Author name: Newskarkala Desk

ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಒದಗಿಸುವಂತೆ ಸಚಿವ ಯು.ಟಿ. ಖಾದರ್‌ ಗೆ ಮನವಿ ಮಾಡಿದ ಸುನಿಲ್‌ ಕುಮಾರ್‌

ಕಾರ್ಕಳ : ಕಾರ್ಕಳ ತಾಲೂಕು ಆಸ್ಪತ್ರೆಯ ಅಭಿವೃದ್ಧಿಗಾಗಿ, ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ಗ್ರಾಮೀಣ ಹಾಗೂ ಪುರಸಭಾ ವ್ಯಾಪ್ತಿಯ ರಸ್ತೆಗಳು, ಶಿಥಿಲಗೊಂಡಿರುವ ಶಾಲಾ ಕಾಲೇಜು ಕಟ್ಟಡಗಳ ಅಭಿವೃದ್ಧಿಗೆ ತುರ್ತು ಅನುದಾನ ಒದಗಿಸುವಂತೆ ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಅವರು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಅವರಿಗೆ ಮನವಿ ಸಲ್ಲಿಸಿದರು.ಆ. 8ರಂದು ತಾಲೂಕು ಕಚೇರಿಯಲ್ಲಿ ಮಳೆ ಹಾನಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ಸಚಿವ ಯು.ಟಿ. ಖಾದರ್‌ ಅವರಿಗೆ ಶಾಸಕರು ಮನವಿ ಸಲ್ಲಿಸಿದರು. ಕಾರ್ಕಳ ತಾಲೂಕು ಆಸ್ಪತ್ರೆಗೆ ನಿತ್ಯ […]

ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಒದಗಿಸುವಂತೆ ಸಚಿವ ಯು.ಟಿ. ಖಾದರ್‌ ಗೆ ಮನವಿ ಮಾಡಿದ ಸುನಿಲ್‌ ಕುಮಾರ್‌ Read More »

ಡೇವಿಡ್‌ ಹತ್ಯೆ ಪ್ರಕರಣ – ಮೂವರ ಬಂಧನ

ಹಣಕಾಸಿನ ವೈಮನಸ್ಸು – ಸುಪಾರಿ ಹತ್ಯೆ ಉಡುಪಿ : ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌ ಡಿಸೋಜಾ (55) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಒಬ್ಬ ಆರೋಪಿ ಪೊಲೀಸ್‌ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಗಸ್ಟ್‌ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಕಾಪು ತಾಲೂಕಿನ ಮುದರಂಗಡಿಯ ಸೆಂಟ್‌ ಕ್ಷೇವಿಯರ್‌ ಚರ್ಚ್‌ ಕಾಂಪ್ಲೆಕ್ಸ್‌ನಲ್ಲಿರುವ ಪ್ರಿನ್ಸ್‌ ಎಂಟರ್‌ಪ್ರೈಸಸ್‌ ಕಚೇರಿಗೆ ಬಂದಿದ್ದ ಡೇವಿಡ್‌ ಡಿಸೋಜಾ ಬಳಿಕ ತಮ್ಮ ಥಾರ್‌ ವಾಹನದ

ಡೇವಿಡ್‌ ಹತ್ಯೆ ಪ್ರಕರಣ – ಮೂವರ ಬಂಧನ Read More »

ಆ. 9 : ಯಕ್ಷಮಿತ್ರರು ದುರ್ಗ – ಸಂಧಾನ ಭೇದನ ತಾಳಮದ್ದಳೆ

ಕಾರ್ಕಳ : ಯಕ್ಷಮಿತ್ರರು ದುರ್ಗ ಇವರ ಆಶ್ರಯದಲ್ಲಿ ಜು.9ರಂದು ಮಧ್ಯಾಹ್ನ 2 ಗಂಟೆಗೆ ಶ್ರೀ ಹರಿಹರೇಶ್ವರ ದೇವಸ್ಥಾನ ದುರ್ಗ ಹರಿಹರ ಸಭಾಭವನದಲ್ಲಿ ʼಸಂಧಾನ ಭೇದನʼ ತಾಳಮದ್ದಳೆ ನಡೆಯಲಿದೆ.ಭಾಗವರಾಗಿ ರವಿಚಂದ್ರ ಕನ್ನಡಿಕಟ್ಟೆ, ಮದ್ದಳೆಯಲ್ಲಿ ಚೈತನ್ಯ ಪದ್ಯಾಣ, ಚಂಡೆಯಲ್ಲಿ ರವಿರಾಜ್‌ ಜೈನ್‌ ಕಾರ್ಕಳ, ಅರ್ಥದಾರಿಗಳಾಗಿ ಸುಣ್ಣಂಬಳ ವಿಶ್ವೇಶ್ವರ ಭಟ್ಟ, ರಾಧಾಕೃಷ್ಣ ಕಲ್ಚಾರ್‌ ವಿಟ್ಲ, ವಿದ್ವಾನ್‌ ಗಣಪತಿ ಭಟ್ಟ ಸಂಕದಗುಂಡಿ, ಪವನ ಕಿರಣಕೆರೆ, ರಜನೀಶ್‌ ಹೊಳ್ಳ ಕೆಂಪಿನಮಕ್ಕಿ, ಮಹಾವೀರ ಪಾಂಡಿ ಸಹಕರಿಸಲಿರುವರು ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಆ. 9 : ಯಕ್ಷಮಿತ್ರರು ದುರ್ಗ – ಸಂಧಾನ ಭೇದನ ತಾಳಮದ್ದಳೆ Read More »

ಶೇಖರ್ ಅಜೆಕಾರು ಐಶ್ವರ್ಯವಿಲ್ಲದೆಯೂ ಉತ್ತಮ ಕಾರ್ಯ ಮಾಡಿದ ಸಹೃದಯಿ – ಡಾ. ಮೋಹನ್‌ ಆಳ್ವ

ಕಾರ್ಕಳ : ಪತ್ರಕರ್ತ ದಿ. ಡಾ. ಶೇಖರ್ ಅಜೆಕಾರು ಅವರೊಂದಿಗೆ ದೀರ್ಘಕಾಲದ ಒಡನಾಟವಿತ್ತು. ಅವರ ಜೀವನಶೈಲಿಯೇ ವಿಭಿನ್ನವಾಗಿತ್ತು. ಸಮಾಜದ ಬಗ್ಗೆ ಅವರಿಗಿದ್ದ ಪರಿಕಲ್ಪನೆ, ವಿಚಾರವಂತಿಕೆ ಹಾಗೂ ಸೃಜನಶೀಲತೆ ಗಮನಾರ್ಹವಾಗಿತ್ತು. ಐಶ್ವರ್ಯವಿಲ್ಲದೆಯೂ ಉತ್ತಮ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಅವರು ತಮ್ಮ ಬದುಕಿನ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಮೂಡಬಿದಿರೆ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಅಭಿಪ್ರಾಯಪಟ್ಟರು. ಅವರು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಾಣೂರಿನ ರಾಜರಾಜೇಶ್ವರಿ ನ್ಯಾಷನಲ್ ಸ್ಕೂಲ್-ಕಾಲೇಜು ಮೈದಾನದಲ್ಲಿ ಆ.6ರಂದು ನಡೆದ 2025-26ನೇ

ಶೇಖರ್ ಅಜೆಕಾರು ಐಶ್ವರ್ಯವಿಲ್ಲದೆಯೂ ಉತ್ತಮ ಕಾರ್ಯ ಮಾಡಿದ ಸಹೃದಯಿ – ಡಾ. ಮೋಹನ್‌ ಆಳ್ವ Read More »

ಕಸ್ತೂರಿ ರಂಗನ್‌ ವರದಿ ಜನರಲ್ಲಿ ಗೊಂದಲ ಸೃಷ್ಠಿಸುತ್ತಿರುವ ಕೇಂದ್ರ ಸರ್ಕಾರ

ಕಸ್ತೂರಿ ರಂಗನ್‌ ವರದಿ : ಕೇಂದ್ರ ಸರಕಾರದಿಂದ ಗೊಂದಲ ಸೃಷ್ಟಿ – ಸಂಸದರ ಮೌನ -ಮುದ್ರಾಡಿ ಆಕ್ರೋಶ ಹೆಬ್ರಿ : ಕಸ್ತೂರಿರಂಗನ್‌ ವರದಿ ವಿಚಾರದಲ್ಲಿ 2008ರಿಂದಲೂ ಕೇಂದ್ರದ ಬಿಜೆಪಿ ಸರಕಾರವು ಜನತೆಯಲ್ಲಿ ಗೊಂದಲ ಸೃಷ್ಠಿಸುತ್ತಲೇ ಬಂದಿದೆ. ರಾಜ್ಯದ ಕಾಂಗ್ರೆಸ್‌ ಸರ್ಕಾರ ವರದಿಯನ್ನು ತಿರಸ್ಕರಿಸಿದ್ದರೂ ಇದೀಗ ಮತ್ತೆ ನೋಟಿಫಿಕೇಶನ್‌ ಜಾರಿ ಮಾಡುವ ಮೂಲಕ ಆತಂಕ ಸೃಷ್ಠಿಸಿದೆ. ಇದೆಲ್ಲವೂ ನಮ್ಮ ಸಂಸದರು, ಶಾಸಕರ ಮೌನದಿಂದಲೇ ಆಗುತ್ತಿದೆ ಎಂದು ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.

ಕಸ್ತೂರಿ ರಂಗನ್‌ ವರದಿ ಜನರಲ್ಲಿ ಗೊಂದಲ ಸೃಷ್ಠಿಸುತ್ತಿರುವ ಕೇಂದ್ರ ಸರ್ಕಾರ Read More »

ಆ. 7 : 16ನೇ ಆವೃತ್ತಿಯ ಆಳ್ವಾಸ್ ಪ್ರಗತಿಗೆ ಚಾಲನೆ – ಎರಡು ದಿನಗಳ ಉದ್ಯೋಗ ಮೇಳ

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಆಯೋಜಿಸಲಾಗುತ್ತಿರುವ ದೇಶದ ಅತಿದೊಡ್ಡ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿಯ 16ನೇ ಆವೃತ್ತಿಯ ಉದ್ಘಾಟನಾ ಸಮಾರಂಭ ಆಗಸ್ಟ್ 7ರಂದು ಬೆಳಿಗ್ಗೆ 9.30ಕ್ಕೆ ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್‌ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ

ಆ. 7 : 16ನೇ ಆವೃತ್ತಿಯ ಆಳ್ವಾಸ್ ಪ್ರಗತಿಗೆ ಚಾಲನೆ – ಎರಡು ದಿನಗಳ ಉದ್ಯೋಗ ಮೇಳ Read More »

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ಡಿ.ಕೆ. ಶಿವಕುಮಾರ್‌

ಬೆಂಗಳೂರು : ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ ಮಾಡಲು ಹೇಳಿದ್ದೇನೆ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಕ್ಷ ಮುಖ್ಯ, ಪಕ್ಷದಲ್ಲಿ ಶಿಸ್ತು ಮುಖ್ಯ ಎಂದರು. ವೀರೇಂದ್ರ ಪಾಟೀಲ್ ಕಾಲದಲ್ಲಿ ಬಂಗಾರಪ್ಪ, ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್ ಅವರಿಗೆ ಕೊಟ್ಟಿರಲಿಲ್ಲ. ನಾನು, ಪರಮೇಶ್ವರ್ ಕೂಡ ಸಚಿವ ಸ್ಥಾನ ಕೊಡದಿದ್ದಾಗ ಸುಮ್ಮನೆ ಇರಲಿಲ್ಲವಾ ಎಂದು ಪ್ರಶ್ನಸಿದ್ದಾರೆ. ತಾಳ್ಮೆಯಿಂದ ಇರಬೇಕು, ನಾನು ತಾಳ್ಮೆಯಿಂದ ಇರಲಿಲ್ಲವಾ? ಎಲ್ಲರೂ ತಾಳ್ಮೆಯಿಂದ ಇರಬೇಕು. ಶಾಸಕರು ರಾಜೀನಾಮೆ

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ಡಿ.ಕೆ. ಶಿವಕುಮಾರ್‌ Read More »

ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು ಓದಲಿ : ನಂತರ ಕಾಂಗ್ರೆಸ್ ಪಕ್ಷದ ಲೆಟರ್‌ಹೆಡ್‌ ಓದಲಿ – ಬಿ.ಕೆ ಹರಿಪ್ರಸಾದ್‌

ಬೆಂಗಳೂರು : ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು ಓದಲಿ, ನಂತರ ಕಾಂಗ್ರೆಸ್ ಪಕ್ಷದ ಲೆಟರ್‌ಹೆಡ್‌ ಓದಲಿ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್‌ ಅವರು ಹರಿಹಾಯ್ದಿದ್ದಾರೆ. ಸಾಮಾಜಿಕ ಜಾಲತಾನ X ನಲ್ಲಿ ಪೋಸ್ಟ್‌ ಮಾಡಿರುವ ಅವರು, ಸಂವಿಧಾನದ 178ನೇ ವಿಧಿಯ ಪ್ರಕಾರ ವಿಧಾನಸಭೆಯ ಸಭಾಧ್ಯಕ್ಷರು ಮತ್ತು ಉಪಸಭಾಧ್ಯಕ್ಷರನ್ನು ವಿಧಾನಸಭೆಯೇ ಆಯ್ಕೆ ಮಾಡುತ್ತದೆ. 182ನೇ ವಿಧಿಯ ಪ್ರಕಾರ ವಿಧಾನಪರಿಷತ್ತಿನ ಸಭಾಪತಿ ಮತ್ತು ಉಪಸಭಾಪತಿಯನ್ನು ವಿಧಾನಪರಿಷತ್ತೇ ಆಯ್ಕೆ ಮಾಡುತ್ತದೆ. ಈ ಕನಿಷ್ಠ ಸಾಂವಿಧಾನಿಕ ಜ್ಞಾನವೂ ಇಲ್ಲದೆ ಬಿಜೆಪಿ ನಾಯಕರು ತೌಡು

ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು ಓದಲಿ : ನಂತರ ಕಾಂಗ್ರೆಸ್ ಪಕ್ಷದ ಲೆಟರ್‌ಹೆಡ್‌ ಓದಲಿ – ಬಿ.ಕೆ ಹರಿಪ್ರಸಾದ್‌ Read More »

ಕಾರ್ಕಳದಲ್ಲಿ ಧಾರಾಕಾರ ಮಳೆ – ರೆಂಜಾಳದಲ್ಲಿ ಭೂಕುಸಿತ ಭೀತಿ

8 ಮಂದಿಯ ಸ್ಥಳಾಂತರ ಕಾರ್ಕಳ : ಕಾರ್ಕಳದಲ್ಲಿ ಕಳೆದ ಒಂದು ವಾರದಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಪರಿಣಾಮ ಕೆಲವೆಡೆ ನೆರೆ ಭೀತಿ, ಭೂಕುಸಿತದ ಆತಂಕ ತಲೆದೋರಿದೆ. ನದಿ, ತೊರೆ, ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿದೆ. ರೆಂಜಾಳ ಗ್ರಾಮದ ಹೆಡ್ಮೆಯ ಹರಿಪ್ರಸಾದ್‌ ಹಾಗೂ ಸುಮಿತ್ರಾ ಅವರ ಮನೆಗೆ ಭೂಕುಸಿತದ ಭೀತಿ ಎದುರಾಗಿದೆ. ಭೂಕುಸಿತದ ಭೀತಿಯಿಂದ 2 ಕುಟುಂಬದ 8 ಮಂದಿ ಸದಸ್ಯರನ್ನು ಸ್ಥಳಾಂತರಿಸಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ತಹಶೀಲ್ದಾರ್‌ ಪ್ರದೀಪ್‌ ಆರ್.‌ ಭೇಟಿ ನೀಡಿದ್ದಾರೆ. ರೆಂಜಾಳ ಪ್ರಾಥಮಿಕ ಶಾಲೆಯಲ್ಲಿ ತಾಲೂಕು

ಕಾರ್ಕಳದಲ್ಲಿ ಧಾರಾಕಾರ ಮಳೆ – ರೆಂಜಾಳದಲ್ಲಿ ಭೂಕುಸಿತ ಭೀತಿ Read More »

ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಲಿವರ್ ಆರೋಗ್ಯ ತಪಾಸಣಾ ಪ್ಯಾಕೇಜ್

ಕಾರ್ಕಳ : ಯಕೃತ್ (ಲಿವರ್) ಸಂಬಂಧಿತ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವ ಉದ್ದೇಶದಿಂದ ಕಾರ್ಕಳ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಆ. 3 ರಿಂದ 5 ರವರೆಗೆ ಸಮಗ್ರ ಯಕೃತ್ ಆರೋಗ್ಯ ತಪಾಸಣಾ ಪ್ಯಾಕೇಜ್ ಅನ್ನು ಆಯೋಜಿಸಿದೆ. 3,300 ರೂ. ಮೌಲ್ಯದ ಈ ಪ್ಯಾಕೇಜ್‌ನಲ್ಲಿ ಅತ್ಯಾಧುನಿಕ ಫೈಬ್ರೋಸ್ಕ್ಯಾನ್ (FibroScan) ಆಗಿದ್ದು, ಸೂಜಿ ಇಲ್ಲದೆ, ನೋವಿಲ್ಲದೆ ಕೆಲವೇ ನಿಮಿಷಗಳಲ್ಲಿ ಯಕೃತ್‌ನ ಗಡಸುತನ (Liver Stiffness) ಹಾಗೂ ಫ್ಯಾಟಿ ಲಿವರ್ ಸಮಸ್ಯೆಯನ್ನು ಪತ್ತೆಹಚ್ಚುವಿಕೆ, ಅಲ್ಟ್ರಾಸೌಂಡ್, ರಕ್ತ ಪರೀಕ್ಷೆಗಳು, ಹೆಪಟೈಟಿಸ್

ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಲಿವರ್ ಆರೋಗ್ಯ ತಪಾಸಣಾ ಪ್ಯಾಕೇಜ್ Read More »

error: Content is protected !!
Scroll to Top