• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ಮಳೆಗೆ ಭೂಕುಸಿತ – ಇಬ್ಬರು ಮಕ್ಕಳು ಸೇರಿ ಮೂವರ ದುರ್ಮರಣ

ಮಂಗಳೂರು : ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ಮಂಗಳೂರಿನ ನಾಗುರಿ ಎಂಬಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಭೂಕುಸಿತ ಉಂಟಾದ ಪರಿಣಾಮ ಮಣ್ಣು ಕುಸಿದು ಮನೆ ಮೇಲೆ ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಆರು ಜನ ಮಣ್ಣಿನಡಿ ಸಿಲುಕಿಕೊಂಡಿದ್ದರು. ಈ ಪೈಕಿ ಓರ್ವ ಪುರುಷ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಇನ್ನುಳಿದಂತೆ ಓರ್ವ ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು […]

ಮಂಗಳೂರಿನಲ್ಲಿ ಮಳೆಗೆ ಭೂಕುಸಿತ – ಇಬ್ಬರು ಮಕ್ಕಳು ಸೇರಿ ಮೂವರ ದುರ್ಮರಣ Read More »

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು

ಹೆಸರು ಪ್ರಸ್ತಾಪ ಆದ ಕೂಡಲೇ ಎಲ್ಲರೂ ಕ್ರಿಮಿನಲ್ ಅಲ್ಲ – ಪ್ರಿಯಾಂಕ್‌ ಖರ್ಗೆ – ಧರ್ಮಸ್ಥಳ ಸಂಘ ಕೂಡ ಮೈಕ್ರೋ ಫೈನಾನ್ಸ್ ಕಾಯ್ದೆ ಪಾಲಿಸಬೇಕು ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ನಟ ಪ್ರಕಾಶ್‌ ರಾಜ್‌ ಹೆಸರು ತಳುಕು ಹಾಕಿಕೊಂಡಿರುವ ಬಗ್ಗೆ ಗೃಹಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯಿಸಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆಸರು ಪ್ರಸ್ತಾಪ ಆದ ಕೂಡಲೇ ಎಲ್ಲರೂ ಕ್ರಿಮಿನಲ್ ಅಲ್ಲ. ಕೋರ್ಟ್ ಎಸ್‌ಐಟಿ ಚೀಫ್‌ಗೆ ಕೇಳಿದೆ ಅವರು ಉತ್ತರ ಕೊಡಲಿ. ಮಾಧ್ಯಮಗಳಲ್ಲಿ ಚರ್ಚೆ ಮಾಡೋಕೆ ಆಗಲ್ಲ ಎಂದಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು Read More »

ಲಾರಿ-ಕಾರು ಅಪಘಾತ: ಕಾರ್ಕಳ ನಕ್ರೆಯ ಐವರು ಗಂಭೀರ

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ರಾತ್ರಿ ಉಪ್ಪಿನಂಗಡಿಯ ಕೂಟೇಲು ಸಮೀಪ ನಡೆದಿದೆ. ಕಾರ್ಕಳದ ನಕ್ರೆ ಗ್ರಾಮದ ಕುಟುಂಬವೊಂದು ಸುಬ್ರಹ್ಮಣ್ಯಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಡುಗೆ ಅನಿಲ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಚಾಲಕ ದೀಪಕ್ (45) ಗುರುರಾಜ್ (46) ಧನುಷ್ (15) ಭಾರತಿ (48) ಹಾಗೂ ಗೀತಾ (55) ಗಂಭೀರವಾಗಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ತಕ್ಷಣ ರಕ್ಷಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,

ಲಾರಿ-ಕಾರು ಅಪಘಾತ: ಕಾರ್ಕಳ ನಕ್ರೆಯ ಐವರು ಗಂಭೀರ Read More »

61 ದಿನ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ 1986ರನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಉಡುಪಿ ಜಿಲ್ಲೆಯೂ ಸೇರಿದಂತೆ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು/ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂ. 1ರಿಂದ ಜು. 31ರವರೆಗೆ ಅಂದರೆ ಒಟ್ಟು 61 ದಿನಗಳ ನಿಷೇಧ ಹೇರಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10

61 ದಿನ ಯಾಂತ್ರೀಕೃತ ಮೀನುಗಾರಿಕೆ ನಿಷೇಧ Read More »

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮಚಂದ್ರ ಬೈಕಂಪಾಡಿ ನಿಧನ

ಮಂಗಳೂರು: ಹಿರಿಯ ಮೀನುಗಾರ ಮುಖಂಡ, ಪರಿಸರವಾದಿ ಹಾಗೂ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ರಾಮಚಂದ್ರ ಬೈಕಂಪಾಡಿ (75) ಅವರು ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.​ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.​ಮೀನುಗಾರರ ಹಿತರಕ್ಷಣೆ: ಮೊಗವೀರ ಸಮುದಾಯದ ಪ್ರಬಲ ಧ್ವನಿಯಾಗಿದ್ದ ಬೈಕಂಪಾಡಿ ಅವರು ಮೀನುಗಾರರ ಹಕ್ಕುಗಳಿಗಾಗಿ ಹತ್ತಾರು ಹೋರಾಟಗಳನ್ನು ಸಂಘಟಿಸಿದ್ದರು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಮೀನುಗಾರ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮಚಂದ್ರ ಬೈಕಂಪಾಡಿ ನಿಧನ Read More »

ಪಿಯುಸಿ ಫಲಿತಾಂಶ: ರಾಜ್ಯಕ್ಕೆ 9ನೇ ರ‍್ಯಾಂಕ್‌ ಪಡೆದ ಆಳ್ವಾಸ್‌ನ ಶ್ರೇಯಾಂಕ್ ಶೆಟ್ಟಿ

ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಶ್ರೇಯಾಂಕ್ ಆರ್. ಶೆಟ್ಟಿ ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಒಟ್ಟು 600 ಅಂಕಗಳಿಗೆ 592 ಅಂಕಗಳನ್ನು ಗಳಿಸುವ ಮೂಲಕ ಶ್ರೇಯಾಂಕ್ ರಾಜ್ಯಕ್ಕೆ 9ನೇ ರ‍್ಯಾಂಕ್‌ ಪಡೆದು ಕಾಲೇಜಿಗೆ ಹಾಗೂ ಹೆತ್ತವರಿಗೆ ಕೀರ್ತಿ ತಂದಿದ್ದಾರೆ.​ಪ್ರತಿಭಾನ್ವಿತ ಸಾಧಕ:ಬಜೆಗೋಳಿಯ ಉದ್ಯಮಿ ಡಾ. ರವೀಂದ್ರ ಶೆಟ್ಟಿ ಹಾಗೂ ರೂಪಾ ಆರ್. ಶೆಟ್ಟಿ ದಂಪತಿಯ ಪುತ್ರನಾಗಿರುವ ಶ್ರೇಯಾಂಕ್, ಆರಂಭದಿಂದಲೂ ಓದಿನಲ್ಲಿ ಮುಂದಿದ್ದರು. ಪರೀಕ್ಷೆಯ ತಯಾರಿಯ

ಪಿಯುಸಿ ಫಲಿತಾಂಶ: ರಾಜ್ಯಕ್ಕೆ 9ನೇ ರ‍್ಯಾಂಕ್‌ ಪಡೆದ ಆಳ್ವಾಸ್‌ನ ಶ್ರೇಯಾಂಕ್ ಶೆಟ್ಟಿ Read More »

ಕರಾವಳಿಯಲ್ಲಿ ಮುಂದಿನ 3 ದಿನ ಬಿಸಿಲು; ಏಪ್ರಿಲ್ 12ರಂದು ಮಳೆ ಸಾಧ್ಯತೆ

ಕಾರ್ಕಳ: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಮುಂದಿನ ಕೆಲವು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದ್ದು, ಸೆಖೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.​ಮುನ್ಸೂಚನೆಯ ಮುಖ್ಯಾಂಶಗಳು:​ಏಪ್ರಿಲ್ 9 ರಿಂದ 11: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ವಿಪರೀತ ಸೆಖೆ ಹಾಗೂ ಆರ್ದ್ರತೆಯಿಂದ ಕೂಡಿದ ವಾತಾವರಣ ಇರಲಿದೆ.​ಏಪ್ರಿಲ್ 12 (ಭಾನುವಾರ): ಕರಾವಳಿ ಜನತೆಗೆ ತುಸು ಸಮಾಧಾನದ ಸುದ್ದಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು

ಕರಾವಳಿಯಲ್ಲಿ ಮುಂದಿನ 3 ದಿನ ಬಿಸಿಲು; ಏಪ್ರಿಲ್ 12ರಂದು ಮಳೆ ಸಾಧ್ಯತೆ Read More »

ಅನುದಾನ ಕೇಳಿ ಕೇಳಿ ಸಾಕಾಗಿದೆ – ಸದನದಲ್ಲಿ ಅಳಲು ತೋಡಿಕೊಂಡ ಕಾಂಗ್ರೆಸ್‌ ಶಾಸಕ

ಬೆಂಗಳೂರು : ಕಾಂಗ್ರೆಸ್ ಶಾಸಕ ಉದಯ್ ಕದಲೂರ್‌ ಅವರು ಸದನದಲ್ಲಿ ಅನುದಾನಕ್ಕೆ ಬೇಡಿಕೆಯಿಟ್ಟು, ಅನುದಾನವಿಲ್ಲದೇ ಕ್ಷೇತ್ರಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡರು. ಸದನದಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮದ್ದೂರು ಶಾಸಕ ಉದಯ್ ಅವರು ಸಮಾಜ ಕಲ್ಯಾಣ ಇಲಾಖೆಯಿಂದ ಅನುದಾನ ಬಾಕಿ ಇದೆ. ಮದ್ದೂರಿನಲ್ಲಿ ಎಸ್‌ಸಿ ವರ್ಗದ ಜನ ಇರುವ ಪ್ರದೇಶಗಳ ಅಭಿವೃದ್ಧಿಗೆ ಅನುದಾನ ಬೇಕು ಎಂದು ಆಗ್ರಹಿಸಿದರು. ನಮಗೆ ಅನುದಾನ ಕೇಳಿ ಕೇಳಿ ಸಾಕಾಗಿದೆ. ಕಾಲಮಿತಿಯೊಳಗೆ ಅನುದಾನ ಕೊಡಿ ಎಂದು ಮದ್ದೂರು ಶಾಸಕ ಉದಯ್ ಅಳಲು ತೋಡಿಕೊಂಡರು.

ಅನುದಾನ ಕೇಳಿ ಕೇಳಿ ಸಾಕಾಗಿದೆ – ಸದನದಲ್ಲಿ ಅಳಲು ತೋಡಿಕೊಂಡ ಕಾಂಗ್ರೆಸ್‌ ಶಾಸಕ Read More »

ಧರ್ಮಸ್ಥಳ ಲಕ್ಷದೀಪೋತ್ಸವ ಸಂಪನ್ನ – ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನ

ಕನ್ನಡ ಬೆಳೆಸಲು ಬಳಸುವುದೊಂದೇ ದಾರಿ – ವಿಶ್ವೇಶ್ವರ ಭಟ್ ಅಭಿಮತ ಬೆಳ್ತಂಗಡಿ : ಕನ್ನಡ ಬೆಳೆಸಬೇಕಾದರೆ ಕನ್ನಡ ಬಳಸುವುದೊಂದೇ ದಾರಿ ಎಂದು ವಿಶ್ವವಾಣಿ ಪತ್ರಿಕೆ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅಭಿಪ್ರಾಯಪಟ್ಟರು. ಅವರು ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಬುಧವಾರ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕನ್ನಡಕ್ಕೆ ಸ್ವಂತ ಲಿಪಿ ಇದ್ದು ಎಲ್ಲಾ ದೃಷ್ಠಿಯಿಂದಲೂ ಕನ್ನಡ ಅತ್ಯಂತ ಪರಿಪೂರ್ಣ, ಸಮೃದ್ಧ ಹಾಗೂ ಸುಂದರ ಭಾಷೆಯಾಗಿದೆ. ಕನ್ನಡ ಉಳಿಸಬೇಕಾದರೆ ಭಾಷಾ ಶುದ್ಧಿಯೊಂದಿಗೆ ಮನೆಯಲ್ಲಿ ಹಾಗೂ ವ್ಯವಹಾರದಲ್ಲಿ

ಧರ್ಮಸ್ಥಳ ಲಕ್ಷದೀಪೋತ್ಸವ ಸಂಪನ್ನ – ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನ Read More »

ಧರ್ಮಸ್ಥಳ ಪ್ರಕರಣ – ತನಿಖೆಗೆ ಎಸ್‌ಐಟಿ ರಚಿಸಿದ ಸರಕಾರ

ಪ್ರಣವ ಮೊಹಾಂತಿ ನೇತೃತ್ವದಲ್ಲಿ ನಾಲ್ವರು ಐಪಿಎಸ್ ಅಧಿಕಾರಿಗಳ ತಂಡ ಬೆಂಗಳೂರು : ಧರ್ಮಸ್ಥಳ ಅರಣ್ಯ ಪ್ರದೇಶಗಳಲ್ಲಿ ಹಲವು ಶವಗಳನ್ನು ಹೂತಿಡಲಾಗಿದೆ. ಈ ಸಂಬಂಧ ವ್ಯಕ್ತಿಯೋರ್ವ ತಾನೇ ಶವ ಹೂತಿಟ್ಟಿದ್ದೆ ಎಂದು ಪೊಲೀಸರ ಬಳಿ ಹೇಳಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಾಂತಿ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರ್ದೇಶಕ ಎಂ.

ಧರ್ಮಸ್ಥಳ ಪ್ರಕರಣ – ತನಿಖೆಗೆ ಎಸ್‌ಐಟಿ ರಚಿಸಿದ ಸರಕಾರ Read More »

error: Content is protected !!
Scroll to Top