Author name: Newskarkala Desk

ಕೆ.ಸಿ.ಇ.ಟಿ ಫಲಿತಾಂಶ – ಜ್ಞಾನಸುಧಾದ ಎನ್. ಶ್ರೇಯಸ್‌ಗೆ ನಾಲ್ಕು ವಿಭಾಗಗಳಲ್ಲಿ ನಾಲ್ಕನೇ ರ‍್ಯಾಂಕ್

ಇಂಜಿನಿಯರಿಂಗ್‌ನಲ್ಲಿ 25 ವಿದ್ಯಾರ್ಥಿಗಳಿಗೆ 500ರೊಳಗಿನ ರ‍್ಯಾಂಕ್ 28 ವಿದ್ಯಾರ್ಥಿಗಳಿಗೆ ಇತರ ವಿಭಾಗಗಳಲ್ಲಿ 100ರೊಳಗಿನ ರ‍್ಯಾಂ ಕಾರ್ಕಳ : ಇಂಜಿನೀಯರಿಂಗ್‌ ಹಾಗೂ ಇತರ ವೃತ್ತಿಪರ ಕೋರ್ಸುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಇಂಜಿನಿಯರಿಂಗ್ ವಿಭಾಗದಲ್ಲಿ 25 ವಿದ್ಯಾರ್ಥಿಗಳು 500ರೊಳಗಿನ ರ‍್ಯಾಂಕ್, 87 ವಿದ್ಯಾರ್ಥಿಗಳು 2 ಸಾವಿರದೊಳಗಿನ ರ‍್ಯಾಂಕ್ ಹಾಗೂ 201 ವಿದ್ಯಾರ್ಥಿಗಳು ಐದು ಸಾವಿರದೊಳಗಿನ ರ‍್ಯಾಂಕ್ ಗಳಿಸಿದ್ದಾರೆ. ಜೊತೆಗೆ 28 ವಿದ್ಯಾರ್ಥಿಗಳು ಇಂಜಿನಿಯರಿಂಗೇತರ ವಿಭಾಗಗಳಲ್ಲಿ ನೂರರೊಳಗಿನ ರ‍್ಯಾಂಕ್ ಪಡೆದಿದ್ದಾರೆ. […]

ಕೆ.ಸಿ.ಇ.ಟಿ ಫಲಿತಾಂಶ – ಜ್ಞಾನಸುಧಾದ ಎನ್. ಶ್ರೇಯಸ್‌ಗೆ ನಾಲ್ಕು ವಿಭಾಗಗಳಲ್ಲಿ ನಾಲ್ಕನೇ ರ‍್ಯಾಂಕ್ Read More »

ಗೃಹಮಂತ್ರಿಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ನಿಂದಿಸಿದ ಕೆರ್ವಾಶೆ ಮೂಲದ ವ್ಯಕ್ತಿಗೆ 14 ದಿನಗಳ ನ್ಯಾಯಾಂಗ ಬಂಧನ

ಕಾರ್ಕಳ : ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜಾತಿನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಕಾರ್ಕಳ ಕೆರ್ವಾಶೆ ನಲ್ಕೆದಬೆಟ್ಟು ನಿವಾಸಿ ಸುಧೀರ ಬಂಗೇರ (48) ಎಂಬಾತನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಫೇಸ್‌ಬುಕ್‌ ಖಾತೆಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಪೋಟೊ ಹಾಕಿ ಅದರಲ್ಲಿ ‘ಆರೆಸ್ಸೆಸ್‌ ಇನ್ನು ಎರಡು ವರ್ಷಗಳ ಅವಧಿ ಕೋಮುವಾದವನ್ನು ಉಸಿರಾಡುವುದಿಲ್ಲ. ಕಾರಣ ಗೃಹಮಂತ್ರಿ ಸ್ಥಾನದಲ್ಲಿ ಸೌಮ್ಯ ಸ್ವಭಾವದ ಸಚಿವರಿಲ್ಲ’ ಎಂಬ ಪ್ರಿಯಾಂಕ್‌ ಖರ್ಗೆ ಅವರ

ಗೃಹಮಂತ್ರಿಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ನಿಂದಿಸಿದ ಕೆರ್ವಾಶೆ ಮೂಲದ ವ್ಯಕ್ತಿಗೆ 14 ದಿನಗಳ ನ್ಯಾಯಾಂಗ ಬಂಧನ Read More »

ಕರಾಟೆಯಲ್ಲಿ ಸಾಧನೆಗೈದ ಅವಳಿ ಸಹೋದರರು

ನಿಟ್ಟೆ: ಕರಾಟೆ ಕ್ಷೇತ್ರದಲ್ಲಿ ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಅದ್ಭುತ ಸಾಧನೆಗೈದಿರುವ ನಿಟ್ಟೆಯ ಪ್ರತಿಭಾನ್ವಿತ ಅವಳಿ ಸಹೋದರರಾದ ಅನುಷ್ ಅರುಣ್ ಕೆ. ಮತ್ತು ಆಯುಷ್ ಅರುಣ್ ಅವರಿಗೆ ಈ ವರ್ಷದ ಪ್ರತಿಷ್ಠಿತ ‘ಯುವ ಸಾಧಕ’ ಬಿರುದು ನೀಡಿ ಗೌರವಿಸಲಾಗಿದೆ.​ಕಾರ್ಕಳದ ತೆಲಿಕೆದ ತೆನಾಲಿ ತಂಡದ ಆಶ್ರಯದಲ್ಲಿ ಜರುಗಿದ ತೆಲಿಕೆದ ಸಂಭ್ರಮ-2026 ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಈ ಇಬ್ಬರು ಯುವ ಕ್ರೀಡಾಪಟುಗಳನ್ನು ಸಾರ್ವಜನಿಕವಾಗಿ ಸನ್ಮಾನಿಸಿ ಬಿರುದು ಪ್ರದಾನ ಮಾಡಲಾಯಿತು.​ಬಾಲ್ಯದಲ್ಲೇ ಅಪ್ರತಿಮ ಕರಾಟೆ ಸಾಧನೆ​ಅನುಷ್ ಮತ್ತು ಆಯುಷ್ ಅವರು ಬಾಲ್ಯದಿಂದಲೇ ಕರಾಟೆಯಲ್ಲಿ

ಕರಾಟೆಯಲ್ಲಿ ಸಾಧನೆಗೈದ ಅವಳಿ ಸಹೋದರರು Read More »

ಲಾರಿ-ಕಾರು ಅಪಘಾತ: ಕಾರ್ಕಳ ನಕ್ರೆಯ ಐವರು ಗಂಭೀರ

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ರಾತ್ರಿ ಉಪ್ಪಿನಂಗಡಿಯ ಕೂಟೇಲು ಸಮೀಪ ನಡೆದಿದೆ. ಕಾರ್ಕಳದ ನಕ್ರೆ ಗ್ರಾಮದ ಕುಟುಂಬವೊಂದು ಸುಬ್ರಹ್ಮಣ್ಯಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಡುಗೆ ಅನಿಲ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಚಾಲಕ ದೀಪಕ್ (45) ಗುರುರಾಜ್ (46) ಧನುಷ್ (15) ಭಾರತಿ (48) ಹಾಗೂ ಗೀತಾ (55) ಗಂಭೀರವಾಗಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ತಕ್ಷಣ ರಕ್ಷಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,

ಲಾರಿ-ಕಾರು ಅಪಘಾತ: ಕಾರ್ಕಳ ನಕ್ರೆಯ ಐವರು ಗಂಭೀರ Read More »

ಬೈಕ್‌ಗಳ ಮುಖಾಮುಖಿ ಡಿಕ್ಕಿ, ಸವಾರನ ತಲೆಗೆ ಗಂಭೀರ ಗಾಯ

ಅಜೆಕಾರು: ನಿಯಂತ್ರಣ ತಪ್ಪಿ ಬಂದ ಬೈಕೊಂದು ಸ್ಕೂಟರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಕೆರ್ವಾಶೆ ಗರಡಿ ಬಳಿ ಮೇ 31ರಂದು ನಡೆದಿದೆ. ಅಪಘಾತದಲ್ಲಿ ಸ್ಕೂಟರ್ ಸವಾರ ನಾಗೇಶ ಬಿ. ಬಾಳಿಗ ಎಂಬುವವರ ತಲೆಗೆ ತೀವ್ರ ರಕ್ತಗಾಯವಾಗಿದ್ದು, ಬಲಗಾಲು ಮತ್ತು ಕೈಗಳಿಗೆ ಗಂಭೀರ ಗಾಯಗಳಾಗಿವೆ. ಇವರನ್ನು ತಕ್ಷಣ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಪರಿಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರ್ಲಾಲಿನ ಎಸ್. ವೆಂಕಟೇಶ ಪ್ರಭು (59) ಎಂಬುವವರು ನೀಡಿದ ದೂರಿನ ಮೇರೆಗೆ

ಬೈಕ್‌ಗಳ ಮುಖಾಮುಖಿ ಡಿಕ್ಕಿ, ಸವಾರನ ತಲೆಗೆ ಗಂಭೀರ ಗಾಯ Read More »

ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಆದಾಯ ಪಡೆದ ಆಟಗಾರ

ದೆಹಲಿ : ಐಪಿಎಲ್ ಟೂರ್ನಿಯ 19 ವರ್ಷಗಳ ಇತಿಹಾಸದಲ್ಲಿ ಅತಿ ಹೆಚ್ಚು ಆದಾಯ ಪಡೆದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರ ಸ್ಥಾನ ಪಡೆದಿದ್ದಾರೆ ಎಂದು ವರದಿಯಾಗಿದೆ. ಫೆನಾಟಿಕ್ ಸ್ಪೋರ್ಟ್ಸ್ ಮತ್ತು ಹುರುನ್ ನೀಡಿರುವ ವರದಿ ಪ್ರಕಾರ ಐಪಿಎಲ್‌ನ 19 ಆವೃತ್ತಿಗಳಲ್ಲೂ ಆರ್‌ಸಿಬಿ ತಂಡವನ್ನು ಪ್ರತಿನಿಧಿಸಿರುವ ವಿರಾಟ್ ಕೊಹ್ಲಿ ಒಟ್ಟು 230 ಕೋಟಿ ಆದಾಯ ಪಡೆದು ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ಎಂಎಸ್ ಧೋನಿ ಅವರನ್ನು ಹಿಂದಿಕ್ಕಿದ್ದಾರೆ. ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ

ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಆದಾಯ ಪಡೆದ ಆಟಗಾರ Read More »

ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಸಾಧ್ಯತೆ

ಮೇ 25ರವರೆಗೆ ಸಮುದ್ರಕ್ಕೆ ಇಳಿಯದಂತೆ ಕರಾವಳಿ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ಮಂಗಳೂರು : ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮೇ 25ರವರೆಗೆ ಕರ್ನಾಟಕ ಕರಾವಳಿಯ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿರುವವರು ತಕ್ಷಣ ದಡ ಸೇರಬೇಕು. ಹವಾಮಾನ ಇಲಾಖೆಯ ಅಧಿಕೃತ ಸೂಚನೆಗಳನ್ನು ಪಾಲಿಸುವಂತೆ ತಿಳಿಸಲಾಗಿದೆ. ಮೇ 20ರಿಂದ ಮೇ 22ರವರೆಗೆ ಕರ್ನಾಟಕ, ಕೇರಳ ಕರಾವಳಿ, ಲಕ್ಷದ್ವೀಪ, ಮಾಲ್ಡೀವ್ಸ್ ಮತ್ತು ಕೊಮೊರಿನ್ ಪ್ರದೇಶಗಳಲ್ಲಿ ಗಂಟೆಗೆ

ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಸಾಧ್ಯತೆ Read More »

ಆನ್‍ಲೈನ್ ಇ-ಫಾರ್ಮಸಿ ಬಂದ್‌ಗೆ ಆಗ್ರಹಿಸಿ ಕಾರ್ಕಳದಲ್ಲಿ 42 ಮೆಡಿಕಲ್ಸ್‌ ಬಂದ್‌ – ತಹಶೀಲ್ದಾರರಿಗೆ ಮನವಿ

ಕಾರ್ಕಳ : ಆನ್‍ಲೈನ್ ಇ-ಫಾರ್ಮಸಿಗಳು ಮತ್ತು ಕ್ವಿಕ್ ಕಾಮರ್ಸ್ ಆಪ್‍ಗಳ ಮೂಲಕ ಕಾನೂನು ಬಾಹಿರವಾಗಿ ಔಷಧಿ ಮಾರಾಟ ಮಾಡುವುದನ್ನು ವಿರೋಧಿಸಿ ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ (ಎಐಓಸಿಡಿ) ಇಂದು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದು ಕಾರ್ಕಳ ತಾಲೂಕಿನಲ್ಲೂ ಬಂದ್‍ಗೆ ಬೆಂಬಲ ನೀಡಿದ್ದು ಅಪೊಲೋ, ಜನೌಷಧಿ ಹೊರತುಪಡಿಸಿ ತಾಲೂಕಿನಾದ್ಯಂತ ಸುಮಾರು 42 ಮೆಡಿಕಲ್‌ಗಳು ಬಂದ್‌ ಆಗಿದೆ. ತಹಶೀಲ್ದಾರರಿಗೆ ಮನವಿಕಾರ್ಕಳ ತಾಲೂಕಿನ ವಿವಿಧ ಮೆಡಿಕಲ್‌ಗಳ ಮಾಲಕರು, ಸಿಬ್ಬಂದಿಗಳು ಆನ್‍ಲೈನ್ ಇ-ಫಾರ್ಮಸಿಗಳು ಮತ್ತು ಕ್ವಿಕ್ ಕಾಮರ್ಸ್ ಆಪ್‍ಗಳ

ಆನ್‍ಲೈನ್ ಇ-ಫಾರ್ಮಸಿ ಬಂದ್‌ಗೆ ಆಗ್ರಹಿಸಿ ಕಾರ್ಕಳದಲ್ಲಿ 42 ಮೆಡಿಕಲ್ಸ್‌ ಬಂದ್‌ – ತಹಶೀಲ್ದಾರರಿಗೆ ಮನವಿ Read More »

ಕೆಎಂಡಿಸಿ ಸಾಲ : ಒಟಿಎಸ್ ಮೂಲಕ ಬಡ್ಡಿ ಮನ್ನಾ

ಉಡುಪಿ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಆರ್ಥಿಕ ವರ್ಷ 2013-14 ರಿಂದ 2018-19 ನೇ ಸಾಲಿನಲ್ಲಿ ಅರಿವು, ಶ್ರಮಶಕ್ತಿ, ಸ್ವಾವಲಂಬನಾ, ಎನ್.ಎಂ.ಎಫ್.ಡಿ.ಸಿ ನೇರ ಸಾಲ, ಮೈಕ್ರೋ ಕಿರುಸಾಲ, ಪಶುಸಂಗೋಪನಾ ಯೋಜನೆ ಮುಂತಾದ ವಿವಿಧ ಯೋಜನೆಗಳಡಿ ನೀಡಲಾಗಿರುವ ಸಾಲದ ಮೊತ್ತವನ್ನು ಪೂರ್ಣವಾಗಿ ಅಸಲು ಪಾವತಿಸುವ ಫಲಾನುಭವಿಗಳಿಗೆ ಸರ್ಕಾರದ ಆದೇಶದಂತೆ ಒಂದಾವರ್ತಿ ತೀರುವಳಿ ಯೋಜನೆ (ಒ.ಟಿ.ಎಸ್) ಮೂಲಕ ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ. ಈ ಯೋಜನೆಯಡಿ ಫಲಾನುಭವಿಯು ಸಾಲದ ಖಾತೆಯಲ್ಲಿ ಬಾಕಿ ಉಳಿದಿರುವ ಮೊತ್ತದ ಶೇ. 25ರಷ್ಟು ಮೊತ್ತವನ್ನು ಪಾವತಿಸಿ,

ಕೆಎಂಡಿಸಿ ಸಾಲ : ಒಟಿಎಸ್ ಮೂಲಕ ಬಡ್ಡಿ ಮನ್ನಾ Read More »

ಅಫ್ಘಾನಿಸ್ತಾನ ವಿರುದ್ಧದ ಏಕದಿನ ಹಾಗೂ ಟೆಸ್ಟ್‌ ಪಂದ್ಯಕ್ಕೆ ಭಾರತ ತಂಡ ಪ್ರಕಟ

ಟೆಸ್ಟ್‌ಗೆ ರಾಹುಲ್ ಉಪನಾಯಕ – ಮೂವರು ಕನ್ನಡಿಗರಿಗೆ ಅವಕಾಶ ಮುಂಬೈ : ಬಿಸಿಸಿಐ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಒಂದು ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಿದೆ. ಏಕದಿನ ಹಾಗೂ ಟೆಸ್ಟ್ ಎರಡೂ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ ಅವರನ್ನೇ ಆಯ್ಕೆ ಸಮಿತಿ ಮುಂದುವರಿಸಿದ್ದು, ಟೆಸ್ಟ್ ತಂಡದ ಉಪನಾಯಕನಾಗಿ ಕೆಎಲ್ ರಾಹುಲ್ ಹಾಗೂ ಏಕದಿನ ತಂಡದ ಉಪನಾಯಕನಾಗಿ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಲಾಗಿದೆ.ಗುವಾಹಟಿಯಲ್ಲಿ ಸಭೆ ಸೇರಿದ್ದ ಆಯ್ಕೆ ಸಮಿತಿ ಎರಡೂ ತಂಡಗಳನ್ನು

ಅಫ್ಘಾನಿಸ್ತಾನ ವಿರುದ್ಧದ ಏಕದಿನ ಹಾಗೂ ಟೆಸ್ಟ್‌ ಪಂದ್ಯಕ್ಕೆ ಭಾರತ ತಂಡ ಪ್ರಕಟ Read More »

error: Content is protected !!
Scroll to Top