ, ಶಾಲಾ ಅಭಿವೃದ್ಧಿಗೆ ಕೊಡುಗೆ ನೀಡಿದ್ದರು. ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಶಾಸಕ ಸುನಿಲ್‌ ಸಂತಾಪಪ್ರೇಮ್‌ ಕುಮಾರ್‌ ನಿಧನಕ್ಕೆ ಶಾಸಕ ವಿ. ಸುನಿಲ್‌ ಕುಮಾರ್‌ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರೇಮ್

ತಾ.ಪಂ. ಮಾಜಿ ಸದಸ್ಯ ಪ್ರೇಮ್‌ ಕುಮಾರ್‌ ಜೈನ್‌ ನಿಧನ Read More »

ಶೂನ್ಯದಿಂದ ಸಾಮ್ರಾಜ್ಯ ಕಟ್ಟಿದ ಸಾಧಕ : ಸಿವಿಲ್ ಕ್ಷೇತ್ರದ ಧ್ರುವತಾರೆ ಎಸ್‌ಕೆಎಸ್‌ ಸುಜಯ ಕುಮಾರ್ ಶೆಟ್ಟಿ

ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಓರ್ವ ಸಾಮಾನ್ಯ ಇಂಜಿನಿಯರ್, ಇಂದು ಸಿವಿಲ್ ತಂತ್ರಜ್ಞಾನದ ಬೃಹತ್ ಸಾಮ್ರಾಜ್ಯವನ್ನೇ ಸೃಷ್ಟಿಸಿದ ರೋಚಕ ಕಥೆಯಿದು. ಪ್ರಾರಂಭದಲ್ಲಿ ಕಾರ್ಕಳದ ಪರಿಸರದಲ್ಲಿ ಸಣ್ಣಪುಟ್ಟ ಮನೆ ಹಾಗೂ ವಾಣಿಜ್ಯ ಸಂಕೀರ್ಣಗಳ ನಿರ್ಮಾಣದಲ್ಲಿ ಮಗ್ನರಾಗಿದ್ದ ಅವರು, ಇಂದು ಸಾವಿರಾರು ಕೋಟಿ ರೂಪಾಯಿಗಳ ಬೃಹತ್ ಕಾಮಗಾರಿಗಳ ಗುತ್ತಿಗೆಯನ್ನು ಯಶಸ್ವಿಯಾಗಿ ನಿರ್ವಹಿಸುವ ಹಂತಕ್ಕೆ ಬೆಳೆದಿದ್ದಾರೆ. ಕರ್ನಾಟಕದ ಮುಂಚೂಣಿ ಗುತ್ತಿಗೆದಾರರಲ್ಲಿ ಒಬ್ಬರಾಗಿ ಹೆಮ್ಮೆಯಿಂದ ಗುರುತಿಸಿಕೊಂಡಿರುವ ಇವರೇ ಎಸ್‌ಕೆಎಸ್‌ ಇನ್‌ಫ್ರಾ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಆಡಳಿತ ನಿರ್ದೇಶಕರಾದ ಸುಜಯ ಕುಮಾರ್ ಶೆಟ್ಟಿ

ಶೂನ್ಯದಿಂದ ಸಾಮ್ರಾಜ್ಯ ಕಟ್ಟಿದ ಸಾಧಕ : ಸಿವಿಲ್ ಕ್ಷೇತ್ರದ ಧ್ರುವತಾರೆ ಎಸ್‌ಕೆಎಸ್‌ ಸುಜಯ ಕುಮಾರ್ ಶೆಟ್ಟಿ Read More »

ಅಜೆಕಾರು ಜ್ಞಾನಸುಧಾದಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ : ಅರಣ್ಯ ಇಲಾಖೆಯ ಸಾಮಾಜಿಕ ಅರಣ್ಯ ವಲಯದ ಸಹಯೋಗದೊಂದಿಗೆ ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಜೂ. 5ರಂದು ವಿಶ್ವ ಪರಿಸರ ದಿನ ಆಚರಿಸಲಾಯಿತು.ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಡಿ.ಎನ್. ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಭೂಮಿಯ ತಾಪಮಾನ ದಿನೇ ದಿನೆ ಏರಿಕೆಯಾಗುತ್ತಿರುವುದು ಆತಂಕದ ವಿಚಾರ. ಅರಣ್ಯ, ಪರಿಸರ ನಾಶವೇ ಇದಕ್ಕೆ ಮೂಲ ಕಾರಣ. ಮುಂದಿನ ಪೀಳಿಗೆ ಉತ್ತಮ

ಅಜೆಕಾರು ಜ್ಞಾನಸುಧಾದಲ್ಲಿ ವಿಶ್ವ ಪರಿಸರ ದಿನಾಚರಣೆ Read More »

error: Content is protected !!
Scroll to Top