ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಒದಗಿಸುವಂತೆ ಸಚಿವ ಯು.ಟಿ. ಖಾದರ್ ಗೆ ಮನವಿ ಮಾಡಿದ ಸುನಿಲ್ ಕುಮಾರ್
ಕಾರ್ಕಳ : ಕಾರ್ಕಳ ತಾಲೂಕು ಆಸ್ಪತ್ರೆಯ ಅಭಿವೃದ್ಧಿಗಾಗಿ, ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ಗ್ರಾಮೀಣ ಹಾಗೂ ಪುರಸಭಾ ವ್ಯಾಪ್ತಿಯ ರಸ್ತೆಗಳು, ಶಿಥಿಲಗೊಂಡಿರುವ ಶಾಲಾ ಕಾಲೇಜು ಕಟ್ಟಡಗಳ ಅಭಿವೃದ್ಧಿಗೆ ತುರ್ತು ಅನುದಾನ ಒದಗಿಸುವಂತೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿದರು.ಆ. 8ರಂದು ತಾಲೂಕು ಕಚೇರಿಯಲ್ಲಿ ಮಳೆ ಹಾನಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ಸಚಿವ ಯು.ಟಿ. ಖಾದರ್ ಅವರಿಗೆ ಶಾಸಕರು ಮನವಿ ಸಲ್ಲಿಸಿದರು. ಕಾರ್ಕಳ ತಾಲೂಕು ಆಸ್ಪತ್ರೆಗೆ ನಿತ್ಯ […]










