• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕರಾವಳಿ

ಧರ್ಮಸ್ಥಳ ಪ್ರಕರಣ – ಎರಡನೇ ಜಾಗದಲ್ಲೂ ಯಾವುದೇ ಕಳೇಬರವಿಲ್ಲ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 11 ಗಂಟೆಯಿಂದ ಸಾಕ್ಷಿ ದೂರುದಾರ ವ್ಯಕ್ತಿ ತೋರಿಸಿದ ಎರಡನೇ ಜಾಗದಲ್ಲಿ ಶೋಧ ಕಾರ್ಯ ನಡೆಯಿತು. ನೇತ್ರಾವತಿ ನದಿ ಪಕ್ಕದ ದಟ್ಟ ಕಾಡಿನೊಳಗಡೆ ಮಧ್ಯಾಹ್ನ 12:30ರವರೆಗೂ ಶೋಧ ಕಾರ್ಯ ನಡೆದರೂ ಯಾವುದೇ ಕುರುಹು ಪತ್ತೆಯಾಗಿಲ್ಲ. ಅರಣ್ಯ ಪ್ರವೇಶದ ಆರಂಭದಲ್ಲೇ ಎರಡನೇ ಜಾಗವಿದ್ದು, ಅರಣ್ಯದ ಒಳಗಡೆ ಉತ್ಖನನ ನಡೆಸಲು ಯಂತ್ರ ಬಳಸಲು ಅನುಮತಿ ಇಲ್ಲದ ಕಾರಣ ಪಂಚಾಯತ್‌ನ ಇಪ್ಪತ್ತು ಮಂದಿ ಕಾರ್ಮಿಕರಿಂದ ಉತ್ಖನನ ಕಾರ್ಯ […]

ಧರ್ಮಸ್ಥಳ ಪ್ರಕರಣ – ಎರಡನೇ ಜಾಗದಲ್ಲೂ ಯಾವುದೇ ಕಳೇಬರವಿಲ್ಲ Read More »

ಗಂಟೆಗೆ 50-60 ಕಿ. ಮೀ. ವೇಗದ ಬಿರುಗಾಳಿ ಸಹಿತ ಭಾರೀ ಮಳೆ : ಹವಾಮಾನ ಇಲಾಖೆ

ಬೆಂಗಳೂರು : ಜುಲೈ ಅಂತ್ಯದ ವೇಳೆಗೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಬಲವಾದ ಗಾಳಿ ಮತ್ತು ಮಧ್ಯಮ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಾರವಾರ, ಮಂಗಳೂರು, ಪಣಂಬೂರು, ಹೊನ್ನಾವರ, ಭಟ್ಕಳ, ಗಂಗೊಳ್ಳಿ, ಮಲ್ಪೆ ಬಂದರು ಮತ್ತು ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆಯ ದತ್ತಾಂಶದ ಪ್ರಕಾರ, ಜುಲೈ 29 ರವರೆಗೆ

ಗಂಟೆಗೆ 50-60 ಕಿ. ಮೀ. ವೇಗದ ಬಿರುಗಾಳಿ ಸಹಿತ ಭಾರೀ ಮಳೆ : ಹವಾಮಾನ ಇಲಾಖೆ Read More »

ಉಭಯ ತಾಲೂಕಿನೆಲ್ಲೆಡೆ ಸಂಭ್ರಮದ ನಾಗರ ಪಂಚಮಿ

ಕಾರ್ಕಳ : ಕಾರ್ಕಳ ಹೆಬ್ರಿ ಉಭಯ ತಾಲೂಕಿನ ವಿವಿಧ ದೇವಸ್ಥಾನ, ನಾಗ ಬನಗಳಲ್ಲಿ ಮಂಗಳವಾರ ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ತನು-ತಂಬಿಲ ಅರ್ಪಿಸಿದರು. ಸೂಡ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ, ಕಾರ್ಕಳ ಪೆರ್ವಾಜೆ ಹಾಗೂ ಅನಂತಪದ್ಮನಾಭ ದೇವಸ್ಥಾನ, ಕುಕ್ಕುಂದೂರು, ಶಿವತಿಕೆರೆ, ಕಾಳಿಕಾಂಬಾ, ನಿಂಜೂರು, ಪರಪು ನಾಗ ಬ್ರಹ್ಮಸ್ಥಾನ, ಸಾಂತ್ರಬೆಟ್ಟು ನಾಗಸ್ಥಾನ, ನಂದಳಿಕೆ ಶ್ರಿ ಮಹಾಲಿಂಗೇಶ್ವರ ದೇವಸ್ಥಾನ, ಕೆರ್ವಾಶೆ, ಅಂಡಾರು ಕರಿಯಾಲು, ಕೌಡೂರು, ಬೈಲೂರು, ನೀರೆ, ಯರ್ಲಪಾಡಿ ಮತ್ತು ಕರ್ವಾಲು ದೇವಸ್ಥಾನಗಳಲ್ಲಿ ನಾಗದೇವರಿಗೆ ವಿಶೇಷ ಪೂಜೆ ಜರುಗಿತು. ಕುಟುಂಬದ

ಉಭಯ ತಾಲೂಕಿನೆಲ್ಲೆಡೆ ಸಂಭ್ರಮದ ನಾಗರ ಪಂಚಮಿ Read More »

ಧಾರಾಕಾರ ಮಳೆ ಸಾಧ್ಯತೆ – ಕರಾವಳಿಗೆ ರೆಡ್ ಅಲರ್ಟ್

ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಂಭವವಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಮೈಸೂರು, ದಾವಣಗೆರೆ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಧಾರಾಕಾರ ಮಳೆ ಸಾಧ್ಯತೆ – ಕರಾವಳಿಗೆ ರೆಡ್ ಅಲರ್ಟ್ Read More »

ಕಾರ್ಕಳ : ಮುಂಡ್ಲಿ ಗ್ರಾಮದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ನಿರ್ಬಂಧ ಪ್ರಕರಣ

ಆಯೋಜಕರ ವಿರುದ್ಧ ದಾಖಲಾಗಿದ್ದ ದೂರಿಗೆ ಹೈಕೋರ್ಟ್‌ನಿಂದ ತಡೆ ಕಾರ್ಕಳ : ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಜಾರ್ಕಳ ಮುಂಡ್ಲಿ ಎಂಬಲ್ಲಿ ಜ. 14ರಂದು ಶ್ರೀ ಈಶ್ವರ ಯಕ್ಷಗಾನ ಸಂಘದ ನೇತೃತ್ವದಲ್ಲಿ ನಡೆಯುತ್ತಿದ್ದ ಯಕ್ಷಗಾನ ಆಯೋಜನೆಗೆ ಪಂಚಾಯತ್‌ ಪಿಡಿಓ ಅವರಿಂದ ಹಾಗೂ ಧ್ವನಿವರ್ದಕ ಬಳಕೆಗೆ ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆದಿಲ್ಲ ಎಂದು ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಕಾರ್ಯಕ್ರಮ ಆಯೋಜಕರ ವಿರುದ್ಧ ದಾಖಲಾಗಿದ್ದ ದೂರಿಗೆ ಹೈಕೋರ್ಟ್‌ ತಡೆ ನೀಡಿದೆ. ಶ್ರೀ ಈಶ್ವರ ಯಕ್ಷಗಾನ ಸಂಘದ ಅಧ್ಯಕ್ಷ ಸದಾನಂದ

ಕಾರ್ಕಳ : ಮುಂಡ್ಲಿ ಗ್ರಾಮದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ನಿರ್ಬಂಧ ಪ್ರಕರಣ Read More »

ಸಾಲ ಕೊಡುವುದಾಗಿ 200 ಕೋಟಿ ರೂ. ಗೂ ಅಧಿಕ ವಂಚನೆ

ಮದ್ಯದ ದೊರೆ ಬಹುಕೋಟಿ ವಂಚಕ ಮಂಗಳೂರು ಪೊಲೀಸ್‌ ವಶಕ್ಕೆ ಮಂಗಳೂರು : ಸಾಲ ಕೊಡುವುದಾಗಿ ಅನೇಕ ವರ್ಷಗಳಿಂದ 200 ಕೋಟಿ ರೂ. ಗೂ ಅಧಿಕ ವಂಚನೆ ಮಾಡಿರುವ ವಂಚಕ ರೋಹನ್ ಸಲ್ಡಾನಾ ಎಂಬಾತನನ್ನ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಿಕ್ಕಿಬಿದ್ದಿದ್ದೇಗೆ ?ಆಂಧ್ರ ಪ್ರದೇಶ ಮೂಲದ ಸಿಲ್ಕ್ ಸ್ಯಾರಿ ತಯಾರಿಕ ಕಂಪನಿ ಮಾಲಕ ಸಾಲಕ್ಕಾಗಿ 2023ರಲ್ಲಿ ಬೆಂಗಳೂರಿನಲ್ಲಿ ಫೈನಾನ್ಸ್ ಕನ್ಸಲ್‌ಟೆನ್ಸಿ ನಡೆಸಿಕೊಂಡಿರುವ ವಿಮಲೇಶ್ ಎಂಬಾತನ ಮೊರೆ ಹೋಗಿದ್ದ. ಆಗ ವಿಮಲೇಶ್ ರೋಹನ್‌ನನ್ನ ಪರಿಚಯಿಸಿದ್ದ. ಸಾಲ ಕೊಡಿಸೋದಕ್ಕೆ ಒಂದು ಸ್ಟ್ಯಾಂಪ್ ಪೇಪರ್‌ಗೆಂದು

ಸಾಲ ಕೊಡುವುದಾಗಿ 200 ಕೋಟಿ ರೂ. ಗೂ ಅಧಿಕ ವಂಚನೆ Read More »

ಕಾಂಚನ ಹುಂಡೈನಲ್ಲಿ ಮಾನ್ಸೂನ್‌ ಆಫರ್

ಕಾರ್ಕಳ : ಕಾಂಚನ ಹುಂಡೈ ಶೋ ರೂಮ್‌ನಲ್ಲಿ ಗ್ರಾಹಕರಿಗೆ ಮಾನ್ಸೂನ್‌ ಆಫರ್‌ ಪ್ರಾರಂಭವಾಗಿದೆ. ವಾಹನ ಖರೀದಿ ಮೇಲೆ ಭಾರಿ ರಿಯಾಯಿತಿ ಲಭ್ಯವಿದ್ದು, Grand i 10 Nios ನಲ್ಲಿ 80 ಸಾವಿರ ರೂ. ವರೆಗೆ, Aura ಮಾದರಿಯಲ್ಲಿ 55 ಸಾವಿರ ರೂ.ವರೆಗೆ, Exter ಕಾರಿನ ಮೇಲೆ 60 ಸಾವಿರ ರೂ.ವರೆಗೆ, i20 – 70 ಸಾವಿರ ರೂ.ವರೆಗೆ, Venue – 85 ಸಾವಿರ ರೂ.ವರೆಗೆ, Verna – 65 ಸಾವಿರ ರೂ.ವರೆಗೆ ಹಾಗೂ Alcazar – 70

ಕಾಂಚನ ಹುಂಡೈನಲ್ಲಿ ಮಾನ್ಸೂನ್‌ ಆಫರ್ Read More »

ಡ್ರಗ್ಸ್‌ ಜಾಲದ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ – ಡ್ರಗ್‌ ಪೆಡ್ಲರ್ ವೈದ್ಯನ ಬಂಧನ

ಮಧ್ಯ ಪ್ರದೇಶ, ಮಹಾರಾಷ್ಟ್ರದಿಂದ ಮಂಗಳೂರಿಗೆ ಡ್ರಗ್ಸ್ ಪೂರೈಕೆ ಮಂಗಳೂರು : ಡ್ರಗ್ಸ್ ಜಾಲದ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಮಂಗಳೂರು ಪೊಲೀಸರು ಬೀದರ್ ಮೂಲದ ವೈದ್ಯರೊಬ್ಬರನ್ನು ಬಂಧಿಸಿದ್ದಾರೆ. ಪ್ರಸ್ತುತ ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿರುವ ಪ್ರಜ್ವಲ್ ಪೀಣ್ಯಾಸ್ ಬಂಧಿತ ವೈದ್ಯ.ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಿಂದ ಮಂಗಳೂರಿಗೆ ಡ್ರಗ್ಸ್ ಪೂರೈಕೆಯಾಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ವಿದ್ಯಾರ್ಥಿಗಳನ್ನೇ ಗುರಿಯಾಗಿಸಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು ಎಂಬುದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ. ಪ್ರಕರಣ ಸಂಬಂಧಿಸಿದಂತೆ ಮಂಗಳೂರು ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರನ್ನು ತೀವ್ರ ವಿಚಾರಣೆಗೆ

ಡ್ರಗ್ಸ್‌ ಜಾಲದ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ – ಡ್ರಗ್‌ ಪೆಡ್ಲರ್ ವೈದ್ಯನ ಬಂಧನ Read More »

ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು – ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ

ಕಾರ್ಕಳ : ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಇದರ 2025-26 ರ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆಯ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ವಿ. ಸುನಿಲ್ ಕುಮಾರ್, ವಿದ್ಯಾರ್ಥಿಗಳು ಸ್ಕಿಲ್ ಇಂಡಿಯಾ, ಫಿಟ್ ಇಂಡಿಯಾದಂತಹ ಆಶಯಗಳನ್ನು ಮೈಗೂಡಿಸಿಕೊಂಡು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದರು.ರಾಜ್ಯಶಾಸ್ತ್ರ ಉಪನ್ಯಾಸಕ ಜಗದೀಶ್ ನಾಯಕ್ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.‌ ಎಸ್‌ಡಿಎಂಸಿ ಉಪಾಧ್ಯಕ್ಷ ಹರೀಶ್ ಪೂಜಾರಿ, ಉದ್ಯಮಿಗಳಾದ ದಿನೇಶ್ ಪೈ, ಸತೀಶ್ ಪೈ, ಸರಕಾರಿ ಪ್ರಥಮ ದರ್ಜೆ

ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು – ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ Read More »

ಎಸ್‌ಕೆಪಿಎ ಮೂಲ್ಕಿ ವಲಯದ 20ನೇ ವರ್ಷಾಚರಣೆ

ಜನಾಕರ್ಷಿಸಿದ ಕೃಷಿ ಬದುಕಿನ ಸೊಬಗು ಫ್ಯಾಶನ್‌ ಶೋ ಉಡುಪಿ : ಛಾಯಾಚಿತ್ರಗ್ರಾಹಕರಲ್ಲಿ ಉತ್ತಮ ಸಂಘಟನೆಯಿದೆ. ಹೀಗಾಗಿ ವೃತ್ತಿಯೊಂದಿಗೆ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಳ್ಳುವಂತಾಗಿದೆ ಎಂದು ನಟ, ನಿರ್ಮಾಪಕ ಶೋಧನ್‌ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಜು. 10ರಂದು ಕಿನ್ನಿಗೋಳಿ ಪದ್ಮಾವತಿ ಸಭಾಭವನದಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಪರ್ಸ್ ಅಸೋಸಿಯೇಶನ್ ಮೂಲ್ಕಿ ವಲಯದ 20 ನೇ ವರ್ಷಾಚರಣೆ ಸಮಾರೋಪ ಹಾಗೂ ಕೃಷಿ ಬದುಕಿನ ಸೊಬಗು ಫ್ಯಾಶನ್ ಶೋ‌ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕೃಷಿ ಬದುಕಿನ‌ ಸೊಬಗು

ಎಸ್‌ಕೆಪಿಎ ಮೂಲ್ಕಿ ವಲಯದ 20ನೇ ವರ್ಷಾಚರಣೆ Read More »

error: Content is protected !!
Scroll to Top