• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಅಪಘಾತ

ಅಜೆಕಾರು : ಸ್ಕೂಟರ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ – ಗಂಭೀರ ಗಾಯಗೊಂಡಿದ್ದ ಸವಾರ ಸಾವು

ಅಜೆಕಾರು : ಸ್ಕೂಟರ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡಿದ್ದ ಸವಾರ ಸಾವನಪ್ಪಿದ ಘಟನೆ ಫೆ.13ರಂದು ಸಂಭವಿಸಿದೆ. ಶಯನ್ ನಾಯಕ್(22) ಎಂಬಾತನು ಫೆ. 11ರಂದು ರಾತ್ರಿ ಕಾರ್ಕಳ ಕಡೆಯಿಂದ ಅಂಡಾರು ಕಡೆಗೆ ತನ್ನ ಹೋಂಡಾ ಸ್ಕೂಟರಿನಲ್ಲಿ ಹೋಗುತ್ತಿರುವಾಗ ರಾತ್ರಿ 1:20 ಗಂಟೆಗೆ ಮರ್ಣೆ ಗ್ರಾಮದ ಕೊಂಬಗುಡ್ಡೆಯ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ಶಯನ್ ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಚಿಕಿತ್ಸೆಗಾಗಿ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು,

ಅಜೆಕಾರು : ಸ್ಕೂಟರ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ – ಗಂಭೀರ ಗಾಯಗೊಂಡಿದ್ದ ಸವಾರ ಸಾವು Read More »

ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆಸೆಯಲ್ಪಟ್ಟ ಮಹಿಳೆ ಸಾವು

ಮಂಗಳೂರು: ಚಲಿಸುತ್ತಿರುವ ಬಸ್ಸಿನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ದುರ್ಮರಣಕ್ಕೀಡಾದ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಇಂದು ನಡೆದಿದೆ. ಉಪ್ಪಿನಂಗಡಿಯ ನಿನ್ನಿಕಲ್ ನಿವಾಸಿ ರಾಧ(66) ಮೃತ ಮಹಿಳೆ. ಇವರು ಬಸ್‍ನಿಂದ ಹೊರಗೆಸೆಯಲ್ಪಟ್ಟ ದೃಶ್ಯ ಬಸ್ಸಿನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಮಗುವನ್ನು ಹಿಡಿದುಕೊಂಡು ಮಹಿಳೆಯೊಬ್ಬರು ಬಸ್ ಹತ್ತಿದ್ದರು. ರಾಧಾ ಆ ಮಹಿಳೆಗೆ ಸೀಟು ಬಿಟ್ಟುಕೊಟ್ಟು ಮುಂದಿನ ಬಾಗಿಲ ಬಳಿ ಬಸ್ಸಿನ ಸರಳು ಹಿಡಿದುಕೊಂಡು ನಿಂತಿದ್ದರು. ಈ ವೇಳೆ ಕೈ ಜಾರಿ ರಾಧಾ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟಿದ್ದಾರೆ.ರಸ್ತೆಗೆ ಬಿದ್ದು ಗಂಭೀರ

ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆಸೆಯಲ್ಪಟ್ಟ ಮಹಿಳೆ ಸಾವು Read More »

ಮಾಳ : ಕಾರು ಕಂದಕಕ್ಕೆ ಉರುಳಿ ನಾಲ್ವರಿಗೆ ಗಾಯ

ಕಾರ್ಕಳ : ಮಾಳಗೇಟ್ ಹತ್ತಿರ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಕಂದಕಕ್ಕೆ ನುಗ್ಗಿದ ಘಟನೆಯಲ್ಲಿ ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಜ. 28ರಂದು ಹೊರನಾಡಿನಿಂದ ಮಂಗಳೂರಿನತ್ತ ಹೋಗುತ್ತಿದ್ದ ಇನ್ನೋವಾ ಕಾರು ಮಾಳಗೇಟ್‌ನ ಬಳಿ ಎಸ್.ಕೆ ಬೋರ್ಡರ್‌ನಲ್ಲಿ ಅವಘಡಕ್ಕೊಳಗಾಗಿದೆ.ಮಂಗಳೂರು ಅಶೋಕ್ ನಗರದ ಪುಷ್ಪಾವತಿ, ದಯಾನಂದ, ಶರ್ಮಿಳಾ, ಮೌನೀಶ್ ಗಾಯಗೊಂಡವರು. 108 ಅಂಬುಲೆನ್ಸ್ ಸಿಬ್ಬಂದಿ ಗಾಯಾಳುಗಳನ್ನು ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಾಳ : ಕಾರು ಕಂದಕಕ್ಕೆ ಉರುಳಿ ನಾಲ್ವರಿಗೆ ಗಾಯ Read More »

ಹೆಬ್ರಿ : ಸರಕಾರಿ ಬಸ್‌ಗೆ ಕಾರು ಡಿಕ್ಕಿ : ಮಹಿಳೆ ಸಾವು

ಹೆಬ್ರಿ : ಸರಕಾರಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಜ. 28ರಂದು ಹೆಬ್ರಿಯ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿಯಲ್ಲಿ ಸಂಭವಿಸಿದೆ.ಶ್ರೀಕಾಂತ್ ಎಂಬುವರು ಹೆಬ್ರಿ ಕಡೆಯಿಂದ ಆಗುಂಬೆ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಇನೋವಾ ಕಾರು ಮುಂದಿನಿಂದ ಹೋಗುತ್ತಿದ್ದ ರಿಕ್ಷಾವನ್ನು ಹಿಂದಿಕ್ಕುವಾಗ ರಿಕ್ಷಾದ ಬಲಬಾಗಕ್ಕೆ ಡಿಕ್ಕಿ ಹೊಡೆದು ತನ್ನ ಎದುರಿನಿಂದ ಬರುತ್ತಿದ್ದ ಸರಕಾರಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶಾಂತಮ್ಮ (77) ತೀವ್ರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ

ಹೆಬ್ರಿ : ಸರಕಾರಿ ಬಸ್‌ಗೆ ಕಾರು ಡಿಕ್ಕಿ : ಮಹಿಳೆ ಸಾವು Read More »

ಟ್ರ್ಯಾಕ್ಟರ್‌ಗೆ ಶಾಲಾ ಬಸ್‌ ಡಿಕ್ಕಿ : ನಾಲ್ವರು ವಿದ್ಯಾರ್ಥಿಗಳು ಸಾವು

ಬಾಗಲಕೋಟೆ: ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಡಿಕ್ಕಿಯಾಗಿ ಓರ್ವ ವಿದ್ಯಾರ್ಥಿನಿ ಸೇರಿ ನಾಲ್ವರು ವಿದ್ಯಾರ್ಥಿಗಳು ಮೃಪಟ್ಟಿರುವ ಘಟನೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ಮಧ್ಯರಾತ್ರಿ 12 ಗಂಟೆ ವೇಳೆಗೆ ಸಂಭವಿಸಿದೆ. ಎಂಟಕ್ಕೂ ಅಧಿಕ ಮಕ್ಕಳಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸಾಗರ ಕಡಕೋಳ (17), ಶ್ವೇತಾ (13), ಗೋವಿಂದ (13), ಬಸವರಾಜ (17) ಮೃತ ದುರ್ದೈವಿಗಳು. ಮೃತ ವಿದ್ಯಾರ್ಥಿಗಳು ಕವಟಗಿ ಗ್ರಾಮದ ಮೂಲದವರು ಎಂದು ತಿಳಿದು ಬಂದಿದೆ. ಆಲಗೂರು ಗ್ರಾಮದ ಬಳಿ ಇರುವ ಶ್ರೀ

ಟ್ರ್ಯಾಕ್ಟರ್‌ಗೆ ಶಾಲಾ ಬಸ್‌ ಡಿಕ್ಕಿ : ನಾಲ್ವರು ವಿದ್ಯಾರ್ಥಿಗಳು ಸಾವು Read More »

ಬೆಳ್ತಂಗಡಿ – ಸುಡುಮದ್ದು ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ – ಮೂವರು ಕಾರ್ಮಿಕರ ದುರ್ಮರಣ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ‌ ಗ್ರಾ. ಪಂ. ವ್ಯಾಪ್ತಿಯ ಸುಡುಮದ್ದು ತಯಾರಿಕಾ ಘಟಕದಲ್ಲಿ ಭಾರಿ ಸ್ಫೋಟ ಸಂಭವಿಸಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಜ. 28 ರಂದು ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮೃತಪಟ್ಟಿರುವ ಕಾರ್ಮಿಕರ ದೇಹಗಳು ಛಿದ್ರಛಿದ್ರಗೊಂಡಿವೆ. ಸಂಜೆ 5.30ಗಂಟೆ ಸುಮಾರಿಗೆ ಬಶೀರ್ ಎಂಬವರ ಸಾಲಿಡ್ ಫೈರ್ ವರ್ಕ್ ಎಂಬ ಪಟಾಕಿ ಶೇಖರಣಾ ಘಟಕದಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ಸ್ಫೋಟದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರೆ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾನೆ.

ಬೆಳ್ತಂಗಡಿ – ಸುಡುಮದ್ದು ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ – ಮೂವರು ಕಾರ್ಮಿಕರ ದುರ್ಮರಣ Read More »

ಬೈಕ್‌ಗೆ ಟಿಪ್ಪರ್‌ ಡಿಕ್ಕಿ – ಸವಾರರಿಗೆ ಗಾಯ

ಕಾರ್ಕಳ : ಬೈಕ್‌ಗೆ ಟಿಪ್ಪರ್‌ ಡಿಕ್ಕಿ ಹೊಡೆದ ಸವಾರರಿಬ್ಬರು ಗಾಯಗೊಂಡ ಘಟನೆ ಜ. 26ರಂದು ಮುಂಡ್ಕೂರಿನಲ್ಲಿ ಸಂಭವಿಸಿದೆ. ಬೆಳ್ಮಣ್‌ ಕಡೆಯಿಂದ ಮುಂಡ್ಕೂರು ಕಡೆಗೆ ಬರುತ್ತಿದ್ದ ಟಿಪ್ಪರ್ ಇಂದಿರಾ ನಗರ ಗರಡಿ ಎಂಬಲ್ಲಿ ಹಾದು ಹೋಗಿರುವ ಅತ್ರಾಡಿ – ಮಂಗಳೂರು ರಾಜ್ಯ ಹೆದ್ದಾರಿಯಲ್ಲಿ, ಮುಂಡ್ಕೂರು ಕಡೆಯಿಂದ ಬೆಳ್ಮಣ್ ಕಡೆಗೆ ಅಶ್ವಿನ್‌ ಎಂಬುವವರು ಆದೇಶ್‌ ಎಂಬುವವರನ್ನು ಸಹಸವಾರನನ್ನಾಗಿ ಕುಳ್ಳಿರಿಸಿಕೊಂಡು ಸವಾರಿ ಮಾಡುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸವಾರಿಬ್ಬರು ಗಾಯಗೊಂಡಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

ಬೈಕ್‌ಗೆ ಟಿಪ್ಪರ್‌ ಡಿಕ್ಕಿ – ಸವಾರರಿಗೆ ಗಾಯ Read More »

ಕಾರುಗಳ ನಡುವೆ ಅಪಘಾತ : ಮಹಿಳೆ ಸಾವು

ಕಾರ್ಕಳ : ಕಾರುಗಳ ನಡುವೆ ಅಪಘಾತ ಉಂಟಾದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ನಂದಳಿಕೆ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಜ. 25ರ ಸಂಜೆ ಸಂಭವಿಸಿದೆ. ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ಕಾರ್ಕಳ ಕಡೆಯಿಂದ ಬೆಳ್ಮಣ್ ಕಡೆಗೆ ಸಾಗುತ್ತಿದ್ದ ಕಾರು, ಬೆಳ್ಮಣ್ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕಾರಿನ ಬಲ ಬದಿಯ ಡೋರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮರಿಯಾ ಎಂಬವರು ಗಾಯಗೊಂಡಿದ್ದರು. ಗಾಯಾಳು ಮರಿಯ ಫೆರ್ನಾಂಡೀಸ್ (60) ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ

ಕಾರುಗಳ ನಡುವೆ ಅಪಘಾತ : ಮಹಿಳೆ ಸಾವು Read More »

ಹೆಬ್ರಿ : ಬೈಕ್‌ ಪಲ್ಟಿ – ಮಗುವಿಗೆ ಗಂಭೀರ ಗಾಯ

ಹೆಬ್ರಿ : ಬೈಕ್‌ ಪಲ್ಟಿಯಾಗಿ 4 ವರ್ಷದ ಮಗು ಗಂಭೀರವಾಗಿ ಗಾಯಗೊಂಡ ಘಟನೆ ಮುದ್ರಾಡಿ ಸಮೀಪ ಎಳ್ಳಾರೆ ಚಟ್ಕಲ್‌ಪಾದೆಯಲ್ಲಿ ಜ. 21ರಂದು ಸಂಭವಿಸಿದೆ. ಮುದ್ರಾಡಿಯ ಸುಕನ್ಯಾ ಎಂಬವರು ಮಗ ಶೌರ್ಯನ ಜತೆಗೆ ರವಿಚಂದ್ರ ಎಂಬವರ ಬೈಕಿನಲ್ಲಿ ಮುದ್ರಾಡಿ ಕಡೆ ಹೋಗುತ್ತಿರುವಾಗ ನಿಯಂತ್ರಣ ಬೈಕ್‌ ಪಲ್ಟಿಯಾಗಿದೆ. ಸವಾರ ರವಿಚಂದ್ರ ಮತ್ತು ಸುಕನ್ಯಾ ಅವರಿಗೂ ಸಣ್ಣಪುಟ್ಟ ಗಾಯವಾಗಿದೆ. ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ರಿ : ಬೈಕ್‌ ಪಲ್ಟಿ – ಮಗುವಿಗೆ ಗಂಭೀರ ಗಾಯ Read More »

ರಸ್ತೆ ಕ್ರಾಸ್‌ ಮಾಡಲು ನಿಲ್ಲಿಸಿದ್ದ ರಿಕ್ಷಾಕ್ಕೆ ಆ್ಯಂಬುಲೆನ್ಸ್ ಡಿಕ್ಕಿ

ಹೆಬ್ರಿ : ರಸ್ತೆ ಕ್ರಾಸ್‌ ಮಾಡಲು ನಿಲ್ಲಿಸಿದ್ದ ರಿಕ್ಷಾಕ್ಕೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಘಟನೆ ಜ. 20ರಂದು ಹೆಬ್ರಿ ಜಂಕ್ಷನ್‌ನಲ್ಲಿ ಸಂಭವಿಸಿದೆ. ರಮೇಶ ಎಂಬವರು ರಿಕ್ಷಾದಲ್ಲಿ ಮುದ್ರಾಡಿ ಕಡೆಯಿಂದ ಕುಚ್ಚೂರು ಕಡೆಗೆ ಹೋಗುತ್ತಿದ್ದಾಗ ಹೆಬ್ರಿ ಜಂಕ್ಷನ್ ಬಳಿ ಉಡುಪಿ-ಶಿವಮೊಗ್ಗ ರಸ್ತೆಯಲ್ಲಿ ರಸ್ತೆ ಕ್ರಾಸ್‌ ಮಾಡಲು ನಿಲ್ಲಿಸಿದಾಗ ಮಹಮ್ಮದ್ ರಫೀಕ್ ಎಂಬವರು ಉಡುಪಿ ಕಡೆಯಿಂದ ಶಿವಮೊಗ್ಗ ಕಡೆಗೆ ಚಲಾಯಿಸಿಕೊಂಡು ಬಂದ ಆ್ಯಂಬುಲೆನ್ಸ್ ರಿಕ್ಷಾದ ಎಡಭಾಗಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ರಿಕ್ಷಾ ಮತ್ತು ಆ್ಯಂಬುಲೆನ್ಸ್ ಪಲ್ಟಿಯಾಗಿದ್ದು, ಆ್ಯಂಬುಲೆನ್ಸ್‌ನಲ್ಲಿದ್ದ ಸಹ ಪ್ರಯಾಣಿಕ

ರಸ್ತೆ ಕ್ರಾಸ್‌ ಮಾಡಲು ನಿಲ್ಲಿಸಿದ್ದ ರಿಕ್ಷಾಕ್ಕೆ ಆ್ಯಂಬುಲೆನ್ಸ್ ಡಿಕ್ಕಿ Read More »

error: Content is protected !!
Scroll to Top